ಅಕ್ಟೋಬರ್‌ನಿಂದ ಜನನ, ಮರಣ ನೋಂದಣಿ ಕಾಯ್ದೆ ಜಾರಿ – ಇನ್ಮುಂದೆ ಈ ಎಲ್ಲಾ ಕೆಲಸಗಳಿಗೆ ಜನನ ಪತ್ರ ಬೇಕೆ ಬೇಕು..!

ಅಕ್ಟೋಬರ್‌ನಿಂದ ಜನನ, ಮರಣ ನೋಂದಣಿ ಕಾಯ್ದೆ ಜಾರಿ – ಇನ್ಮುಂದೆ ಈ ಎಲ್ಲಾ ಕೆಲಸಗಳಿಗೆ ಜನನ ಪತ್ರ ಬೇಕೆ ಬೇಕು..!

ನ್ಯೂಸ್‌ ಆ್ಯರೋ : ದೇಶದಲ್ಲಿ ಅಕ್ಟೋಬರ್‌ 1ರಿಂದ ಜನನ ಮತ್ತು ಮರಣ ನೋಂದಣಿ ಕಾಯ್ದೆ 2023 ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಸಂಸತ್ತಿನಲ್ಲಿ, ಕಳೆದ ತಿಂಗಳು ಮುಕ್ತಾಯಗೊಂಡ ಮುಂಗಾರು ಅಧಿವೇಶನದಲ್ಲಿ ಜನನ ಮತ್ತು ಮರಣ ನೋಂದಣಿ ಮಸೂದೆಯನ್ನು ಎರಡೂ ಸದನಗಳು ಅಂಗೀಕರಿಸಿದ್ದವು. ಇದರಲ್ಲಿ 1969ರ ಕಾಯಿದೆಗೆ ತಿದ್ದುಪಡಿ ತರಬೇಕೆಂಬ ಬೇಡಿಕೆ ಇತ್ತು.

ಇನ್ಮುಂದೆ ಶಾಲೆ, ಕಾಲೇಜುಗಳಲ್ಲಿ ನೋಂದಣಿ ಸಂದರ್ಭದಲ್ಲಿ, ಪರವಾನಗಿಗಾಗಿ ಅರ್ಜಿ ಸಲ್ಲಿಸುವಾಗ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಆಧಾರ್ ನೋಂದಣಿ, ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಬೇಕಾಗುತ್ತದೆ.

ಜನನ ಮತ್ತು ಮರಣ ಪ್ರಮಾಣ ಪತ್ರ ಕಾಯ್ದೆ ಜಾರಿಯಾದ ನಂತರ ಆಧಾರ್‌ನಿಂದ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸಿದ್ಧಪಡಿಸುವಲ್ಲಿ ಜನನ ಪ್ರಮಾಣಪತ್ರದ ಪ್ರಾಮುಖ್ಯತೆಯೂ ಹೆಚ್ಚಾಗುತ್ತದೆ.

ಈ ಮಸೂದೆಯನ್ನು ಲೋಕಸಭೆಯಲ್ಲಿ ಆಗಸ್ಟ್ 1 ರಂದು ಮತ್ತು ರಾಜ್ಯಸಭೆಯಲ್ಲಿ 7 ಆಗಸ್ಟ್ 2023 ರಂದು ಅಂಗೀಕರಿಸಲಾಯಿತು. ಇದಾದ ಬಳಿಕ ಕೇಂದ್ರ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 1ರಿಂದ ನಿಯಮಗಳನ್ನು ಜಾರಿಗೆ ತರುವುದಾಗಿ ಅಧಿಸೂಚನೆ ಹೊರಡಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *