ಬ್ಯಾಂಕ್ ಉದ್ಯೋಗಿಗಳ ಬಹುದಿನದ ಬೇಡಿಕೆ ಈಡೇರುವ ಸಾಧ್ಯತೆ : ವಾರದಲ್ಲಿ 2 ದಿನ ರಜಾ ಭಾಗ್ಯ, ಉಳಿದ ದಿನ ಹೆಚ್ಚುವರಿ ಕೆಲಸದ ಒತ್ತಡ

ಬ್ಯಾಂಕ್ ಉದ್ಯೋಗಿಗಳ ಬಹುದಿನದ ಬೇಡಿಕೆ ಈಡೇರುವ ಸಾಧ್ಯತೆ : ವಾರದಲ್ಲಿ 2 ದಿನ ರಜಾ ಭಾಗ್ಯ, ಉಳಿದ ದಿನ ಹೆಚ್ಚುವರಿ ಕೆಲಸದ ಒತ್ತಡ

ನ್ಯೂಸ್‌ ಆ್ಯರೋ : ಬ್ಯಾಂಕ್ ಉದ್ಯೋಗಿಗಳು ವಾರದಲ್ಲಿ ಭಾನುವಾರದ ರಜೆ ಹಾಗೂ ತಿಂಗಳಲ್ಲಿ ಎರಡು ಶನಿವಾರದ ರಜೆ ಸೌಲಭ್ಯ ಹೊಂದಿದ್ದಾರೆ. ಈಗ ಹೊಸ ಸೌಲಭ್ಯ ಜಾರಿಯಾದಲ್ಲಿ ಭಾನುವಾರದ ಜೊತೆಗೆ ಶನಿವಾರವೂ ರಜಾ ದಿನವಾಗಿ ಪಡೆಯಲಿದ್ದಾರೆ.

ವಾರದಲ್ಲಿ ಎರಡು ದಿನ ವಾರದ ರಜೆ ಸಿಗಬೇಕೆಂಬ ಬ್ಯಾಂಕ್ ಉದ್ಯೋಗಿಗಳ ಬಹುದಿನದ ಬೇಡಿಕೆ ಈಡೇರುವ ಸಾಧ್ಯತೆ ಇದೆ. ಬ್ಯಾಂಕ್ ಒಕ್ಕೂಟದ ಒತ್ತಾಯಕ್ಕೆ ಮಣಿದು ಭಾರತೀಯ ಬ್ಯಾಂಕುಗಳ ಸಂಘ ಐದು ದಿನಗಳ ವಾರದ ಕೆಲಸಕ್ಕೆ ಅನುಮೋದನೆ ಕೊಡಬಹುದು ಎಂದು ವರದಿಗಳು ಹೇಳುತ್ತಿವೆ. ಸದ್ಯ ಬ್ಯಾಂಕ್ ಉದ್ಯೋಗಿಗಳು ತಿಂಗಳಲ್ಲಿ ಪ್ರತಿ ಭಾನುವಾರ ಹಾಗೂ 2ನೇ ಹಾಗೂ 4ನೇ ಶನಿವಾರ ರಜೆ ಪಡೆಯುತ್ತಿದ್ದಾರೆ.

ವಾರದಲ್ಲಿ ಐದು ದಿನ ಕೆಲಸ ಮಾಡುವ ನಿಯಮ ಜಾರಿಗೆ ಬಂದಲ್ಲಿ ಬ್ಯಾಂಕ್ ಉದ್ಯೋಗಿಗಳು ಕೆಲಸದ ದಿನಗಳಲ್ಲಿ ಹೆಚ್ಚು ಹೊತ್ತು ಕೆಲಸ ಮಾಡಬೇಕಾಗಬಹುದು. ವರದಿಗಳ ಪ್ರಕಾರ, ಕೆಲಸದ ದಿನದಲ್ಲಿ 40 ಅಥವಾ 50 ನಿಮಿಷಗಳಷ್ಟು ಹೆಚ್ಚಿಗೆ ಕಾಲ ನೌಕರರು ಕೆಲಸ ಮಾಡಬೇಕೆನ್ನುವ ನಿಯಮ ರೂಪಿಸುವ ಸಾಧ್ಯತೆ ಇದೆ.

ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಈ ಪ್ರಸ್ತಾವ ರೂಪಿಸಿದೆ ಎಂದು ಹೇಳಲಾಗುತ್ತಿದೆ. ಸರ್ಕಾರ ಮತ್ತು ಆರ್​ಬಿಐನಿಂದ ಈ ಪ್ರಸ್ತಾವಕ್ಕೆ ಅನುಮೋದನೆ ದೊರೆಯಬೇಕು. ಬಳಿಕ ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ ಬಳಿಕ ಬ್ಯಾಂಕ್ ನೌಕರರಿಗೆ ವಾರದಲ್ಲಿ ಭಾನುವಾರ ಮತ್ತು ಶನಿವಾರ ಎರಡು ದಿನಗಳು ರಜಾದಿನವಾಗಿ ಸಿಗುತ್ತವೆ.

ಬ್ಯಾಂಕ್ ಉದ್ಯೋಗಿಗಳಿಗೆ ಸಾಮಾನ್ಯವಾಗಿ ಬಹಳಷ್ಟು ಇತರೆ ರಜೆಗಳೂ ಲಭ್ಯವಾಗುತ್ತವೆ. ಸಾರ್ವತ್ರಿಕ ರಜೆಗಳ ಜೊತೆಗೆ ಪ್ರಾದೇಶಿಕ ರಜೆಗಳೂ ಅವರಿಗೆ ಸಿಗುತ್ತವೆ. ಈ ಮಾರ್ಚ್ ತಿಂಗಳಲ್ಲಿ ವಾರದ ರಜೆಯೂ ಸೇರಿ ಬ್ಯಾಂಕ್ ನೌಕರರಿಗೆ 12 ರಜಾ ದಿನಗಳಿವೆ.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *