20 ಕೋಟಿ ಕೊಡದಿದ್ರೆ ನಿಮ್ಮನ್ನು ‌ಶೂಟ್ ಮಾಡಿ ಕೊಲ್ತೇವೆ..!! – ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಈಮೇಲ್, ಪ್ರಕರಣ ದಾಖಲು

20 ಕೋಟಿ ಕೊಡದಿದ್ರೆ ನಿಮ್ಮನ್ನು ‌ಶೂಟ್ ಮಾಡಿ ಕೊಲ್ತೇವೆ..!! – ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಈಮೇಲ್, ಪ್ರಕರಣ ದಾಖಲು

ನ್ಯೂಸ್ ಆ್ಯರೋ : ದೇಶದ ಅಗ್ರ ಶ್ರೀಮಂತ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ವಾರದ ಆರಂಭದಲ್ಲಿ ಮುಖೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‍ಗಳನ್ನು ಹೊಂದಿದ್ದೇವೆ ಎಂದು ಇಮೇಲ್‍ನಲ್ಲಿ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ನಿನ್ನೆ ಶಾದಾಬ್ ಖಾನ್ ಎಂಬ ವ್ಯಕ್ತಿಯಿಂದ ಬೆದರಿಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ಟೋಬರ್ 27 ರಂದು ರಾತ್ರಿ 8.51 ಕ್ಕೆ ಇಮೇಲ್ ಬಂದಿದೆ ಎಂದು ಮುಖೇಶ್ ಅಂಬಾನಿ ಅವರ ಕಾರ್ಯನಿರ್ವಾಹಕ ಸಹಾಯಕರು ಭದ್ರತಾ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದರು.

ಪೊಲೀಸರ ಪ್ರಕಾರ, ಶದಾಬ್ ಖಾನ್ ಇಮೇಲ್ ಕಳುಹಿಸಿದ್ದು, ‘ನೀವು ನಮಗೆ 20 ಕೋಟಿ ನೀಡದಿದ್ದರೆ ನಾವು ನಿಮ್ಮನ್ನು ಕೊಲ್ಲುತ್ತೇವೆ, ನಾವು ಭಾರತದ ಅತ್ಯುತ್ತಮ ಶೂಟರ್ಗಳನ್ನು ಹೊಂದಿದ್ದೇವೆ’ ಎಂದು ಮೇಲ್‌ನಲ್ಲಿ ಬರೆಯಲಾಗಿತ್ತು. ಮೇಲ್ ಚಿತ್ರವನ್ನು ನೋಡಿದ ಕೂಡಲೇ ಭದ್ರತಾ ಮುಖ್ಯಸ್ಥರು ಗಾಮ್ದೇವಿ ಪೊಲೀಸ್ ಠಾಣೆಗೆ ಧಾವಿಸಿದರು. ಐಪಿಸಿ ಸೆಕ್ಷನ್ 387 (ಯಾರನ್ನಾದರೂ ಸಾವಿನ ಭಯದಲ್ಲಿ ಇರಿಸುವುದು ಅಥವಾ ಸುಲಿಗೆ ಮಾಡಲು ದೊಡ್ಡ ಹಾನಿ ಮಾಡುವುದು) ಮತ್ತು 506 ಭಾಗ 2 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ, ಗಾಮ್ದೇವಿ ಪೊಲೀಸರು ದೂರಿನ ಆಧಾರದ ಮೇಲೆ ಶದಾಬ್ ಖಾನ್ ವಿರುದ್ಧ ದೂರು ದಾಖಲಿಸಿದ್ದಾರೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *