2 ಸಾವಿರ ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದೇಕೆ ಗೊತ್ತಾ? – ಮತ್ತೆ 1 ಸಾವಿರ ರೂಪಾಯಿ ನೋಟು ಚಾಲ್ತಿಗೆ ಬರುತ್ತಾ?

2 ಸಾವಿರ ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದೇಕೆ ಗೊತ್ತಾ? – ಮತ್ತೆ 1 ಸಾವಿರ ರೂಪಾಯಿ ನೋಟು ಚಾಲ್ತಿಗೆ ಬರುತ್ತಾ?

ನ್ಯೂಸ್ ಆ್ಯರೋ‌ : ಇತ್ತೀಚೆಗೆ ಆರ್‌ಬಿಐ 2 ಸಾವಿರ ಮುಖ ಬೆಲೆಯ ನೋಟುಗಳನ್ನು ಅಮಾನ್ಯ ಮಾಡುವುದಾಗಿ ಘೋಷಿಸಿದೆ. ಸೆ. 30ರ ವರೆಗೆ ನೋಟು ಬದಲಾಯಿಸಲು ಅವಕಾಶ ನೀಡಿದೆ. ಇದರ ಬೆನ್ನಲ್ಲೇ ಈ ಹಿಂದೆ ಬ್ಯಾನ್ ಆಗಿದ್ದ 1 ಸಾವಿರ ಮುಖಬೆಲೆಯ ನೋಟು ಮತ್ತೆ ಚಾಲ್ತಿಗೆ ಬರುತ್ತಿದೆ ಎನ್ನುವ ಸುದ್ದಿ ಹಬ್ಬಿದೆ. ಈ ಬಗ್ಗೆ ಸ್ಪಷ್ಟನೆ ನಿಡಿದ ಆರ್‌ಬಿಐ ಅಂತಹ ಸಾಧ್ಯತೆಯನ್ನು ತಳ್ಳಿ ಹಾಕಿದೆ.

ಆರ್‌ಬಿಐ ಗವರ್ನರ್ ಏನು ಹೇಳುತ್ತಾರೆ?

ನೋಟು ಹಿಂಪಡೆಯುವಿಕೆಯಿಂದ ಆರ್ಥಿಕ ನಷ್ಟ, ಅಂತಾರಾಷ್ಟ್ರೀಯ ವ್ಯವಹಾರಕ್ಕೆ ಅಡಚಣೆ ಮುಂತಾದ ಸಮಸ್ಯೆ ಉಂಟಾಗುತ್ತದೆ ಎನ್ನುವ ರೀತಿಯ ಚರ್ಚೆ ನಡೆಯುತ್ತಿದೆ. ಇದು ಸತ್ಯಕ್ಕೆ ದೂರವಾದುದು. ಮುಖಬೆಲೆ ಕಮ್ಮಿಯಾದರೆ ವ್ಯವಹಾರಕ್ಕೆ ತೊಂದರೆಯಾಗುವುದಿಲ್ಲ. ನೋಟು ಹಿಂಪಡೆಯುವಿಕೆ ಆರ್ಥಿಕ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಲಾರದು. ಜನರ ವ್ಯವಹಾರಕ್ಕೆ ಮುಖಬೆಲೆ ಅಧಿಕ ಇರುವ ನೋಟಿನ ಅಗತ್ಯವೇ ಬೇಕೆಂದಿಲ್ಲ. ಹಾಗಾಗಿ ಸಾವಿರದ ನೋಟು ಪುನಃ ಚಾಲ್ತಿಗೆ ಬರುವುದಿಲ್ಲ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ವಿವರಿಸಿದ್ದಾರೆ.

2 ಸಾವಿರ ನೋಟಿನ ಪೈಕಿ ಬ್ಯಾಂಕ್ ನಲ್ಲಿ ಒಮ್ಮೆ 10 ನೋಟನ್ನು ಮಾತ್ರ ಕಾನೂನಾತ್ಮಕ ರೀತಿಯಲ್ಲಿ ಬದಲಾಯಿಸಬಹುದಾಗಿದ್ದು ಅದಕ್ಕಿಂತ ಹೆಚ್ಚಿನ ಹಣ ಇದ್ದವರು ಎಫ್.ಡಿ. ಮಾಡಿ ಉಳಿಸಿಕೊಳ್ಳಬಹುದು ಎಂದು ಆರ್‌ಬಿಐ ಸೂಚಿಸಿದೆ.

ನೋಟು ಹಿಂಪಡೆಯಲು ಕಾರಣವೇನು?

2 ಸಾವಿರ ಮುಖಬೆಲೆಯ ನೋಟುಗಳಲ್ಲಿ ಹೆಚ್ಚಿನವು ಮಾರ್ಚ್ 2017ಕ್ಕಿಂತ ಮೊದಲು ಬಿಡುಗಡೆಯಾಗಿವೆ. ಇತರ ಮುಖಬೆಲೆಯ ನೋಟುಗಳು ಪ್ರಸ್ತುತ ದೇಶದ ಜನರ ಅಗತ್ಯಗಳನ್ನು ಪೂರೈಸಲು ಸಾಕಾಗುತ್ತದೆ. ಈ ಕಾರಣಕ್ಕಾಗಿಯೇ 2 ಸಾವಿರ ಮುಖಬೆಲೆಯ ನೋಟುಗಳನ್ನು ‘ಕ್ಲೀನ್ ನೋಟ್ ಪಾಲಿಸಿ’ ಪ್ರಕಾರ ಚಲಾವಣೆಯಿಂದ ಹಿಂಪಡೆಯಲಾಗುತ್ತಿದೆ (ಗುಣಮಟ್ಟದ ನೋಟುಗಳನ್ನು ಚಲಾವಣೆಯಲ್ಲಿಡಲು ಆರ್‌ಬಿಐ ಅನುಸರಿಸುವ ನೀತಿಯೇ ‘ಕ್ಲೀನ್ ನೋಟ್ ಪಾಲಿಸಿ’). ಅಲ್ಲದೆ ಈಗ 2 ಸಾವಿರ ಮುಖಬೆಲೆಯ ನೋಟುಗಳ ಚಲಾವಣೆ ಶೇ. 10ರಷ್ಟು ಮಾತ್ರ ಇರುವುದರಿಂದ ಹೆಚ್ಚಿನ ಪರಿಣಾಮ ಬೀರದು ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

2024ರ ಚುನಾವಣಾ ಅಕ್ರಮಕ್ಕೆ ಬ್ರೇಕ್ ಹಾಕಲು ಕ್ರಮ?

ಮೂಲದ ಪ್ರಕಾರ 2024ರ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ಆರಂಭಿಸಿದ್ದು, ಹೆಚ್ಚಿನ ಮುಖಬೆಲೆಯ ನೋಟುಗಳ ಸಂಗ್ರಹಣೆಗೆ ಮುಂದಾಗಿವೆ ಎಂದು ಹೇಳಲಾಗಿದೆ.

ಅನುಮಾನಾಸ್ಪದವಾಗಿ ಹೆಚ್ಚಿನ ಮುಖಬೆಲೆಯ ನೋಟುಗಳ ಸಂಗ್ರಹಣೆ ಮತ್ತು ದುರುಪಯೋಗವನ್ನು ತಪ್ಪಿಸಲು ಆರ್‌ಬಿಐ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *