ನನ್ನ ತಲೆಗೆ 10 ಕೋಟಿ ರೂ. ಬೇಡ, 10 ರೂ. ಸಾಕು! – ಹಿಂದೂ ಧರ್ಮ ಹೀಗಳೆದ ಉದಯನಿಧಿ ಸ್ಟಾಲಿನ್ ಹೀಗೆ ಹೇಳಿದ್ಯಾಕೆ?

ನನ್ನ ತಲೆಗೆ 10 ಕೋಟಿ ರೂ. ಬೇಡ, 10 ರೂ. ಸಾಕು! – ಹಿಂದೂ ಧರ್ಮ ಹೀಗಳೆದ ಉದಯನಿಧಿ ಸ್ಟಾಲಿನ್ ಹೀಗೆ ಹೇಳಿದ್ಯಾಕೆ?

ನ್ಯೂಸ್ ಆ್ಯರೋ‌ : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆಗೆ ಅಯೋಧ್ಯೆಯ ಪರಮಹಂಸ ಆಚಾರ್ಯ 10 ಕೋಟಿ ರೂ. ನಗದು ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಹೇಳಿಕೆ ನೀಡಿರುವ ಉದಯನಿಧಿ ನನ್ನ ತಲೆಗೆ 10 ರೂ. ಬಾಚಣಿಗೆ ಸಾಕು ಎಂದಿದ್ದಾರೆ.

ಬೆದರಿಕೆಗೆ ಬಗ್ಗಲ್ಲ

ತಮಿಳುನಾಡಿಗೆ ಜೀವನವನ್ನೇ ಮುಡಿಪಾಗಿಟ್ಟ ಕರುಣಾನಿಧಿ ಅವರ ಮೊಮ್ಮಗನಾದ ನಾನು ಇಂತಹ ಬೆದರಿಕೆಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಚಾಪ್ ಅಥವಾ ಸ್ಲೈಸ್ ಎಂಬ ಪದಕ್ಕೆ ತಮಿಳಿನಲ್ಲಿ ಕೂದಲು ಬಾಚುವುದು ಎಂಬರ್ಥವಿದೆ. ಹೀಗಾಗಿ ನನ್ನ ಕೂದಲು ಬಾಚಲು 10 ರೂಪಾಯಿಯ ಬಾಚಣಿಗೆ ಸಾಕು ಎಂದು ಹೇಳಿದ್ದಾರೆ.

ಉದಯನಿಧಿ ಹೇಳಿದ್ದೇನು?

ಶನಿವಾರ ಚೆನ್ನೈಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರುದ್ದವಾಗಿದೆ. ನಾವು ಡೆಂಗ್ಯೂ, ಮಲೇರಿಯಾ, ಕೊರೊನಾವನನು ಎದುರಿಸಬಾರದು. ಅವುಗಳನ್ನು ಶಾಶ್ವತವಾಗಿ ತೊಡೆದುಹಾಕಬೇಕು. ಅದರಂತೆ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದು ದೇಶಾದ್ಯಂತ ಹಲವರ ಕೆಂಗಣ್ಣಿಗೆ ಕಾರಣವಾಗಿದೆ.

ಆಚಾರ್ಯ ಮಾಡಿದ ಘೋಷಣೆಯೇನು?

ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಉದಯನಿಧಿ ತಲೆಯನ್ನು ಕಡಿದವರಿಗೆ 10 ಕೋಟಿ ರೂ. ಕೊಡುತ್ತೇನೆ. ಆತನನ್ನು ಕೊಲ್ಲುವವರು ಯಾರೂ ಇಲ್ಲದಿದ್ದರೆ ನಾನೇ ಕೊಲೆ ಮಾಡುವುದಾಗಿ ಪರಮಹಂಸ ಆಚಾರ್ಯ ಸೋಮವಾರ ಘೋಷಿಸಿದ್ದರು.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *