ರಂಗ ಕಲಾವಿದರಿದ್ದ ಮಿನಿ ಬಸ್​ ಅಪಘಾತ; ಗೂಗಲ್​ ಮ್ಯಾಪ್​ ಎಡವಟ್ಟಿಗೆ ಇಬ್ಬರ ಬಲಿ

Bus 1
Spread the love

ನ್ಯೂಸ್ ಆ್ಯರೋ: ರಂಗಭೂಮಿ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿಬಸ್​ವೊಂದು ಕಣ್ಣೂರಿನ ಸಮೀಪದ ಕೆಲಕಮ್​ ಬಳಿ ಅಪಘಾತಕ್ಕೆ ಒಳಗಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ ಮೋಹನ್​ ಸಾವನ್ನಪ್ಪಿರುವ ದುರ್ದೈವಿಗಳು.

ಈ ಇಬ್ಬರು ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಶಬ್ಧ ಕೇಳಿದ ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.

Accident 24

ಮಿನಿ ಬಸ್​ ಚಾಲಕ ಗೂಗಲ್ ಮ್ಯಾಪ್​ ಸಹಾಯದಿಂದ ಬಸ್​ ಚಲಾಯಿಸುತ್ತಿದ್ದರು. ರಸ್ತೆ ಮಾರ್ಗ ಕಡಿದಾಗಿದ್ದರಿಂದ ಅನಾಹುತ ನಡೆದಿದೆ. ಶುಕ್ರವಾರ ಬೆಳಗ್ಗೆ 4 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಯಂಕುಮಂ ದೇವ ಕಮ್ಯೂನಿಕೇಷನ್​ ರಂಗಭೂಮಿ ಗುಂಪು ಕಡನ್ನಪಲ್ಲಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಬಸ್ ವಯನಾಡ್‌ನ ಸುಲ್ತಾನ್​ ಬಥೇರಿ ಕಡೆ ಸಾಗುತ್ತಿತ್ತು. ಪೆರಿಯಾ ಚೂರ್ಮದ ನೆಡುಂಪೊಲ್ಲಿ- ವಾಡಿ ರಸ್ತೆ ಬಂದ್​ ಆಗಿದ್ದ ಕಾರಣ ಕೊಟ್ಟಿಯೂರು ಬಾಯ್ಸ್​ ಟೌನ್​ ರಸ್ತೆ ಮಾರ್ಗವಾಗಿ ಕೆಲಕಮ್​ ಪರ್ಯಾಯ ಮಾರ್ಗವನ್ನು ಮ್ಯಾಪ್​ ತೋರಿಸಿದೆ. ಮಲಯಂಪಡಿಯಲ್ಲಿ ಕಡಿದಾದ ಎಸ್​ ತಿರುಗಳಿಂದಾಗಿ ಮಿನಿ ಬಸ್​ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರನ್ನು ಕಾಯಂಕುಲಂನ ಉನ್ನಿ, ಉಮೇಶ್​, ಸುರೇಶ್​ ಮತ್ತು ಶಿಬು, ಎರ್ನಾಕುಲಂನ ಬಿಂಧು, ಕಲ್ಲುವತುಕ್ಕಲ್​ನ ಚೆಲ್ಲಪ್ಪನ್​ ಮತ್ತು ಕೊಲ್ಲಂನ ಶ್ಯಾಮ್​ ಹಾಗೂ ಅಥಿರುಂಗಲ್​ನ ಸುಭಾಶ್​ ಎಂದು ಗುರುತಿಸಲಾಗಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!