ನಾಲ್ಕು ದಿನ ಬ್ಯಾಂಕ್‌ ವ್ಯವಹಾರ ಬಂದ್: ಎಟಿಎಂನಲ್ಲೂ ಹಣ ಇರುವುದು ಡೌನ್, ಈಗಲೇ ಪ್ಲಾನ್ ಮಾಡಿ ವ್ಯವಹಾರ ಮುಗಿಸಿ

ನಾಲ್ಕು ದಿನ ಬ್ಯಾಂಕ್‌ ವ್ಯವಹಾರ ಬಂದ್: ಎಟಿಎಂನಲ್ಲೂ ಹಣ ಇರುವುದು ಡೌನ್, ಈಗಲೇ ಪ್ಲಾನ್ ಮಾಡಿ ವ್ಯವಹಾರ ಮುಗಿಸಿ

ನ್ಯೂಸ್ ಆ್ಯರೋ: ಈ ತಿಂಗಳ ಕೊನೆಯ ಎರಡು ದಿನ ಸಾರ್ವಜನಿಕ ರಜೆಗಳಿದ್ದು, ಇನ್ನೆರಡು ದಿನ ಬ್ಯಾಂಕ್ ಮುಷ್ಕರ ನಡೆಸಲು ನಿರ್ಧರಿಸಿದ ಹಿನ್ನೆಲೆ ನಾಲ್ಕು ದಿನ ಬ್ಯಾಂಕ್‌ಗಳಲ್ಲಿ ವ್ಯವಹಾರಗಳಿಗೆ ರಜೆ ಇರಲಿದ್ದು, ಗ್ರಾಹಕರು ಬ್ಯಾಂಕ್ ವ್ಯವಹಾರಕ್ಕೆ ಸಮಯವನ್ನು ಹೊಂದಿಸಿಕೊಳ್ಳುವುದು ಅನಿವಾರ್ಯವಾಗಿದೆ.

ಜನವರಿ 28 ರಿಂದ ಜನವರಿ 31 ರವರೆಗೆ ಬ್ಯಾಂಕಿಂಗ್ ಕೆಲಸವನ್ನು ನಿಭಾಯಿಸುವಲ್ಲಿ ನಿಮಗೆ ಅಡಚಣೆಗಳು ಎದುರಾಗುವ ಸಾಧ್ಯತೆ ಇದೆ. ಎರಡು ದಿನ ಸಾರ್ವಜನಿಕ ರಜೆಗಳಿದ್ದು, ಇನ್ನೆರಡು ದಿನ ಬ್ಯಾಂಕ್ ಯೂನಿಯನ್ ಮುಷ್ಕರ ನಡೆಸಲು ನಿರ್ಧರಿಸಿದೆ. ಇದರಿಂದ ನಾಲ್ಕು ದಿನ ಬ್ಯಾಂಕ್ ವ್ಯವಹಾರಗಳು ನಡೆಯುವುದು ಕಷ್ಟಕರವಾಗಿದೆ.

ಜನವರಿ 28 ರಂದು ತಿಂಗಳ ನಾಲ್ಕನೇ ಶನಿವಾರ, ಈ ಕಾರಣದಿಂದಾಗಿ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ಇದರ ಬೆನ್ನಲ್ಲೇ ಭಾನುವಾರದ ಕಾರಣ ಜನವರಿ 29 ರಂದು ದೇಶಾದ್ಯಂತ ಬ್ಯಾಂಕುಗಳಿಗೆ ಸಾರ್ವಜನಿಕ ರಜಾದಿನ ಇರಲಿದೆ. ಇದೆಲ್ಲದರ ಹೊರತಾಗಿ ಬ್ಯಾಂಕ್ ಯೂನಿಯನ್ ಜನವರಿ 30 ಮತ್ತು 31 ರಂದು ಮುಷ್ಕರವನ್ನು ಘೋಷಿಸಿದೆ. ಇದರಿಂದ ನಾಲ್ಕು ದಿನ ಗ್ರಾಹಕರು ತೊಂದರೆ ಅನುಭವಿಸಬೇಕಾಗಬಹುದು.

ಎರಡು ದಿನ ಬೇಡಿಕೆ ಈಡೇರಿಕೆಗೆ ಮುಷ್ಕರ:ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಸಭೆಯಲ್ಲಿ ಎರಡು ದಿನ ಮುಷ್ಕರ ನಡೆಸಲು ಬ್ಯಾಂಕ್ ಒಕ್ಕೂಟಗಳು ನಿರ್ಧರಿಸಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಬ್ಯಾಂಕ್ ಒಕ್ಕೂಟಗಳು ಮುಷ್ಕರ ನಡೆಸುತ್ತಿವೆ.

ಏನೆಲ್ಲ ಸಮಸ್ಯೆ ಎದುರಾಗಬಹುದು: ಎಟಿಎಂನಲ್ಲಿ ಹಣ ಖಾಲಿಯಾಗುವ ಸಮಸ್ಯೆ ತಲೆದೋರಬಹುದು. ಇದರೊಂದಿಗೆ, ಚೆಕ್ ಕ್ಲಿಯರೆನ್ಸ್ ಬಗ್ಗೆಯೂ ಸಮಸ್ಯೆಗಳಿರಬಹುದು ಎಂಬುದು ಅಂದಾಜಿಸಲಾಗಿದೆ.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *