ಬಿರಿಯಾನಿಯೊಂದಿಗೆ ಸಲಾಡ್ ಕೇಳಿದ್ದೇ ಗ್ರಾಹಕನ ಜೀವಕ್ಕೆ ಮುಳುವಾಯ್ತು..!! – ಅದೇನಾಯ್ತು ಅಂದ್ರೆ…

ಬಿರಿಯಾನಿಯೊಂದಿಗೆ ಸಲಾಡ್ ಕೇಳಿದ್ದೇ ಗ್ರಾಹಕನ ಜೀವಕ್ಕೆ ಮುಳುವಾಯ್ತು..!! – ಅದೇನಾಯ್ತು ಅಂದ್ರೆ…

ನ್ಯೂಸ್ ಆ್ಯರೋ : ಬಿರಿಯಾನಿ ಜೊತೆ ಹೆಚ್ಚು ಸಲಾಡ್ ಕೇಳಿದ್ದೇ ತಪ್ಪಾಯಿತು. ಯಾಕೆಂದರೆ ಇದರಿಂದ ಗ್ರಾಹಕನೊಬ್ಬ ಜೀವವನ್ನೇ ಕಳೆದುಕೊಳ್ಳಬೇಕಾಯಿತು.

ಹೈದರಾಬಾದ್ ನ ಪುಂಜಗುಟ್ಟ ಪ್ರದೇಶದ ಮೆರಿಡಿಯನ್ ರೆಸ್ಟೋರೆಂಟ್ ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

ಲಿಯಾಕತ್ ಎಂಬಾತ ಸ್ನೇಹಿತರೊಂದಿಗೆ ರೆಸ್ಟೋರೆಂಟ್ ಗೆ ಬಂದಿದ್ದು, ಈ ವೇಳೆ ಬಿರಿಯಾನಿ ಆರ್ಡರ್ ಮಾಡಿದ್ದಾರೆ. ಈ ವೇಳೆ ಬಿರಿಯಾನಿ ತಿನ್ನುತ್ತಾ ಹೆಚ್ಚುವರಿಯಾಗಿ ಸಲಾಡ್ ನೀಡುವಂತೆ ಕೇಳಿದ್ದಾರೆ. ಈ ವಿಚಾರವಾಗಿ ಹೊಟೇಲ್ ಸಿಬ್ಬಂದಿ ಮತ್ತು ಅವರ ನಡುವೆ ವಾಗ್ವಾದ ನಡೆದಿದೆ. ಬಳಿಕ ಜಗಳ ದೊಡ್ಡದಾಗಿ ಹೊಟೇಲ್ ಸಿಬ್ಬಂದಿ ಮತ್ತು ಗ್ರಾಹಕರ ಗುಂಪಿನ ನಡುವೆ ಹೊಡೆದಾಟ ಪ್ರಾರಂಭವಾಗಿದೆ.

ಸಮಸ್ಯೆ ಬಗೆ ಹರಿಸಲು ಎರಡೂ ಗುಂಪಿನವರು ರಾತ್ರಿ ಪೊಲೀಸ್ ಠಾಣೆ ಸಮೀಪ ಬರುತ್ತಿದ್ದಂತೆ ಲಿಯಾಕತ್ ಗೆ ಎದೆನೋವು ಕಾಣಿಸಿಕೊಂಡಿದ್ದು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಹೊಟೇಲ್ ಮ್ಯಾನೇಜರ್ ಸೇರಿ ಸಿಬ್ಬಂದಿ ಲಿಯಾಕತ್ ಗೆ ತೀವ್ರವಾಗಿ ಥಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳೊಬ್ಬರು ತಿಳಿಸಿದ್ದಾರೆ.

ತೀವ್ರವಾಗಿ ಹಲ್ಲೆಗೆ ಒಳಗಾದ ಪರಿಣಾಮ ಅವರಿಗೆ ಹೃದಯ ಸ್ಟಂಭನವಾಗಿರಬಹುದು ಎಂದು ವೈದ್ಯರು ಶಂಕಿಸಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಕಾರಣ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *