ಶ್ರೀನಗರದ ಪಹರೆಗೆ ಸಜ್ಜಾಗಿದೆ ಮಿಗ್-29 ಫೈಟರ್​ ಜೆಟ್ ಸ್ಕ್ವಾಡ್ರನ್ – ಭಾರತದ ಗಡಿಯ ರಕ್ಷಣೆ ಮಾಡುತ್ತೆ ಈ ಸ್ಕ್ವಾಡ್ರನ್, ಹೇಗೆ ಗೊತ್ತಾ?

ಶ್ರೀನಗರದ ಪಹರೆಗೆ ಸಜ್ಜಾಗಿದೆ ಮಿಗ್-29 ಫೈಟರ್​ ಜೆಟ್ ಸ್ಕ್ವಾಡ್ರನ್ – ಭಾರತದ ಗಡಿಯ ರಕ್ಷಣೆ ಮಾಡುತ್ತೆ ಈ ಸ್ಕ್ವಾಡ್ರನ್, ಹೇಗೆ ಗೊತ್ತಾ?

ನ್ಯೂಸ್ ‌ಆ್ಯರೋ‌ : ಪಾಕಿಸ್ತಾನ ಮತ್ತು ಚೀನಾ ದೇಶಗಳಿಂದ ಬರುವ ಬೆದರಿಕೆ ಹಾಗೂ ಇನ್ನಿತರ ದಾಳಿಗಳನ್ನು ಎದುರಿಸಲು ಶ್ರೀನಗರದ ವಾಯುನೆಲೆಯಲ್ಲಿ ನವೀಕರಿಸಿದ ಮಿಗ್-29 ಫೈಟರ್ ಜೆಟ್‌ಗಳ ತಂಡವೊಂದನ್ನು (ಸ್ಕ್ವಾಡ್ರನ್‌) ಭಾರತ ನಿಯೋಜಿಸಿದೆ.

ಈ ಫೈಟರ್ ಜೆಟ್‌ಗಳ ಗುಂಪನ್ನು ಉತ್ತರದ ರಕ್ಷಕ ಎಂದು ಕರೆಯಲಾಗುತ್ತದೆ. ಪ್ರಮುಖವಾಗಿ ಪಾಕಿಸ್ತಾನದಿಂದ ಎದುರಾಗುವ ಬೆದರಿಕೆ, ದಾಳಿಗಳನ್ನು ಎದುರಿಸುವ ಸಾಮರ್ಥ್ಯವನ್ನು ಈ ಮಿಗ್-29 ಫೈಟರ್ ಜೆಟ್ ಹೊಂದಿದೆ.

ಶ್ರೀನಗರದಂತಹ ಎತ್ತರ ಪ್ರದೇಶದಲ್ಲಿ ಈ ಯುದ್ಧ ವಿಮಾನ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಇಲ್ಲಿ ಒತ್ತಡವೂ ಹೆಚ್ಚಾಗಿರುವುದರಿಂದ ಈ ಪರಿಸ್ಥಿತಿಯಲ್ಲಿ ಈ ಯುದ್ಧ ವಿಮಾನಗಳು ಶತ್ರುಗಳನ್ನು ಎದುರಿಸಲು ಸಮರ್ಥವಾಗಿದೆ ಎಂದು ಭಾರತೀಯ ವಾಯುಪಡೆಯ ಪೈಲಟ್ ಸ್ಕ್ಯಾಡ್ರನ್ ಲೀಡರ್ ವಿಪುಲ್ ಶರ್ಮಾ ಹೇಳಿದ್ದಾರೆ.

ಅಲ್ಲದೇ ಮಿಗ್ -29 ದೀರ್ಘ-ಶ್ರೇಣಿಯ ಕ್ಷಿಪಣಿ ಮತ್ತು ಎಲ್ಲ ಮಾನದಂಡಗಳನ್ನು ಪೂರೈಸುವ ಕಾರ್ಯತಂತ್ರವನ್ನು ಹೊಂದಿದೆ. ಇದರಿಂದಾಗಿ ನಾವು ಎರಡೂ ರಂಗಗಳಲ್ಲಿ ಶತ್ರುಗಳನ್ನು ಸಮರ್ಥವಾಗಿ ಎದುರಿಸಬಹುದು ಎಂದು ಭಾರತೀಯ ವಾಯುಪಡೆಯ ಪೈಲಟ್ ಸ್ಕ್ವಾಡ್ರನ್ ಲೀಡರ್ ವಿಪುಲ್ ಶರ್ಮಾ ತಿಳಿಸಿದ್ದಾರೆ.

ಸಂಘರ್ಷದ ಸಮಯದಲ್ಲಿ ಶತ್ರುಗಳ ವಿಮಾನಗಳನ್ನು ನಿಷ್ಕ್ರಿಯಗೊಳಿಸುವ ಶಕ್ತಿಯನ್ನೂ ಮಿಗ್-29 ಹೊಂದಿದ್ದು, ಈ ಯುದ್ಧ ವಿಮಾನ ರಾತ್ರಿಯಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯವಿದೆ. ಅಲ್ಲದೇ ಇದು ಗಾಳಿಯಿಂದ ಗಾಳಿಗೆ ಇಂಧನ ತುಂಬುವ ಸಾಮರ್ಥ್ಯವನ್ನು ಹೊಂದಿದ್ದು, ದೀರ್ಘ ವ್ಯಾಪ್ತಿಯನ್ನು ಹೊಂದಿದ್ದು, ಈ ವಿಮಾನದ ಅತಿದೊಡ್ಡ ಸಾಮರ್ಥ್ಯವೆಂದರೆ ಅದು ಭಾರತೀಯ ವಾಯುಪಡೆಯಿಂದ ಆರಿಸಲ್ಪಟ್ಟ ಪೈಲೆಟ್‌ಗಳು ಇದರಲ್ಲಿ ಸೇವೆ ಸಲ್ಲಿಸಲಿದ್ದಾರೆ ಎಂದು ಫೈಟ್‌ ಜೆಟ್‌ ತಂಡದ ನಾಯಕ ಶಿವಮ್ ರಾಣಾ ಮಾಹಿತಿ ನೀಡಿದ್ದಾರೆ.

ಇನ್ನು MiG 29, MiG-21s ಗಿಂತ ಹೆಚ್ಚು ಬಲಶಾಲಿ ಮತ್ತು ಶೀಘ್ರ ಪ್ರಕ್ರಿಯೆ ಶಕ್ತಿಯನ್ನು ಹೊಂದಿದ್ದು, ಹಲವು ವರ್ಷಗಳಿಂದ ಇದು ಕಾಶ್ಮೀರ ಕಣಿವೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಮತ್ತು ನಮ್ಮ ದೇಶಕ್ಕೆ ರಕ್ಷಣಾ ಕವಚವಾಗಿರಲು ಸಮರ್ಥವಾಗಿವೆ. 2019ರಲ್ಲಿ ಬಾಲಾಕೋಟ್ ವಾಯುದಾಳಿ ನಂತರ ಇದು ಪ್ರತಿಯುತ್ತರವಾಗಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿ F-16ನ್ನು ಹೊಡೆದುರುಳಿಸಿದ್ದವು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *