ನಿಮ್ಮ ಬ್ಯಾಂಕ್ ಖಾತೆಯಿಂದಲೂ ಏಕಾಏಕಿ ₹.436 ಗುಳುಂ ಆಗಿದ್ಯಾ? – ಈ ಹಣ ಎಲ್ಲಿ ಸೇರುತ್ತೆ ಗೊತ್ತಾ?

ನಿಮ್ಮ ಬ್ಯಾಂಕ್ ಖಾತೆಯಿಂದಲೂ ಏಕಾಏಕಿ ₹.436 ಗುಳುಂ ಆಗಿದ್ಯಾ? – ಈ ಹಣ ಎಲ್ಲಿ ಸೇರುತ್ತೆ ಗೊತ್ತಾ?

ನ್ಯೂಸ್‌ ಆ್ಯರೋ : ಕೆಲವೊಮ್ಮೆ ಏಕಾಏಕಿ ನಿಮ್ಮ ಬ್ಯಾಂಕ್ ಖಾತೆಯಿಂದ ₹436 ಖಡಿತಗೊಂಡಿದೆ ಎಂದು ಮೊಬೈಲ್‌ಗೆ ಸಂದೇಶ ಬರುತ್ತದೆ. ಈ ಸಂಬಂಧ ವಿಚಾರಿಸಲು ಬ್ಯಾಂಕ್‌ ಹೋದಾಗ , ನೀವು ವಿಮಾ ಪಾಲಿಸಿ ಹೊಂದಿದ್ದೀರಿ ಎಂದು ಬ್ಯಾಂಕಿಂಗ್ ತಜ್ಞರು ಹೇಳುತ್ತಾರೆ. ಇನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ರಕ್ಷಾ ಎಂದು ಹೇಳಲಾಗುತ್ತದೆ.

ವಿಮಾ ರಕ್ಷಣೆ ಹೀಗಿದೆ.!

ಬ್ಯಾಂಕ್ ಖಾತೆಗಳನ್ನು ಹೊಂದಿರುವವರು ಮತ್ತು ಸ್ವಯಂ-ಡೆಬಿಟ್’ನ್ನ ನೋಂದಾಯಿಸಲು ಅಥವಾ ಸಕ್ರಿಯಗೊಳಿಸಲು ಒಪ್ಪಿಕೊಂಡವರು ಮತ್ತು 18 ರಿಂದ 50 ವರ್ಷ ವಯಸ್ಸಿನವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಯೋಜನೆಗೆ ಅರ್ಹತೆಯನ್ನು ಪಡೆಯುತ್ತಾರೆ.

ಬ್ಯಾಂಕ್ ಖಾತೆಗಳಿಗೆ KYC ಅಡಿಯಲ್ಲಿ ಆಧಾರ್’ನ್ನ ಪ್ರಾಥಮಿಕ ರೂಪವಾಗಿ ಬಳಸಲಾಗುತ್ತದೆ. 2 ಲಕ್ಷ ರೂಪಾಯಿ ಜೀವ ವಿಮಾ ಪಾಲಿಸಿಯು ಜೂನ್ 1 ರಿಂದ ಮೇ 31 ರವರೆಗೆ ಮಾನ್ಯವಾಗಿರುತ್ತದೆ. ಇದರ ವಾರ್ಷಿಕ ಪ್ರೀಮಿಯಂ ₹436 ಮತ್ತು ಪ್ರತಿ ವಾರ್ಷಿಕ ಕವರೇಜ್ ಅವಧಿಯ ಮೇ 31 ರಂದು ಅಥವಾ ಮೊದಲು ಚಂದಾದಾರರ ಬ್ಯಾಂಕ್ ಖಾತೆಯಿಂದ ಸ್ವಯಂ-ಡೆಬಿಟ್ ಮಾಡಬೇಕು.

ಆದ್ರೆ, ನೀವು ಯಾವುದೇ ಕಾರಣಕ್ಕಾಗಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯನ್ನ ಮುಂದುವರಿಸಲು ಸಾಧ್ಯವಾಗದಿದ್ರೆ, ನಿಮ್ಮ ಬ್ಯಾಂಕ್ ಖಾತೆಯಿಂದ ವಾರ್ಷಿಕ ಸ್ವಯಂ-ಡೆಬಿಟಿಂಗ್ ಪ್ರಕ್ರಿಯೆಯನ್ನು ರದ್ದುಗೊಳಿಸಲು ನೀವು ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ.

ಆದ್ರೆ, ನಿಮ್ಮ ಬ್ಯಾಂಕ್ ಖಾತೆಯಲ್ಲಿ ಅಗತ್ಯವಿರುವ ಹಣವನ್ನ ನೀವು ಹೊಂದಿಲ್ಲದಿದ್ದರೆ ಪ್ರೀಮಿಯಂ ಸ್ವಯಂ-ಡೆಬಿಟ್ ಸಾಧ್ಯವಿಲ್ಲ. ಇದರ ಪರಿಣಾಮವಾಗಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ರದ್ದಾಗುತ್ತದೆ.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *