G20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪಿಎಂ ಮನಮೋಹನ್ ಸಿಂಗ್, ದೇವೇಗೌಡಗೆ ಬುಲಾವ್ – ನಾನು ಭಾಗಿಯಾಗಲ್ಲ ಎಂದ ದೊಡ್ಡ ಗೌಡ್ರು, ಕಾರಣ ಏನು?

G20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪಿಎಂ ಮನಮೋಹನ್ ಸಿಂಗ್, ದೇವೇಗೌಡಗೆ ಬುಲಾವ್ – ನಾನು ಭಾಗಿಯಾಗಲ್ಲ ಎಂದ ದೊಡ್ಡ ಗೌಡ್ರು, ಕಾರಣ ಏನು?

ನ್ಯೂಸ್‌ ಆ್ಯರೋ : ಜಿ20 ಶೃಂಗಸಭೆಯ ಅಂಗವಾಗಿ ನಾಳೆ (ಸೆ.9ರಂದು) ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರು ಔತಣಕೂಟವನ್ನು ಆಯೋಜಿಸಿದ್ದಾರೆ. ಇದಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್ ಡಿ ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಆರೋಗ್ಯದ ಕಾರಣ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ದೇವೇಗೌಡ ಅವರು ಹೇಳಿದ್ದಾರೆ.

ಈ ಬಗ್ಗೆ ದೇವೇಗೌಡ ಅವರು ಟ್ವೀಟ್ ಮಾಡಿದ್ದು, ‘ಆರೋಗ್ಯ ಕಾರಣದಿಂದ ಸೆ.9ರಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಇನ್ನೂ ಮಾಜಿ ಪ್ರದಾನಿ ಮನಮೋಹನ್ ಸಿಂಗ್ ಅವರು ಕೂಟದಲ್ಲಿ ಭಾಗಿಯಾಗುವ ಬಗ್ಗೆ ಇದುವರೆಗೆ ಖಚಿತಪಡಿಸಿಲ್ಲ. ಈ ಔತಣಕೂಟದಲ್ಲಿ ಸುಮಾರು 500 ಉದ್ಯಮಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಅದಲ್ಲದೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜುಲೈ 2022 ರ ನಂತರ ಅವರ ಮೊದಲ ಭೇಟಿಯಾಗಲಿರುವ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಜಿ20 ಶೃಂಗಸಭೆ ಔತಣ ಕೂಟದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯು ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರನ್ನು ಆಯೋಜಿಸಲು ಸಿದ್ಧವಾಗಿದೆ. ನೂತನವಾಗಿ ಉದ್ಘಾಟನೆಗೊಂಡ ಭಾರತ ಮಂಟಪದ ಪ್ರಗತಿ ಮೈದಾನದಲ್ಲಿ ಶೃಂಗಸಭೆ ನಡೆಯಲಿದ್ದು, ವಿದೇಶಿ ಪ್ರತಿನಿಧಿಗಳನ್ನು ಸ್ವಾಗತಿಸಲು ಅಲಂಕರಿಸಲಾಗಿದೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *