ಅಂಬಾನಿ ಪುತ್ರಿಗೆ ಅವಳಿ ಮಕ್ಕಳ ಯೋಗ – ಪುಟಾಣಿಗಳಿಗೆ ಆದಿಯಾ, ಕೃಷ್ಣ ಎಂದು ನಾಮಕರಣ

ಅಂಬಾನಿ ಪುತ್ರಿಗೆ ಅವಳಿ ಮಕ್ಕಳ ಯೋಗ – ಪುಟಾಣಿಗಳಿಗೆ ಆದಿಯಾ, ಕೃಷ್ಣ ಎಂದು ನಾಮಕರಣ

ನ್ಯೂಸ್ ಆ್ಯರೋ : ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಪುತ್ರಿ ಇಶಾ ಅಂಬಾನಿ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅದರಲ್ಲಿ ಗಂಡು ಮತ್ತು ಹೆಣ್ಣು ಮಗುವನ್ನು ಸ್ವಾಗತಿಸಲಾಗಿದೆ ಎಂದು ಕುಟುಂಬದವರು ಹೇಳಿಕೆ ಕೊಟ್ಟಿದ್ದು ಮಕ್ಕಳಿಗೆ ಆದಿಯಾ ಮತ್ತು ಕೃಷ್ಣ ಎಂದು ಹೆಸರಿಡಲಾಗಿದೆ.

‘ನಮ್ಮ ಮಕ್ಕಳಾದ ಇಶಾ ಮತ್ತು ಆನಂದ್ ಅವರು 19 ನವೆಂಬರ್ 2022 ರಂದು ಅವಳಿ ಮಕ್ಕಳಿಗೆ ಜನ್ಮನೀಡಿದ್ದಾರೆ. ತಾಯಿ ಮತ್ತು ಮಕ್ಕಳಿಬ್ಬರು ಆರೋಗ್ಯವಾಗಿದ್ದು ಅವರಿಗೆ ಆದಿಯಾ, ಕೃಷ್ಣ ಎಂದು ನಾಮಕರಣ ಮಾಡಲಾಗಿದೆ. ಇಶಾ ಮತ್ತು ಆನಂದ್ ಅವರ ಜೀವನದ ಈ ಪ್ರಮುಖ ಘಟ್ಟವಾದ ಈ ಸಂದರ್ಭದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಬಯಸುತ್ತೇವೆ” ಎಂದು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

2018ರಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಮತ್ತು ಕೈಗಾರಿಕೋದ್ಯಮಿ ಅಜಯ್ ಪಿರಾಮಲ್ ಮತ್ತು ಸ್ವಾತಿ ಪಿರಾಮಲ್ ಅವರ ಪುತ್ರ ಆನಂದ್ ಪಿರಮಾಲ್ ಅವರ ವಿವಾಹವು ಮುಂಬೈನಲ್ಲಿ ಬಹಳ ಅದ್ಧೂರಿಯಾಗಿ ನಡೆದಿತ್ತು. ವಿಶ್ವದ ಖ್ಯಾತನಾಮ ಉದ್ಯಮಿಗಳು ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಬಾಲಿವುಡ್ ತಾರೆಯರು ಆಗಮಿಸಿದ್ದರು.

ರಿಲಯನ್ಸ್ ರೀಟೆಲ್ ವೆಂಚರ್​ನ ಎಕ್ಸ್​ಕ್ಯೂಟಿವ್ ಡೈರೆಕ್ಟರ್ ಇಶಾ ಅಂಬಾನಿ

ರಿಲಯನ್ಸ್ ರೀಟೆಲ್ ವೆಂಚರ್​ನ ಎಕ್ಸ್​ಕ್ಯೂಟಿವ್ ಡೈರೆಕ್ಟರ್ ಆಗಿ ಸದ್ಯ ಇಶಾ ಅಂಬಾನಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಆನಂದ ಪಿರಮಲ್ ಅವರು ಪಿರಮಲ್ ಗ್ರೂಪ್​ನ ಆರ್ಥಿಕ ವಿಭಾಗವನ್ನು ಮುನ್ನಡೆಸುತ್ತಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *