ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ ಬದಲಾವಣೆಯಾಗಿದೆ.

ಹೊಸ ಟಿಸಿಎಸ್ ನಿಯಮ, ಆಧಾರ್ ಹಾಗೂ ಸರ್ಕಾರಿ ಕೆಲಸಗಳಿಗೆ ಜನನ ಪ್ರಮಾಣಪತ್ರ ಏಕೈಕ ದಾಖಲೆ ಸೇರಿದಂತೆ ಹಲವು ಬದಲಾವಣೆಗಳು ಅಕ್ಟೋಬರ್ ತಿಂಗಳಲ್ಲಿ ಜಾರಿಗೆ ಬರಲಿವೆ. ಇನ್ನು ಸೆಪ್ಟೆಂಬರ್ ತಿಂಗಳು ಪ್ರಮುಖ ಹಣಕಾಸಿನ ಕಾರ್ಯಗಳಿಗೆ ಅಂತಿಮ ಗಡುವಾಗಿದೆ. ಹೀಗಾಗಿ ಅಕ್ಟೋಬರ್ ತಿಂಗಳಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ.

ಆಧಾರ್ ಲಿಂಕ್ ಆಗದ ಸಣ್ಣ ಉಳಿತಾಯ ಖಾತೆ ನಿಷ್ಕ್ರಿಯ

ಆಧಾರ್ ಲಿಂಕ್ ಮಾಡದ ಸಣ್ಣ ಉಳಿತಾಯ ಖಾತೆಗಳು ಅಕ್ಟೋಬರ್ 1ರಿಂದ ನಿಷ್ಕ್ರಿಯಗೊಳ್ಳಲಿವೆ. ಹಾಗೆಯೇ ₹2 ಸಾವಿರ ನೋಟು ವಿನಿಮಯ ಅಥವಾ ಠೇವಣಿಗೆ ಕೂಡ ಸೆ.30 ಅಂತಿಮ ಗಡುವಾಗಿದೆ. ಹೀಗಾಗಿ ಅಕ್ಟೋಬರ್ 1ರಿಂದ ₹2 ಸಾವಿರ ನೋಟುಗಳು ಚಲಾವಣೆಯಲ್ಲಿರೋದಿಲ್ಲ. ‌‌‌

ಈ ಸುದ್ದಿಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಯಾವೆಲ್ಲ ನಿಯಮಗಳಲ್ಲಿ ಬದಲಾವಣೆಗಳಿವೆ ಹಾಗೂ ಇದರಿಂದ ಜನರಿಗೆ ಏನೆಲ್ಲ ತೊಂದರೆಯಾಗಲಿದೆ ಎಂಬುದರ ಬಗ್ಗೆ ಮಾಹಿತಿಯಿದೆ.

  1. ಹೊಸ ಟಿಸಿಎಸ್ ನಿಯಮ ಜಾರಿಹೊಸ ಟಿಸಿಎಸ್ ನಿಯಮ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ವಿದೇಶಗಳಿಗೆ ಪ್ರವಾಸ ತೆರಳುವವರಿಗೆ ಹಾಗೂ ಅಲ್ಲಿ ಶಿಕ್ಷಣ ಪಡೆಯುತ್ತಿರುವವರ ಮೇಲೆ ಈ ನಿಯಮ ಪರಿಣಾಮ ಬೀರಲಿದೆ. ವಿದೇಶಗಳಲ್ಲಿ ವಾರ್ಷಿಕ ₹7ಲಕ್ಷ ಮೇಲ್ಪಟ್ಟ ಕ್ರೆಡಿಟ್ ಕಾರ್ಡ್ ವಹಿವಾಟುಗಳ ಮೇಲೆ ಶೇ.20ರಷ್ಟು ಟಿಸಿಎಸ್ ವಿಧಿಸಲಾಗುವುದು. ಒಂದು ವೇಳೆ ಇಂಥ ವೆಚ್ಚಗಳನ್ನು ವೈದ್ಯಕೀಯ ಅಥವಾ ಶೈಕ್ಷಣಿಕ ಉದ್ದೇಶಗಳಿಗೆ ಮಾಡಿದ್ದರೆ ಶೇ.5ರಷ್ಟು ಟಿಸಿಎಸ್ ವಿಧಿಸಲಾಗುವುದು. ಇನ್ನು ವಿದೇಶದಲ್ಲಿ ಶಿಕ್ಷಣ ಪಡೆಯಲು ಸಾಲ ಪಡೆದಿದ್ದರೆ ₹7ಲಕ್ಷ ಮೇಲ್ಪಟ್ಟ ಮೊತ್ತಕ್ಕೆ ಶೇ.0.5ಷ್ಟು ಟಿಸಿಎಸ್ ವಿಧಿಸಲಾಗುವುದು.

2.ಆಧಾರ್, ಸರ್ಕಾರಿ ಉದ್ಯೋಗಗಳಿಗೆ ಜನನ ಪ್ರಮಾಣಪತ್ರ ಕಡ್ಡಾಯ

ಅಕ್ಟೋಬರ್ 1ರಿಂದ ಆಧಾರ್ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಜನನ ಪ್ರಮಾಣಪತ್ರ ಏಕೈಕ ದಾಖಲೆಯಾಗಲಿದೆ. ಅಕ್ಟೋಬರ್ 1 ಜನನ ಹಾಗೂ ಮರಣ (ನೋಂದಣಿ) ಕಾಯ್ದೆ 2023ರ ನೋಂದಣಿ ದೇಶಾದ್ಯಂತ ಜಾರಿಗೆ ಬರಲಿದೆ. ಶಾಲೆಗೆ ಮಗುವಿನ ಸೇರ್ಪಡೆ, ಡ್ರೈವಿಂಗ್ ಲೈಸೆನ್ಸ್, ಮತದಾರರ ಪಟ್ಟಿ ತಯಾರಿ, ಆಧಾರ್ ಸಂಖ್ಯೆ, ವಿವಾಹ ನೋಂದಣಿ ಅಥವಾ ಸರ್ಕಾರಿ ಉದ್ಯೋಗ ನೇಮಕಾತಿಗೆ ಜನನ ಪ್ರಮಾಣಪತ್ರ ಏಕೈಕ ದಾಖಲೆಯಾಗಿರಲಿದೆ.

  1. ₹2ಸಾವಿರ ನೋಟು ರದ್ದಾಗಲಿದೆ

ಬ್ಯಾಂಕ್ ಗಳಲ್ಲಿ ₹2000 ನೋಟು ವಿನಿಮಯ ಅಥವಾ ಠೇವಣಿಗೆ ಸೆ.30 ಅಂತಿಮ ಗಡುವಾಗಿದೆ. ಇನ್ನೂ ಬ್ಯಾಂಕ್‌ಗಳಲ್ಲಿ ಅ.1ರಿಂದ ₹2000 ನೋಟುಗಳನ್ನು ಸ್ವೀಕರಿಸಲು ನಿರಾಕರಿಸುವ ಸಾಧ್ಯತೆಯಿದೆ. ಅಲ್ಲದೆ, ಈ ಬಗ್ಗೆ ಆರ್ ಬಿಐ ಸ್ಪಷ್ಟನೆ ನೀಡಲಿದೆ.

4.ಸಣ್ಣ ಉಳಿತಾಯ ಖಾತೆಗಳಿಗೆ ಆಧಾರ್ ಲಿಂಕ್

ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಸುಕನ್ಯಾ ಸಮೃದ್ಧಿ, ಅಂಚೆ ಕಚೇರಿ ಠೇವಣಿಗಳು ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಖಾತೆಗೆ ಹೂಡಿಕೆದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡೋದು ಕಡ್ಡಾಯ. ಸೆ.30ರೊಳಗೆ ಸಣ್ಣ ಉಳಿತಾಯ ಖಾತೆಗಳಿಗೆ ಆಧಾರ್ ಲಿಂಕ್ ಮಾಡದಿದ್ದರೆ ಅ.1ರಿಂದ ಆ ಖಾತೆಗಳು ನಿಷ್ಕ್ರಿಯಗೊಳ್ಳಲಿವೆ.

5.ಎಲ್ ಪಿಜಿ ದರ ಬದಲಾವಣೆ

ಎಲ್ ಪಿಜಿ ದರವನ್ನು ಪ್ರತಿ ತಿಂಗಳು ಬದಲಾವಣೆ ಮಾಡಲಾಗುತ್ತದೆ. ಪ್ರತಿ ತಿಂಗಳ ಮೊದಲ ದಿನ ಸಾಮಾನ್ಯವಾಗಿ ಈ ಪರಿಷ್ಕರಣೆ ನಡೆಯುತ್ತದೆ. ಅದರಂತೆ ಅಕ್ಟೋಬರ್ 1ರಿಂದ ಕೂಡ ಎಲ್ ಪಿಜಿ ದರದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್‌ ತಿಂಗಳಿನಲ್ಲಿ ಕೆಲ ಹಣಕಾಸಿನ ನಿಯಮಗಳಲ್ಲಿ ಬದಲಾವಣೆ ಆಗುತ್ತಿದ್ದು, ಜನರು ಈ ಬಗ್ಗೆ ತಿಳಿದುಕೊಂಡು ವ್ಯವಹರಿಸಬೇಕಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *