ಕಾನೂನು ಪದವಿ ಪಡೆಯದೇ ನ್ಯಾಯಮೂರ್ತಿ ಹುದ್ದೆಗೇರಿದ್ದ ವಾಂಚೂ: ಭಾರತದ ನ್ಯಾಯಾಂಗದ ಇತಿಹಾಸದಲ್ಲೇ ಅಪರೂಪದ ದಾಖಲೆ

ಕಾನೂನು ಪದವಿ ಪಡೆಯದೇ ನ್ಯಾಯಮೂರ್ತಿ ಹುದ್ದೆಗೇರಿದ್ದ ವಾಂಚೂ: ಭಾರತದ ನ್ಯಾಯಾಂಗದ ಇತಿಹಾಸದಲ್ಲೇ ಅಪರೂಪದ ದಾಖಲೆ

ನ್ಯೂಸ್ ಆ್ಯರೋ: ವಕೀಲ ವೃತ್ತಿ, ನ್ಯಾಯಾಧೀಶ ಹುದ್ದೆಗೆ ಕಾನೂನು ಪದವಿಯೇ ಮೊದಲ ಮಾನದಂಡ. ಆದರೆ, ಕಾನೂನು ಪದವಿ ಪಡೆಯದೇ ಆ ಹುದ್ದೆಗಳನ್ನು ಪಡೆಯಲು ಸಾಧ್ಯ ಎಂಬುದನ್ನು ಜಸ್ಟೀಸ್ ಕೈಲಾಶ್ ನಾಥ್ ವಾಂಚೂ ತೋರಿಸಿಕೊಟ್ಟಿದ್ದಾರೆ.

ಜಸ್ಟೀಸ್ ಕೈಲಾಶ್ ನಾಥ್ ವಾಂಚೂ ಅವರು ಕಾನೂನು ಪದವಿ ಪಡೆಯದೇ ಭಾರತದ ಸುಪ್ರೀಂ ಕೋರ್ಟ್‌ನ 10ನೇ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಕಾನೂನು ಪದವಿಯನ್ನ ಪಡೆಯದೆಯೇ ಈ ಸ್ಥಾನವನ್ನ ಅಲಂಕರಿಸಿದ ಏಕೈಕ ವ್ಯಕ್ತಿ ಎಂಬ ಹಿರಿಮೆಯೂ ಅವರ ಹೆಸರಿನಲ್ಲಿದೆ.

1903 ಫೆಬ್ರವರಿ 25ರಂದು ವಾಂಚೂ ಅವರು ಮಧ್ಯಪ್ರದೇಶದಲ್ಲಿ ಜನಿಸಿದರು. 1924ರಲ್ಲಿ ಐಸಿಎಸ್ ತೇರ್ಗಡೆಯಾಗಿ 2 ವರ್ಷ ಇಂಗ್ಲೆಂಡ್‌ನಲ್ಲಿ ತರಬೇತಿ ಪಡೆದುಕೊಂಡರು. ಐಸಿಎಸ್ ತರಬೇತಿಯಲ್ಲಿ ಕ್ರಿಮಿನಲ್ ಲಾ ಓದಿಕೊಂಡು, 1926ರಲ್ಲಿ ಭಾರತಕ್ಕೆ ಮರಳಿದ ಅವರು ಸಂಯುಕ್ತ ಪ್ರಾಂತ್ಯದಲ್ಲಿ ಕಾರ್ಯನಿರ್ವಹಿಸಿದರು.

ಉತ್ತರಪ್ರದೇಶ ಹಾಗೂ ಉತ್ತರಾಖಂಡ್​ಅಲ್ಲಿ ಸಹಾಯಕ ಮ್ಯಾಜಿಸ್ಟ್ರೇಟ್, ಕಲೆಕ್ಟರ್ ಆಗಿ ಕಾರ್ಯನಿರ್ವಹಿಸಿದರು. ನಂತರ ರಾಯಬರೇಲಿಯ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. 1947ರಲ್ಲಿ ಅಲಹಾಬಾದ್ ಹೈಕೋರ್ಟ್​ನ ಕಾರ್ಯನಿರ್ವಾಹಕ ನ್ಯಾಯಮೂರ್ತಿ ಆದರು. 1956ರಲ್ಲಿ ಹೊಸದಾಗಿ ಸ್ಥಾಪನೆಗೊಂಡ ರಾಜಸ್ಥಾನನ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾದರು. 1967ರಲ್ಲಿ ಭಾರತದ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನೂ ಅಲಂಕರಿಸಿದರು. ಅಂದಿನ ಸಿಜೆಐ ಆಗಿದ್ದ ಸುಬ್ಬಾರಾವ್​ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇವರು ನೇಮಕಗೊಂಡರು. ಸುಪ್ರೀಂನ ಮುಖ್ಯನ್ಯಾಯಮೂರ್ತಿಯಾಗಿ 10 ತಿಂಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಭಾರತದ ನ್ಯಾಯಾಂಗದ ಇತಿಹಾಸದಲ್ಲಿ ಕಾನೂನು ಪದವಿಯನ್ನ ಪಡೆಯದೇ, ವಕೀಲಿಕೆ ಮಾಡದೆ ಸುಪ್ರೀಂಕೋರ್ಟ್​ ಸಿಜೆಐ ಆಗಿದ್ದ ಮತ್ತು ಇಂಡಿಯನ್ ಸಿವಿಲ್ ಸರ್ವೀಸ್ ಪರೀಕ್ಷೆ ಮಾಡಿದವರೊಬ್ಬರು ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ ಉದಾಹರಣೆ ಅಂದ್ರೆ ಅದು ಜಸ್ಟೀಸ್ ವಾಂಚೂ ಮಾತ್ರ ಎನ್ನುತ್ತದೆ ಇತಿಹಾಸದ ದಾಖಲೆಗಳು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *