Big Shocking ; ನ್ಯಾಷನಲ್ ಹೆರಾಲ್ಡ್ ವಂಚನೆ ಪ್ರಕರಣ – ಗಾಂಧಿ ಕುಟುಂಬಕ್ಕೆ ಸೇರಿದ 752 ಕೋಟಿ ಆಸ್ತಿ ಮುಟ್ಟುಗೋಲು..!!

Big Shocking ; ನ್ಯಾಷನಲ್ ಹೆರಾಲ್ಡ್ ವಂಚನೆ ಪ್ರಕರಣ – ಗಾಂಧಿ ಕುಟುಂಬಕ್ಕೆ ಸೇರಿದ 752 ಕೋಟಿ ಆಸ್ತಿ ಮುಟ್ಟುಗೋಲು..!!

ನ್ಯೂಸ್ ಆ್ಯರೋ : ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕಾಂಗ್ರೆಸ್’ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಂಬಂಧಿಸಿದ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ಹಲವು ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಗಾಂಧಿ ಕುಟುಂಬಕ್ಕೆ ಸೇರಿದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ದೆಹಲಿ, ಮುಂಬೈ , ಲಖನೌ ಸೇರಿದಂತೆ ಕೆಲ ನಗರದಲ್ಲಿರುವ ಸ್ಥಿರ ಆಸ್ತಿ ರೂಪದ ಆದಾಯ 661.69 ಕೋಟಿ ರೂಪಾಯಿ ಹಾಗೂ ಯಂಗ್ ಇಂಡಿಯಾ ಸಂಸ್ಥೆಯ ಈಕ್ವಿಟಿ ಷೇರುಗಳಲ್ಲಿ ಹೂಡಿಕೆ ಮಾಡಿರುವ 90.21 ಕೋಟಿ ರೂಪಾಯಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಹಾಗೂ ಯಂಗ್ ಇಂಡಿಯನ್(YI) ಸಂಸ್ಥೆಯ ಒಟ್ಟು 752 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ಥಿ ಹಾಗೂ ಹೂಡಿಕೆ ರೂಪದ ಅಕ್ರಮ ಆದಾಯದವನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲು ಇಡಿ ಆದೇಶ ಹೊರಡಿಸಿದೆ. ದೆಹಲಿ, ಮುಂಬೈ, ಲಖನೌ ಸೇರಿದಂತೆ ಇತರ ನಗರಗಳಲ್ಲಿನ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಟ್ವೀಟ್ ಮಾಡಿದೆ.

ಕಾಂಗ್ರೆಸ್ಸಿನ ಮುಖವಾಣಿಯಾಗಿರುವ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಕುರಿತು ಇಡಿ ತನಿಖೆ ನಡೆಸುತ್ತಿದೆ. ನ್ಯಾಷನಲ್‌ ಹೆರಾಲ್ಡ್‌ ಕಂಪನಿ ಸಹಸ್ರಾರು ಕೋಟಿ ರೂಪಾಯಿ ಆಸ್ತಿ ಹೊಂದಿದೆ. ಅದರ ಮಾಲೀಕತ್ವವನ್ನು ಸದ್ಯ ಯಂಗ್‌ ಇಂಡಿಯನ್‌ ಸಂಸ್ಥೆ ಹೊಂದಿದೆ. ಈ ಯಂಗ್ ಇಂಡಿಯನ್ ಸಂಸ್ಥೆಯಲ್ಲಿ ಕೇವಲ ಮಲ್ಲಿಕಾರ್ಜುನ ಖರ್ಗೆ ಮಾತ್ರ ಉದ್ಯೋಗಿಯಾಗಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಬರೋಬ್ಬರಿ 2,000 ಕೋಟಿ ರೂಪಾಯಿ ಹಗರಣವಾಗಿದೆ. ದೆಹಲಿಯ ಐಟಿಒ ಬಳಿ ಬಹಾದ್ದೂರ್‌ ಶಾ ಜಾಫರ್‌ ಮಾರ್ಗದಲ್ಲಿರುವ ‘ಹೆರಾಲ್ಡ್‌ ಹೌಸ್‌’ ಈ ಪತ್ರಿಕೆಯ ಕೇಂದ್ರ ಕಚೇರಿ. ತೀವ್ರ ನಷ್ಟದಲ್ಲಿದ್ದ ಅಸೋಸಿಯೇಟೆಡ್‌ ಜರ್ನಲ್‌ (ಎಜೆಎಲ್‌)ಗೆ 2001-02 ಹಾಗೂ 2010-11ರ ನಡುವೆ ಕಾಂಗ್ರೆಸ್‌ 90 ಕೋಟಿ ರು. ಸಾಲ ನೀಡಿತ್ತು. ಇದಕ್ಕೆ ಪ್ರತಿಯಾಗಿ ಸೋನಿಯಾ, ರಾಹುಲ್‌ ಮುನ್ನಡೆಸುತ್ತಿದ್ದ ಯಂಗ್‌ ಇಂಡಿಯನ್‌ ಕಂಪನಿಗೆ ಎಜೆಎಲ್‌ ಷೇರುಗಳನ್ನು ಹಂಚಿಕೆ ಮಾಡಲಾಗಿತ್ತು. ನೂರಾರು ಕೋಟಿ ರು. ಬೆಲೆ ಬಾಳುವ ಆಸ್ತಿಯನ್ನು ಕೇವಲ 90 ಕೋಟಿ ರು. ಸಾಲ ಕೊಟ್ಟಂತೆ ಮಾಡಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇ.ಡಿ. ಪ್ರಕರಣ ದಾಖಲಿಸಿಕೊಂಡಿತ್ತು.

ಈ ಸಂಬಂಧ ಸಿಬಿಐ ಈಗಾಗಲೇ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದೆ. ರಾಜಕೀಯ ದುರುದ್ದೇಶಕ್ಕಾಗಿ ಕೇಂದ್ರವು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್, ಅಕ್ರಮ ಹಣ ವರ್ಗಾವಣೆ ಅಥವಾ ಯಾವುದೇ ವಿತ್ತೀಯ ವಿನಿಮಯಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪ್ರತಿಪಾದಿಸಿದೆ.

Related post

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಸಾಲ ತೆಗೆದುಕೊಳ್ಳಲು ಹೊರಟಿದ್ದರೆ ಮತ್ತು ಈ ಕೆಲಸದಲ್ಲಿ…

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…

Leave a Reply

Your email address will not be published. Required fields are marked *