ಅಸ್ಸಾಂನ ಲೇಡಿ ಸಿಂಗಂ ಸಾವಿನ ಸುತ್ತ ಅನುಮಾನದ ಹುತ್ತ – ಭಾವೀ ಪತಿಯನ್ನೇ ಬಂಧಿಸಿದ್ದ ದಿಟ್ಟ ಅಧಿಕಾರಿಯ ಕೊಲೆಯಾಯ್ತಾ?

ಅಸ್ಸಾಂನ ಲೇಡಿ ಸಿಂಗಂ ಸಾವಿನ ಸುತ್ತ ಅನುಮಾನದ ಹುತ್ತ – ಭಾವೀ ಪತಿಯನ್ನೇ ಬಂಧಿಸಿದ್ದ ದಿಟ್ಟ ಅಧಿಕಾರಿಯ ಕೊಲೆಯಾಯ್ತಾ?

ನ್ಯೂಸ್ ಆ್ಯರೋ‌ : ಕಂಟೈನರ್ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಲೇಡಿ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಸ್ಸಾಂನ ಮಹಿಳಾ ಸಬ್ ಇನ್ಸ್ ಪೆಕ್ಟರ್ ಜುನ್ಮೋನಿ ರಾಭಾ(30) ಮೃತಪಟ್ಟಿದ್ದಾರೆ.

ಕಲಿಯಾಬೋರ್ ಉಪವಿಭಾಗದ ಜಖಲಬಂಧ ಪೊಲೀಸ್ ಠಾಣೆ ವ್ಯಾಪ್ತಿಯ ಸರುಭುಗಿಯಾ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ವೇಳೆ ರಾಭಾ ತಮ್ಮ ಖಾಸಗಿ ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದರು. ಆ ವೇಳೆ ಅವರು ಪೊಲೀಸ್ ಸಮವಸ್ತ್ರ ಧರಿಸಿರಲಿಲ್ಲ. ನಸುಕಿನ ಜಾವ 2.30ರ ಸುಮಾರಿಗೆ ಮಾಹಿತಿ ತಿಳಿದ ಪೋಲಿಸ್ ತಂಡ ಸ್ಥಳಕ್ಕೆ ಧಾವಿಸಿ ರಾಭಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಜುನ್ಮೋನಿ ರಾಭಾ ಮೃತಪಟ್ಟಿದ್ದರು.

ಮೊರಿಕೊಲಾಂಗ್ ಪೊಲೀಸ್ ಔಟ್‌ಪೋಸ್ಟ್‌ನ ಉಸ್ತುವರಿಯಾಗಿದ್ದ ರಾಭಾ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಹೆಸರುವಾಸಿಯಾಗಿದ್ದರು. ಇದರಿಂದಲೇ ಅವರು ‘ಲೇಡಿ ಸಿಂಗಂ’ ಹಾಗೂ ‘ದಬಂಗ್ ಕಾಪ್’ ಎಂಬ ಹೆಸರುಗಳಿಂದ ಜನಪ್ರಿಯರಾಗಿದ್ದರು. ಅಲ್ಲದೇ ಹಣಕಾಸಿನ ಅಕ್ರಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪವೂ ಅವರ ಮೇಲಿತ್ತು. 2022ರಲ್ಲಿ ತನ್ನ ಮಾಜಿ ಪ್ರಿಯಕರನೊಂದಿಗೆ ಸೇರಿಕೊಂಡು ರಭಾ ಲೀಗ್ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪವಿತ್ತು. ಈ ಹಿನ್ನಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ಅಮಾನತು ಹಿಂಪಡೆದುಕೊಂಡು ಮತ್ತೆ ಸೇವೆಯಲ್ಲಿ ತೊಡಗಿಕೊಳ್ಳುವಂತೆ ಆದೇಶ ಹೊರಡಿಸಲಾಗಿತ್ತು. ನಂತರ ರಾಭಾ ಮತ್ತೆ ಸೇವೆಗೆ ಮರಳಿದ್ದರು.

ಪೂರ್ವ ನಿಯೋಜಿತ ಕೊಲೆ

ಮಾಧ್ಯಮದವರೊಂದಿಗೆ ಮಾತನಾಡಿದ ರಾಭಾ ತಾಯಿ ಸುಮಿತ್ರಾ ರಾಭಾ, ಇದೊಂದು ಪೂರ್ವ ನಿಯೋಜಿತ ಕೊಲೆ ಎಂದು ಆರೋಪಿಸಿದ್ದು, ಯಾವುದೋ ಅಪರಿಚಿತ ತಂಡದಿಂದ ನಡೆದಿದೆ ಎಂದು ಹೇಳಿದ್ದಾರೆ. ಘಟನೆ ನಡೆಯುವ ಹಿಂದಿನ ದಿನ ರಾತ್ರಿ ಉನ್ನತ ಪೊಲೀಸ್ ಅಧಿಕಾರಿಗಳ ತಂಡವು ನಾಗಾನ್‌ನಲ್ಲಿರುವ ರಾಭಾ ಅವರ ಅಧಿಕೃತ ಕ್ವಾರ್ಟರ್‌ಗೆ ದಾಳಿ ನಡೆಸಿ ಸುಮಾರು 1 ಲಕ್ಷ ರೂ. ವಶಪಡಿಸಿಕೊಂಡಿತ್ತು. ಈ ವೇಳೆ ಸುಮಿತ್ರಾ ರಾಭಾ, ಇದು ತಾನು ಕೋಳಿ ಮತ್ತು ಹಂದಿ ಸಾಕಾಣಿಕೆ ಮಾಡಿ ಗಳಿಸಿರುವ ಹಣ ಎಂದು ಹೇಳಿದ್ದರು.

ಅಪಘಾತದ ಬಳಿಕ ಉತ್ತರ ಪ್ರದೇಶ ನೋಂದಣಿ ಹೊಂದಿದ್ದ ಕಂಟೈನರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾಭಾ ಕುಟುಂಬಸ್ಥರು ಈ ಘಟನೆ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *