Naari Pooja : ಕೇರಳದ ವಿಷ್ಣುಮಾಯಾ ದೇವಸ್ಥಾನದ ಪೂಜಾರಿಗಳಿಂದ ನಟಿ ಖುಷ್ಬೂಗೆ ಪಾದ ಪೂಜೆ – ಏನಿದು ನಾರಿ ಪೂಜೆಯ ವಿಶೇಷ?

Naari Pooja : ಕೇರಳದ ವಿಷ್ಣುಮಾಯಾ ದೇವಸ್ಥಾನದ ಪೂಜಾರಿಗಳಿಂದ ನಟಿ ಖುಷ್ಬೂಗೆ ಪಾದ ಪೂಜೆ – ಏನಿದು ನಾರಿ ಪೂಜೆಯ ವಿಶೇಷ?

ನ್ಯೂಸ್ ಆ್ಯರೋ : ಕೇರಳದ ತ್ರಿಶೂರ್‌ನ ವಿಷ್ಣುಮಾಯಾ ದೇವಸ್ಥಾನದಲ್ಲಿ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರಿಗೆ ನಾರಿ ಪೂಜೆ ನೆರವೇರಿಸಲಾಗಿದೆ. ಈ ಎಲ್ಲ ಪೋಟೋಗಳನ್ನು ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಏನು ಈ ನಾರಿ ಪೂಜೆಯ ವಿಶೇಷ?

ಈ ದೇವಸ್ಥಾನದ ಆಚರಣೆಗಳ ಪ್ರಕಾರ ಪ್ರತಿ ವರ್ಷ ಒಬ್ಬ ಮಹಿಳೆಯನ್ನು ಆಮಂತ್ರಿಸಿ ಶಾಸ್ತ್ರೋಕ್ತವಾಗಿ ಪಾದಪೂಜೆ ಮಾಡಿ ವಿಧಿವಿಧಾನಗಳಂತೆ ಪೂಜೆ ನೆರವೇರಿಸಲಾಗುತ್ತದೆ. ಪೂಜಾರಿಗಳು ಮಹಿಳೆಯನ್ನು ದೇವತೆಗೆ ಹೋಲಿಸಿ ಪೂಜೆ ಮಾಡುವುದು ಈ ದೇವಸ್ಥಾನದ ವಿಶೇಷ. ಪೂಜೆಯ ವೇಲೆ ಖುಷ್ಬೂ ಅವರ ಪಾದಗಳಿಗೆ ಪೂಜೆ ಮಾಡಿ, ಮಾಲೆ ಹಾಕಿ ರೇಷ್ಮೆ ವಸ್ತ್ರಗಳನ್ನು ಅರ್ಪಿಸಿದ್ದಾರೆ.

ಸ್ವರ್ಗದಿಂದಲೇ ದೇವತೆ ಬಂದು ಪಾದಪೂಜೆ ಮಾಡಿಸಿಕೊಳ್ಳುತ್ತಾಳೆ ಎಂದು ನಾರಿ ಪೂಜೆ ಬಗೆಗೆ ದೇವಸ್ಥಾನದ ಪೂಜಾರಿಗಳ ನಂಬುಗೆಯಾಗಿದೆ.

ಈ ವಿಷಯವನ್ನು ಖುಷ್ಬೂ ಅವರು ಎಕ್ಸ್‌ ತಾಣದಲ್ಲಿ ಹಂಚಿಕೊಂಡಿದ್ದು, ‘ವಿಷ್ಣುಮಾಯಾ ದೇವಸ್ಥಾನದವರು ನಾರಿಪೂಜೆಗೆ ನನ್ನನ್ನು ಆಮಂತ್ರಿಸಿದ್ದು ನಿಜಕ್ಕೂ ನನ್ನ ಅದೃಷ್ಠ. ಇದಕ್ಕಾಗಿ ನಾನು ವಿನೀತಳಾಗಿದ್ದೇನೆ. ಇಂತಹ ಗೌರವವನ್ನು ನೀಡಿದ್ದಕ್ಕೆ ದೇವಸ್ಥಾನಕ್ಕೆ ನಾನು ನಮಿಸುವೆ. ಕೆಟ್ಟದನ್ನು ಅಳಿಸಿ ಒಳ್ಳೆಯದನ್ನು ಪಸರಿಸಲು ಹಾಗೂ ಶಾಂತಿ ನೆಲೆಸಲು ನಾನು ನಿರಂತರವಾಗಿ ಶ್ರಮಿಸುವೆ. ನಾರಿಪೂಜೆಯಿಂದ ಮನುಕುಲಕ್ಕೆ ಒಳ್ಳೆಯದಾಗಲಿ’ ಎಂದು ಬರೆದುಕೊಂಡಿದ್ದಾರೆ.

1970 ರಲ್ಲಿ ಮುಂಬೈ ಮೂಲದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದ ಖುಷ್ಬೂ ಅವರ ಬಾಲ್ಯದ ಹೆಸರು ನಖತ್ ಖಾನ್. ನಟಿಯಾಗಿ, ನಿರ್ಮಾಪಕಿ, ರಾಜಕಾರಣಿಯಾಗಿ ಹೆಸರು ಮಾಡಿರುವ ಅವರು ಬಿಜೆಪಿ ಸೇರಿ ಕಳೆದ ಫೆಬ್ರುವರಿಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *