‘ಯೋಗಿ ಆದಿತ್ಯನಾಥ್ ಒಬ್ಬ ಗೂಂಡಾ’ ಎಂದಾತನಿಗೆ ಪೋಲಿಸರ ಭರ್ಜರಿ ಟ್ರೀಟ್ಮೆಂಟ್ – ವೈರಲ್ ಆದ ವಿಡಿಯೋದಲ್ಲಿ ಏನಿದೆ?

‘ಯೋಗಿ ಆದಿತ್ಯನಾಥ್ ಒಬ್ಬ ಗೂಂಡಾ’ ಎಂದಾತನಿಗೆ ಪೋಲಿಸರ ಭರ್ಜರಿ ಟ್ರೀಟ್ಮೆಂಟ್ – ವೈರಲ್ ಆದ ವಿಡಿಯೋದಲ್ಲಿ ಏನಿದೆ?

ನ್ಯೂಸ್ ಆ್ಯರೋ : ಹಿಂದೂ ಫೈರ್ ಬ್ರ್ಯಾಂಡ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೂಂಡಾ ಎಂದು ಸಾರ್ವಜನಿಕವಾಗಿ ನಿಂದಿಸಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದು, ಬಂಧನದ ಬಳಿಕದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಗಾಜಿಯಾಬಾದ್‌ನ ಮಸ್ಸೂರಿ ನಿವಾಸಿಯಾಗಿರುವ ಮೊಹಮ್ಮದ್ ವಾಸಿಂ ಬಂಧಿತ. ಸಾರ್ವಜನಿಕ ಸಂದರ್ಶನವೊಂದರಲ್ಲಿ ಆತ ಯೋಗಿ ಆದಿತ್ಯನಾಥ್ ಒಬ್ಬ ಗೂಂಡಾ. ನನ್ನ ವಿರುದ್ಧ ಕೇಸ್ ದಾಖಲಿಸಿದರೂ ನನಗೆ ಭಯವಿಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತಿಹಾಸ ಮತ್ತು ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಪರಿಶೀಲಿಸಿ ಎಂದು ಸಂದರ್ಶಕರೊಂದಿಗೆ ಹೇಳಿದ್ದ.

ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಗೂಂಡಾಗಿರಿಯನ್ನು ಕೊನೆಗಾಣಿಸಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ವ್ಯಕ್ತಿ ಈ ರೀತಿ ಉತ್ತರಿಸಿದ್ದ. “ನಾವು ಮುಸ್ಲಿಮರು ಅವರ 90ರ ತಲೆಮಾರುಗಳು ನಮ್ಮನ್ನು ತೊಡೆದುಹಾಕಲು ಸಾಧ್ಯವಿಲ್ಲ, ಯೋಗಿ ಆಕಾಶದಿಂದ ಇಳಿದು ಬಂದಿಲ್ಲ” ಎಂದು ವಾಗ್ದಾಳಿ ನಡೆಸಿದ್ದ.

ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿ ಆರು ವರ್ಷ ಪೂರೈಸಿದ್ದು ಅವರ ಆಡಳಿತದ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಸ್ಲಿಂ ವ್ಯಕ್ತಿ, “ಹೌದು ಅವರು ಸಾಕಷ್ಟು ಕೆಲಸ ಮಾಡಿದ್ದಾರೆ, ಅವರು ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಮೇಲೆ ಕೆಲಸ ಮಾಡಿದ್ದಾರೆ” ಎಂದು ಹೇಳಿದ್ದ.

ಮುಸ್ಲಿಂ ವ್ಯಕ್ತಿಯ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಮತ್ತೊಂದು ವಿಡಿಯೋದಲ್ಲಿ ಬಂಧನವಾಗಿರುವ ವ್ಯಕ್ತಿಯನ್ನು ಪೊಲೀಸರು ಥಳಿಸಿದ್ದು ಆತ ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಇದ್ದು ಅವನನ್ನು ಪೊಲೀಸರು ಕರೆದೊಯ್ಯುವ ವಿಡಿಯೋ ಕೂಡ ವೈರಲ್ ಆಗಿದೆ. ಆರೋಪಿಯು ಪೊಲೀಸರ ವಶದಲ್ಲಿದ್ದು, ಮುಂದಿನ ಕ್ರಮ ಜರುಗಿಸಲಾಗುತ್ತಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *