ಮೋದಿಗೆ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಿದ ಹಾಫ್ ಕೋಟ್ ಉಡುಗೊರೆ ನೀಡಿದ ಇಂಡಿಯನ್ ಆಯಿಲ್ – ಇದರ ಹಿನ್ನೆಲೆ ಏನ್ ಗೊತ್ತಾ ?

ಮೋದಿಗೆ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಿದ ಹಾಫ್ ಕೋಟ್ ಉಡುಗೊರೆ ನೀಡಿದ ಇಂಡಿಯನ್ ಆಯಿಲ್ – ಇದರ ಹಿನ್ನೆಲೆ ಏನ್ ಗೊತ್ತಾ ?

ನ್ಯೂಸ್ ಆ್ಯರೋ : ಪ್ರಪಂಚದ ಅತ್ಯಂತ ಜನಪ್ರಿಯ ನಾಯಕ ಎನಿಸಿಕೊಂಡಿರುವ ಮೋದಿಯವರಿಗೆ ಎಲ್ಲೇ ಹೋದರೂ ಒಂದೊಂದು ಅತ್ಯಾಕರ್ಷಕ ಉಡುಗೊರೆಗಳು ಸಿಗುತ್ತವೆ. ಇದೀಗ, ನೆಲಮಂಗಲ ಹತ್ತಿರದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ‌ ಕೇಂದ್ರದಲ್ಲಿ ಭಾರತ ಸರ್ಕಾರದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ ಆಯೋಜಿಸಿದ್ದ ‘ಭಾರತ ಇಂಧನ ಸಪ್ತಾಹ-2023’ ಕ್ಕೆ ಫೆ. 6ರಂದು‌ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು.

ಈ ಸಂದರ್ಭದಲ್ಲಿ ಏಕಬಳಕೆ ಪೆಟ್ ಬಾಟಲ್ ಮರು ಬಳಸಿ ತಯಾರಿಸಿದ ಜಾಕೆಟ್, ಸೋಲಾರ್ ಕುಕ್ ಟಾಪ್ ಬಿಡುಗಡೆ ಮಾಡಿದ ಅವರು, ಹಸಿರು ಇಂಧನ ಮೂಲದಿಂದ ಚಾಲಿತ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು‌. ಜೊತೆಗೆ ನರೇಂದ್ರ ಮೋದಿಯವರಿಗೆ ಇಂಡಿಯನ್ ಆಯಿಲ್​ನ ಅಧ್ಯಕ್ಷರು ತ್ಯಾಜ್ಯ ಪೆಟ್​ ಬಾಟಲಿಗಳಿಂದ ತಯಾರಿಸಿದ ಪೇಟ ಮತ್ತು ಹಾಫ್ ಕೋಟ್ ಉಡುಗೊರೆಯಾಗಿ ನೀಡಿ ಗೌರವಿಸಿದರು.

ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಿದ ಸಮವಸ್ತ್ರವನ್ನು ಮೋದಿ ಅವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಇಂಡಿಯನ್ ಆಯಿಲ್ ಕಂಪನಿ ಲೋಕಾರ್ಪಣೆ ಮಾಡಿತು. ಬಳಿಕ ಪರಿಸರ ಇಂಧನದ ಹಲವು ಸಾಧ್ಯತೆಗಳನ್ನು ಬಿಂಬಿಸುವ ಸಾಕ್ಷ್ಯಚಿತ್ರವನ್ನು ಸಮಾವೇಶದಲ್ಲಿ ಪ್ರದರ್ಶಿಸಲಾಯಿತು.

ನಂತರ ಗ್ರೀನ್ ಮೊಬಿಲಿಟಿ ರ್ಯಾಲಿಗೂ ಮೋದಿಯವರು ಚಾಲನೆ ನೀಡಿದರು. ಬಳಿಕ ಅಡುಗೆಮನೆಗಳಲ್ಲಿ ಸುಲಭವಾಗಿ ಬಳಸಲು ಸಾಧ್ಯವಿರುವ ವಿಶಿಷ್ಟ ಟ್ವಿನ್ ಕುಕ್​ಟಾಪ್ ಸೋಲಾರ್ ಕುಕ್ಕರ್​ ಒಂದನ್ನು ಅನಾವರಣಗೊಳಿಸಿದರು.

ಮಾಲಿನ್ಯ ರಹಿತ ಸುಂದರ ಪರಿಸರ‌ನಿರ್ಮಾಣಕ್ಕಾಗಿ, ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ಹಂತಹಂತವಾಗಿ ತೊಡೆದುಹಾಕಲು ಪ್ರಧಾನ ಮಂತ್ರಿಯವರ ದೂರದೃಷ್ಟಿಯಿಂದ ಮಾರ್ಗದರ್ಶನ ಪಡೆದುಕೊಂಡಿರುವ ಇಂಡಿಯನ್ ಆಯಿಲ್, ಮರುಬಳಕೆಯ ಪಾಲಿಯೇಸ್ಟರ್ ಹಾಗೂ ಹತ್ತಿಯಿಂದ ತಯಾರಿಸಿದ ಚಿಲ್ಲರೆ ಗ್ರಾಹಕ ಅಟೆಂಡೆಂಟ್‌ಗಳು ಮತ್ತು ಎಲ್‌ಪಿಜಿ ವಿತರಣಾ ಸಿಬ್ಬಂದಿಗೆ ಸಮವಸ್ತ್ರವನ್ನು ಅಳವಡಿಸಿದೆ.

ಗ್ರಾಹಕ ಅಟೆಂಡೆಂಟ್‌ನ ಇಂಡಿಯನ್ ಆಯಿಲ್ ಈ ಉಪಕ್ರಮವನ್ನು ‘ಅನ್‌ಬಾಟಲ್ಡ್’ ಮೂಲಕ ಮತ್ತಷ್ಟು ತೆಗೆದುಕೊಳ್ಳುತ್ತಿದೆ. ಸುಸ್ಥಿರ ಉಡುಪುಗಳ ಬ್ರ್ಯಾಂಡ್, ಮರುಬಳಕೆಯ ಪಾಲಿಯೇಸ್ಟರ್‌ನಿಂದ ತಯಾರಿಸಿದ ಸರಕುಗಳಿಗಾಗಿ ಪ್ರಾರಂಭಿಸಲಾಗಿದೆ.

ಈ ಬ್ರ್ಯಾಂಡ್ ಅಡಿಯಲ್ಲಿ, ಇಂಡಿಯನ್ ಆಯಿಲ್ ಇತರ ತೈಲ ಮಾರುಕಟ್ಟೆ ಕಂಪನಿಗಳ ಗ್ರಾಹಕ ಅಟೆಂಡೆಂಟ್‌ಗಳಿಗೆ ಸಮವಸ್ತ್ರದ ಅವಶ್ಯಕತೆಗಳನ್ನು ಪೂರೈಸುವ ಗುರಿಯನ್ನು ಹೊಂದಿದೆ. ಸೈನ್ಯಕ್ಕೆ ಯುದ್ಧ ಸಮವಸ್ತ್ರಗಳು, ಸಂಸ್ಥೆಗಳಿಗೆ ಸಮವಸ್ತ್ರಗಳು / ಉಡುಪುಗಳು ಮತ್ತು ಚಿಲ್ಲರೆ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶವನ್ನು ಇದು ಹೊಂದಿದೆ ಎಂದು ಕಂಪೆನಿ‌ ತಿಳಿಸಿದೆ‌.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *