ಕತಾರ್ ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿಗೂ ರಾಜಮರ್ಯಾದೆ – ಎಲ್ಲಾ ಕಡೆ ದೇಸಿ ಕರೆನ್ಸಿ ಬಳಕೆ, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಗಾಯಕ ಮಿಕಾ ಸಿಂಗ್

ಕತಾರ್ ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿಗೂ ರಾಜಮರ್ಯಾದೆ – ಎಲ್ಲಾ ಕಡೆ ದೇಸಿ ಕರೆನ್ಸಿ ಬಳಕೆ, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಗಾಯಕ ಮಿಕಾ ಸಿಂಗ್

ನ್ಯೂಸ್‌ ಆ್ಯರೋ : ಕತಾರ್‌ನ ಐಷಾರಾಮಿ ಮಳಿಗೆಯಲ್ಲಿ ಡಾಲರ್‌ನಂತೆ ಭಾರತೀಯ ಕರೆನ್ಸಿ ಬಳಸಿ, ಶಾಪಿಂಗ್ ಮಾಡಿರುವುದಾಗಿ ಹಾಡುಗಾರ ಮಿಕಾ ಸಿಂಗ್ ಟ್ವೀಟ್ ಮಾಡಿದ್ದಾರೆ.

ಡಾಲರ್‌ನಂತೆ ನಮ್ಮ ಭಾರತೀಯ ಹಣವನ್ನು ಬಳಸಿ ಶಾಪಿಂಗ್ ಮಾಡಲು ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಲ್ಯೂಟ್ ಎಂದು ಹೇಳಿದ್ದಾರೆ.

ಕತಾರ್ ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿ ಬಳಸಿ ಶಾಪಿಂಗ್ ಮಾಡಿರುವ ವಿಚಾರದ ಬಗ್ಗೆ ಮಿಕಾ ಸಿಂಗ್ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ಗೆ ಸಾವಿರಾರು ಬಳಕೆದಾರರು ಲೈಕ್ಸ್ ಮಾಡಿದ್ದು, ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದನ್ನು ಸ್ವಾಗತಿಸಿದ್ದಾರೆ.

‘ಶುಭೋದಯ, ನನಗೆ ದೋಹಾ ವಿಮಾನ ನಿಲ್ದಾಣದಲ್ಲಿ ಮಾಲ್ ನಲ್ಲಿ ಶಾಪಿಂಗ್ ಮಾಡುವಾಗ ಭಾರತೀಯ ರೂಪಾಯಿಗಳನ್ನು ಬಳಸಲು ತುಂಬಾ ಹೆಮ್ಮೆ ಎನಿಸುತ್ತಿದೆ’ ಮಿಕಾ ಸಿಂಗ್ ಟ್ವೀಟ್‌ನಲ್ಲಿ ತಿಳಿಸಿದ್ದರು.

ಕುವೈತ್‌ನ ಶಾಪಿಂಗ್ ಮಾಲ್ ಮಾತ್ರವಲ್ಲ, ಯಾವುದೇ ರೆಸ್ಟೋರೆಂಟ್‌ನಲ್ಲಿಯೂ ರೂಪಾಯಿಯನ್ನು ಬಳಸಬಹುದಾಗಿದೆ. ಇದು ಅದ್ಭುತವಾದ ವಿಷಯವಲ್ಲವೇ? ನಮ್ಮ ಹಣವನ್ನು ಡಾಲರ್‌ನಂತೆ ಬಳಸಲು ಅನುವು ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಸಾಬ್‌ಗೆ ಧನ್ಯವಾದಗಳು ಎಂದು ಅವರು ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತೀಯ ಕರೆನ್ಸಿ ಇನ್ನಷ್ಟು ಬಲಿಷ್ಠವಾಗಿದೆ ಎಂದು ಟ್ವೀಟ್ ಬಳಕೆದಾರರೊಬ್ಬರು ತಿಳಿಸಿದ್ದು, ಇದು ನವ ಭಾರತದ ಶಕ್ತಿ ಎಂದು ಮತ್ತೊಬ್ಬರು ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *