‘ಜಾತಿಗಳನ್ನು‌ ಸೃಷ್ಟಿಸಿದ್ದು ದೇವರಲ್ಲ, ಪುರೋಹಿತರು’ – ವಿವಾದಾತ್ಮಕ ಹೇಳಿಕೆ ನೀಡಿದ ಆರ್.ಎಸ್.ಎಸ್ ಮೋಹನ್‌ ಭಾಗವತ್

‘ಜಾತಿಗಳನ್ನು‌ ಸೃಷ್ಟಿಸಿದ್ದು ದೇವರಲ್ಲ, ಪುರೋಹಿತರು’ – ವಿವಾದಾತ್ಮಕ ಹೇಳಿಕೆ ನೀಡಿದ ಆರ್.ಎಸ್.ಎಸ್ ಮೋಹನ್‌ ಭಾಗವತ್

ನ್ಯೂಸ್ ಆ್ಯರೋ : ‘ಜಾತಿಗಳನ್ನು ಸೃಷ್ಟಿಸಿದ್ದು ಪುರೋಹಿತರೇ ಹೊರತು ದೇವರಲ್ಲ’ ಎಂಬ ಆರ್.ಎಸ್.ಎಸ್.ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ಸದ್ಯ ದೇಶದಾದ್ಯಂತ ಚರ್ಚೆಗೀಡು ಮಾಡಿದೆ. ಸಾಮಾಜಿಕ ಜಾಲತಾಣದಲ್ಲೂ ಮೋಹನ್ ಭಾಗವತ್ ಹೇಳಿಕೆಯ ಬಗ್ಗೆ ಸಾಕಷ್ಟು ಪರ ವಿರೋಧ ಚರ್ಚೆಗಳಾಗುತ್ತಿವೆ.

ರವೀಂದ್ರ ನಾಟ್ಯ ಮಂದಿರದ ಸಭಾಂಗಣದಲ್ಲಿ ಸಂತ ಶಿರೋಮಣಿ ರೋಹಿದಾಸರ 647ನೇ ಜನ್ಮದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾವು ಜೀವನೋಪಾಯವನ್ನು ಗಳಿಸಿದಾಗ, ನಮಗೆ ಸಮಾಜದ ಬಗ್ಗೆ ಜವಾಬ್ದಾರಿಯೂ ಇರುತ್ತದೆ, ದೇಶದಲ್ಲಿ ಆತ್ಮಸಾಕ್ಷಿ ಮತ್ತು ಪ್ರಜ್ಞೆ ಒಂದೇ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಎಂದರು.

ಮುಂದುವರೆಸಿ, ಪ್ರತಿಯೊಂದು ಕೆಲಸವು ಸಮಾಜದ ಹೆಚ್ಚಿನ ಒಳಿತಿಗಾಗಿ ಇರುವಂತಹದ್ದು. ಆದ್ದರಿಂದ ಕೆಲಸವಂಬುದು ಹೇಗೆ ದೊಡ್ಡದು ಅಥವಾ ಚಿಕ್ಕದು ಎಂದು ವಿಭಿನ್ನವಾಗಿರುತ್ತದೆ?’. ನಮ್ಮ ಸೃಷ್ಟಿಕರ್ತನಿಗೆ ನಾವು ಸಮಾನರು, ಯಾವುದೇ ಜಾತಿ ಅಥವಾ ಪಂಥವಿಲ್ಲ. ಈ ಭಿನ್ನಾಭಿಪ್ರಾಯಗಳನ್ನು ನಮ್ಮ ಪುರೋಹಿತರು ಸೃಷ್ಟಿಸಿದ್ದಾರೆ, ಅದು ತಪ್ಪು. ದೇಶದಲ್ಲಿ ಆತ್ಮಸಾಕ್ಷಿ ಮತ್ತು ಪ್ರಜ್ಞೆ ಒಂದೇ ಆಗಿರುತ್ತದೆ ಮತ್ತು ಅಭಿಪ್ರಾಯಗಳು ಮಾತ್ರ ವಿಭಿನ್ನವಾಗಿವೆ’ ಎಂದು ತಿಳಿಸಿದರು.

ಶಾಸ್ತ್ರದಲ್ಲಿ ಬ್ರಾಹ್ಮಣರನ್ನು ಗೆಲ್ಲಲು ಸಾಧ್ಯವಾಗದಿದ್ದರೂ, ಅವರು ಅನೇಕ ಹೃದಯಗಳನ್ನು ಮುಟ್ಟಲು ಸಮರ್ಥರಾಗಿದ್ದರು ಮತ್ತು ಅವರನ್ನು ದೇವರಲ್ಲಿ ನಂಬುವಂತೆ ಮಾಡಿದರು ಎಂದರು. ಸದ್ಯ, ಮೋಹನ್ ಭಾಗವತ್ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *