ತನ್ನ ದೇಹ ಮುಟ್ಟಿ ಬೆತ್ತಲೆಗೊಳಿಸಲು ಯತ್ನಿಸಲಾಗಿತ್ತು ಎಂದ ಜಿಲ್ಲಾಧಿಕಾರಿ – ಲೈಂಗಿಕ ದೌರ್ಜನ್ಯದ ಕರಾಳ ನೆನಪು ಬಿಚ್ಚಿಟ್ಟ ಪಟ್ಟಣಂತಿಟ್ಟ ಡಿಸಿ ದಿವ್ಯಾ ಎಸ್.​ ಅಯ್ಯರ್​

ತನ್ನ ದೇಹ ಮುಟ್ಟಿ ಬೆತ್ತಲೆಗೊಳಿಸಲು ಯತ್ನಿಸಲಾಗಿತ್ತು ಎಂದ ಜಿಲ್ಲಾಧಿಕಾರಿ – ಲೈಂಗಿಕ ದೌರ್ಜನ್ಯದ ಕರಾಳ ನೆನಪು ಬಿಚ್ಚಿಟ್ಟ ಪಟ್ಟಣಂತಿಟ್ಟ ಡಿಸಿ ದಿವ್ಯಾ ಎಸ್.​ ಅಯ್ಯರ್​

ನ್ಯೂಸ್‌ ಆ್ಯರೋ : ಕೇರಳದ ಪಟ್ಟಣಂತಿಟ್ಟ ಜಿಲ್ಲಾಧಿಕಾರಿ ದಿವ್ಯಾ ಎಸ್.​ ಅಯ್ಯರ್​ ಅವರು ತಮ್ಮ ಜೀವನದಲ್ಲಿ ನಡೆದ ಕರಾಳ ಘಟನೆಯನ್ನು ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ.

ಆರನೇ ವಯಸ್ಸಿನಲ್ಲಿದ್ದಾಗ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದನ್ನು ಮತ್ತು ಆ ನೋವಿನಿಂದ ಹೊರಬಂದಿದ್ದು ಹೇಗೆ ಎಂಬುದನ್ನು ದಿವ್ಯಾ ಅವರು ಬಹಿರಂಗಪಡಿಸಿದ್ದಾರೆ.

ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಕುರಿತು ವರದಿ ಮಾಡುವಾಗ ಗಮನಿಸಬೇಕಾದ ಮುಖ್ಯ ಅಂಶಗಳ ಬಗ್ಗೆ ಮಾಧ್ಯಮಗಳಿಗೆ ಎಚ್ಚರಿಕೆ ನೀಡಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯಾ ಎಸ್.​ ಅಯ್ಯರ್​ ಉದ್ಘಾಟಿಸಿ ಮಾತನಾಡಿ, ತಮ್ಮ ಜೀವನದಲ್ಲಿ ನಡೆದ ಕರಾಳ ನೆನಪನ್ನು ಬಿಚ್ಚಿಟ್ಟರು.

‘ಆರನೇ ವಯಸ್ಸಿನಲ್ಲಿ ಕೆಟ್ಟ ಅನುಭವ ಎದುರಿಸಬೇಕಾಯಿತು. ಆ ಇಬ್ಬರು ದುರುಳರ ಮುಖಗಳು ನನಗೆ ಸರಿಯಾಗಿ ನೆನಪಿಲ್ಲ. ನನ್ನನ್ನು ಪ್ರೀತಿಯಿಂದ ಅವರ ಬಳಿಗೆ ಕರೆದು, ನನ್ನ ದೇಹವನ್ನು ಮುಟ್ಟಿದರು. ನನ್ನ ಬಟ್ಟೆಗಳನ್ನು ಕಳಚಿ, ಬೆತ್ತಲೆಗೊಳಿಸಲು ಯತ್ನಿಸಿದರು’ ಎಂದು ಹೇಳಿದ್ದಾರೆ.

‘ಏನೋ ಅನಿರೀಕ್ಷಿತ ಘಟನೆ ನಡೆಯುತ್ತಿದೆ ಎಂಬುದು ನನಗೆ ಅರ್ಥವಾದಾಗ ನಾನು ಅವರ ಬಿಗಿ ಹಿಡಿತದಿಂದ ಬಿಡಿಸಿಕೊಂಡು ಓಡಿ ಹೋದೆ. ಆ ಸಮಯದಲ್ಲಿ ನನಗೆ ಹಾಗೆ ಮಾಡಬೇಕೆಂದು ಅನಿಸಿತು. ಆದರೆ, ಎಲ್ಲ ಮಕ್ಕಳೂ ಹಾಗೆ ಮಾಡಲು ಸಾಧ್ಯವಿಲ್ಲ’ ಎಂದು ದಿವ್ಯಾ ಹೇಳಿದರು.

‘ಪಾಲಕರು ಮಾನಸಿಕವಾಗಿ ನನಗೆ ಬೆಂಬಲ ನೀಡಿದ್ದರಿಂದ ನಾನು ಆ ನೋವಿನಿಂದ ಹೊರಬರಲು ಸಾಧ್ಯವಾಯಿತು. ಆ ಬಳಿಕ ನಾನು ಜನಸಂದಣಿಯನ್ನು ಎದುರಿಸಿದಾಗ, ಆ ಎರಡು ಮುಖಗಳು ಇವೆಯೇ ಎಂದು ನೋಡಲು ನಾನು ಎಲ್ಲರನ್ನೂ ಎಚ್ಚರಿಕೆಯಿಂದ ನೋಡುತ್ತೇನೆ. ಇಂತಹ ಕರಾಳ ಘಟನೆಗಳು ಅಮಾಯಕ ಮಕ್ಕಳ ಜೀವನದ ಉದ್ದಕ್ಕೂ ಕಾಡುತ್ತವೆ. ಆದ್ದರಿಂದ ಎಚ್ಚರಿಕೆ ವಹಿಸಬೇಕು’ ಎಂದು ಸಲಹೆ ನೀಡಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *