ಅಪ್ರಾಪ್ತೆಯನ್ನು 22 ಬಾರಿ ಚುಚ್ಚಿ, ಕಲ್ಲು ಎತ್ತಿಹಾಕಿ ಕೊಂದಾತ ಅಂದರ್ – ಕೊಲೆ ಆರೋಪಿ ಮಾಡಿದ ಆ ತಪ್ಪಿನಿಂದಲೇ ಆತ ಸಿಕ್ಕಿಬಿದ್ದ..!!

ಅಪ್ರಾಪ್ತೆಯನ್ನು 22 ಬಾರಿ ಚುಚ್ಚಿ, ಕಲ್ಲು ಎತ್ತಿಹಾಕಿ ಕೊಂದಾತ ಅಂದರ್ – ಕೊಲೆ ಆರೋಪಿ ಮಾಡಿದ ಆ ತಪ್ಪಿನಿಂದಲೇ ಆತ ಸಿಕ್ಕಿಬಿದ್ದ..!!

ನ್ಯೂಸ್ ಆ್ಯರೋ‌ : ಪ್ರೀತಿಸುತ್ತಿದ್ದ ಯುವತಿಯನ್ನು ಸಾರ್ವಜನಿಕವಾಗಿಯೇ ಭೀಕರವಾಗಿ ಕೊಂದ ಯುವಕ ಸಿನಿಮೀಯ ರೀತಿಯಲ್ಲಿ ಸಿಕ್ಕಿ ಬಿದ್ದಿರುವ ಘಟನೆ ದಿಲ್ಲಿಯಲ್ಲಿ ನಡೆದಿದೆ. ಅದಕ್ಕೆ ಕಾರಣ ಆತ ತಂದೆಗೆ ಮಾಡಿದ ಒಂದು ಕರೆ ಎನ್ನುವುದು ಕುತೂಹಲಕಾರಿ ಅಂಶ.

ಉತ್ತರ ಪ್ರದೇಶ ಮೂಲದ ಎಸಿ ಎಲೆಕ್ಟ್ರಿಷಿಯನ್‌ 22 ವರ್ಷದ ಸಾಹಿಲ್‌ ಎಂಬಾತ ಆರೋಪಿ. ಈತ 17 ವರ್ಷದ ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ. ದಿಲ್ಲಿಯಲ್ಲೇ ನೆಲೆಸಿದ್ದ ಸಾಹಿಲ್‌ ಹಾಗೂ ಯುವತಿ ನಡುವೆ ಕೆಲ ವಿಚಾರವಾಗಿ ಶನಿವಾರ ಜಗಳ ನಡೆದಿತ್ತು.

ಇದು ರವಿವಾರವೂ ಮುಂದುವರಿದು ಮಾತುಕತೆ ವಿಕೋಪಕ್ಕೆ ತಿರುಗಿ ಶಹಬಾದ್‌ ಡೈರಿ ಪ್ರದೇಶದಲ್ಲಿ ಸಾಹಿಲ್‌ 22 ಬಾರಿ ಆಕೆಗೆ ಇರಿದು, 5 ಬಾರಿ ಕಲ್ಲನ್ನು ತಲೆಯ ಮೇಲೆ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದ. ಇದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.

ಕೊನೆಗೆ ಸಾಹಿಲ್‌ ಅಲ್ಲಿಂದ ತಲೆ ಮರೆಸಿಕೊಂಡು ಸ್ವಂತ ಊರಾದ ಭುಲೆಂದ್‌ ನಗರಕ್ಕೆ ತೆರಳಿದ್ದ. ಸಂಬಂಧಿಯ ಮನೆಯಲ್ಲಿ ಆಶ್ರಯ ಪಡೆಯಲು ಬಯಸಿ ತನ್ನ ತಂದೆಗೆ ಕರೆ ಮಾಡಿ ಘಟನೆ ಕುರಿತು ಮಾಹಿತಿ ನೀಡಿದ್ದ. ತನಿಖೆ ಚುರುಕುಗೊಳಿಸಿದ್ದ ದಿಲ್ಲಿ ಪೊಲೀಸರು ಆತನ ಮೊಬೈಲ್ ನೆಟ್‌ವರ್ಕ್‌ ಮೇಲೆ ನಿಗಾ ಇರಿಸಿದ್ದರು.

ಆತ ಕರೆ ಮಾಡಿದ್ದ ಟವರ್‌ ಪ್ರದೇಶದ ಮಾಹಿತಿ ಆಧರಿಸಿ ಭುಲೆಂದ್‌ ಶಹರ್‌ನಲ್ಲಿಯೇ ಬಂಧಿಸಲಾಗಿದೆ ಎಂದು ದಿಲ್ಲಿ ಪೊಲೀಸ್‌ ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ. ಸಂತ್ರಸ್ತೆಯೊಂದಿಗೆ ತನ್ನ ಸಂಬಂಧ ಮುರಿದು ಬಿದ್ದ ನಂತರ ಕೋಪಗೊಂಡಿದ್ದ ಆತ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಲವ್‌ ಜಿಹಾದ್‌ ಶಂಕೆ
ಬಿಜೆಪಿಯು ಕೊಲೆ ಪ್ರಕರಣವನ್ನು ಲವ್‌ ಜಿಹಾದ್‌ ಎಂದು ಹೇಳಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದೆ. ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಘಟನೆಯ ತನಿಖೆ ನಡೆಸಿ ತಪ್ಪಿತಸ್ಥಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದಾಗಿ ಹೇಳಿದ್ದಾರೆ.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *