ಪ್ಯಾಲೆಸ್ತೀನ್ – ಇಸ್ರೇಲ್ ನಡುವೆ ಮುಂದುವರೆದ ಯುದ್ದ – ‘ಆಪರೇಷನ್ ಅಜಯ್’ 2ನೇ ವಿಮಾನದಲ್ಲಿ ತವರಿಗೆ ಬಂದ 235 ಭಾರತೀಯರು

ಪ್ಯಾಲೆಸ್ತೀನ್ – ಇಸ್ರೇಲ್ ನಡುವೆ ಮುಂದುವರೆದ ಯುದ್ದ – ‘ಆಪರೇಷನ್ ಅಜಯ್’ 2ನೇ ವಿಮಾನದಲ್ಲಿ ತವರಿಗೆ ಬಂದ 235 ಭಾರತೀಯರು

ನ್ಯೂಸ್ ಆ್ಯರೋ : ಕಳೆದ ಶನಿವಾರ ಆರಂಭಗೊಂಡ ಪ್ಯಾಲೆಸ್ತೀನ್​​-ಇಸ್ರೇಲ್‌ ನಡುವಿನ ಯುದ್ಧ ಮುಂದುವರೆದಿದೆ. ಇದೀಗ ಇಸ್ರೇಲ್‌ನಲ್ಲಿರುವ ಭಾರತೀಯ ನಾಗರಿಕರನ್ನು’ಆಪರೇಷನ್ ಅಜಯ್’ ಅಡಿಯಲ್ಲಿ ಭಾರತಕ್ಕೆ ಕರೆತರಲಾಗುತ್ತಿದೆ. ಇಂದು ಬೆಳಿಗ್ಗೆ 235 ಭಾರತೀಯರನ್ನ ಹೊತ್ತ 2ನೇ ವಿಮಾನವು ದೆಹಲಿಗೆ ಬಂದಿದೆ.

ಇಸ್ರೇಲ್​​ನ ಟೆಲ್ ಅವಿವ್‌ನಿಂದ ಭಾರತಕ್ಕೆ ಬಂದ ಚಾರ್ಟರ್ ವಿಮಾನದಲ್ಲಿ ಇಬ್ಬರು ಶಿಶುಗಳು, ಕೆಲ ಮಕ್ಕಳು ಸೇರಿದಂತೆ 235 ಭಾರತೀಯ ನಾಗರೀಕರು ಇದ್ದಾರೆ. ಈಗಾಗಲೇ ಮೊದಲ ವಿಮಾನದಲ್ಲಿ 212 ಭಾರತೀಯರನ್ನು ಇಸ್ರೇಲ್‌ನಿಂದ ಕರೆತರಲಾಗಿತ್ತು.

ಅಕ್ಟೋಬರ್ 7 ರಂದು ಪ್ಯಾಲೆಸ್ತೀನ್​​ನ ಹಮಾಸ್ ಉಗ್ರರು ಮತ್ತು ಇಸ್ರೇಲಿ ಪಡೆಗಳ ನಡುವೆ ಯುದ್ಧ ಆರಂಭವಾಗಿತ್ತು. ಯುದ್ಧ ಆರಂಭದ ಬೆನ್ನಲ್ಲೇ ಭಾರತದಿಂದ ಇಸ್ರೇಲ್​​ಗೆ ಮತ್ತು ಇಸ್ರೇಲ್​​ನಿಂದ ಭಾರತಕ್ಕೆ ಏರ್ ಇಂಡಿಯಾ ಮತ್ತು ಇತರ ಏರ್‌ಲೈನ್ಸ್ ತನ್ನ ಎಲ್ಲಾ ವಾಣಿಜ್ಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿತ್ತು.

ಇಸ್ರೇಲ್‌ನಿಂದ ಸಿಲುಕಿರುವ ನಾಗರಿಕರನ್ನು ಮರಳಿ ಕರೆತರಲು ಭಾರತ ಸರ್ಕಾರ ಅಕ್ಟೋಬರ್ 11 ರಂದು ‘ಆಪರೇಷನ್ ಅಜಯ್’ ಅನ್ನು ಪ್ರಾರಂಭಿಸಿತು. ಅಕ್ಟೋಬರ್​ 12ರ ಸಂಜೆ ಇಸ್ರೇಲ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಮೊದಲ ವಿಮಾನ ಹೊರಟಿದ್ದು, ಅಕ್ಟೋಬರ್​ 13ರ (ಶುಕ್ರವಾರ) ಬೆಳಗ್ಗೆ ದೆಹಲಿ ತಲುಪಿತು. ಅಗತ್ಯವಿದ್ದಲ್ಲಿ ಭಾರತೀಯ ನೌಕಾಪಡೆಯ ಹಡಗುಗಳನ್ನು ಸಹ ನಿಯೋಜಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿರುವುದಾಗಿ ವರದಿಯಾಗಿದೆ.

ಕಂಟ್ರೋಲ್​ ರೂಮ್​​ ಮತ್ತು ಸಹಾಯವಾಣಿ

ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಗಂಟೆಗಳ ಕಂಟ್ರೋಲ್​ ರೂಮ್​​ ಅನ್ನು ಸ್ಥಾಪಿಸಿದೆ. ನಿಯಂತ್ರಣ ಕೊಠಡಿಯ ಫೋನ್ ನಂಬರ್​:

  • 1800118797 (ಟೋಲ್ ಫ್ರೀ),
  • +91-11 23012113
  • +91-11-23014104
  • +91-11-23017905
  • +919968291988
  • ಇಮೇಲ್ ಐಡಿ — situationroom@mea.gov.in.

ಭಾರತೀಯ ರಾಯಭಾರಿ ಕಚೇರಿಯ ತುರ್ತು ಸಹಾಯವಾಣಿ

  • +972-35226748
  • +972-543278392
  • ಇಮೇಲ್ ಐಡಿ — cons1.telaviv@mea.gov.in.

ಇಸ್ರೇಲ್-ಹಮಾಸ್ ಯುದ್ಧ

ಕಳೆದ ಶನಿವಾರ ಆರಂಭಗೊಂಡು ಪ್ಯಾಲೆಸ್ರೀನ್ ಹಾಗೂ ಇಸ್ರೇಲ್ ದೇಶಗಳ ನಡುವಿನ ಯುದ್ಧ ಇಂದು ಮುಂದುವರೆದಿದೆ. ವರದಿಗಳ ಪ್ರಕಾರ, ಯುದ್ಧದಲ್ಲಿ ಎರಡೂ ಕಡೆಗಳಿಂದ ಈವರೆಗೆ 3,200 ಮಂದಿ ಬಲಿಯಾಗಿದ್ದಾರೆ. ಅಕ್ಟೋಬರ್ 7 ರಂದು ಬೆಳಗ್ಗೆ ಇದ್ದಕ್ಕಿದ್ದಂತೆ ಇಸ್ರೇಲ್‌ನ ಮೇಲ್ ಹಮಾಸ್ ಉಗ್ರರು 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿತ್ತು. ಇಸ್ರೇಲ್​ಗೆ ಇದು ಗಾಜಾದಿಂದ ಅನಿರೀಕ್ಷಿತ ದಾಳಿಯಾಗಿದ್ದು, ರೊಚ್ಚಿಗೆದ್ದ ಇಸ್ರೇಲ್​ ಪ್ರತೀಕಾರದ ದಾಳಿ ಮಾಡಿದೆ. ಇದರಲ್ಲಿ ಪ್ಯಾಲೇಸ್ತೀನ್‌ನ ನಾಗರೀಕರು ಸಾವನ್ನಪ್ಪಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *