ಸಹೋದರನಿಂದಲೇ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ – ಗರ್ಭಪಾತಕ್ಕೆ ಅನುಮತಿ ಕೋರಿದ್ದ ಅರ್ಜಿ ಬಗ್ಗೆ ಕೋರ್ಟ್ ಹೇಳಿದ್ದೇನು?

ಸಹೋದರನಿಂದಲೇ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ – ಗರ್ಭಪಾತಕ್ಕೆ ಅನುಮತಿ ಕೋರಿದ್ದ ಅರ್ಜಿ ಬಗ್ಗೆ ಕೋರ್ಟ್ ಹೇಳಿದ್ದೇನು?

ನ್ಯೂಸ್ ಆ್ಯರೋ‌ : ತನ್ನ ಸಹೋದರನಿಂದ ಗರ್ಭ ಧರಿಸಿದ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್‌ ಅವಕಾಶ ನೀಡಿದೆ. ಇದರಿಂದ ಅಪ್ರಾಪ್ತ ಬಾಲಕಿಗೆ ಆಗಬಹುದಾದ ಯಾವುದೇ ದೈಹಿಕ ಮತ್ತು ಸಾಮಾಜಿಕ ತೊಡಕುಗಳನ್ನು ತಪ್ಪಿಸಲು ಕೋರ್ಟ್‌ ಆದೇಶಿಸಿದೆ. ಈ ಮೂಲಕ ಏಳು ತಿಂಗಳ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಇದ್ದ ಕಾನೂನು ತೊಡಕು ನಿವಾರಣೆಯಾಗಿದೆ.

ಗರ್ಭಪಾತವನ್ನು ಅನುಮತಿಸದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ ಎಂದು ಈ ಸಂದರ್ಭದಲ್ಲಿ ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ. ಅಪ್ರಾಪ್ತೆಯ ತಂದೆ ಗರ್ಭಪಾತ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಸ್ವಂತ ಒಡಹುಟ್ಟಿದವನಿಂದ ಗರ್ಭ ಧರಿಸಿರುವ ಹಿನ್ನಲೆಯಲ್ಲಿ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ. ಆದ್ದರಿಂದ ಅನುಮತಿ ಅನಿವಾರ್ಯವಾಗಿದೆ ಎಂದೂ ಕೋರ್ಟ್‌ ಹೇಳಿದೆ.

ವೈದ್ಯಕೀಯ ವರದಿಯನ್ನು ಪರಿಶೀಲಿಸಿದಾಗ, ಮಗುವು ದೈಹಿಕವಾಗಿ ಮತ್ತು ಮಾನಸಿಕವಾಗಿ ಗರ್ಭಪಾತಕ್ಕೆ ಯೋಗ್ಯವಾಗಿದೆ ಎಂಬುದು ಸ್ಪಷ್ಟವಾಗಿದೆ. ಗರ್ಭಧಾರಣೆಯ ಮುಂದುವರಿಕೆ ಮಗುವಿನ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಗಾಯವನ್ನು ಉಂಟು ಮಾಡುವ ಸಾಧ್ಯತೆಯಿದೆ ಎಂದು ಕೋರ್ಟ್ ತನ್ನ ತೀರ್ಪಿಗೆ ಸಮರ್ಥನೆ ನೀಡಿದೆ.

ಯಾವುದೇ ವಿಳಂಬವಿಲ್ಲದೆ ಅಪ್ರಾಪ್ತ ಬಾಲಕಿಯ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಭ್ರೂಣ ತೆಗೆಯಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ವೈದ್ಯಾಧಿಕಾರಿ ಮತ್ತು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಧೀಕ್ಷಕರಿಗೆ ನ್ಯಾಯಾಲಯವು ಸೂಚಿಸಿದೆ ಎಂದು ವರದಿ ತಿಳಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *