ನನ್ನ ತಲೆಗೆ 10 ಕೋಟಿ ರೂ. ಬೇಡ, 10 ರೂ. ಸಾಕು! – ಹಿಂದೂ ಧರ್ಮ ಹೀಗಳೆದ ಉದಯನಿಧಿ ಸ್ಟಾಲಿನ್ ಹೀಗೆ ಹೇಳಿದ್ಯಾಕೆ?

ನನ್ನ ತಲೆಗೆ 10 ಕೋಟಿ ರೂ. ಬೇಡ, 10 ರೂ. ಸಾಕು! – ಹಿಂದೂ ಧರ್ಮ ಹೀಗಳೆದ ಉದಯನಿಧಿ ಸ್ಟಾಲಿನ್ ಹೀಗೆ ಹೇಳಿದ್ಯಾಕೆ?

ನ್ಯೂಸ್ ಆ್ಯರೋ‌ : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆಗೆ ಅಯೋಧ್ಯೆಯ ಪರಮಹಂಸ ಆಚಾರ್ಯ 10 ಕೋಟಿ ರೂ. ನಗದು ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಹೇಳಿಕೆ ನೀಡಿರುವ ಉದಯನಿಧಿ ನನ್ನ ತಲೆಗೆ 10 ರೂ. ಬಾಚಣಿಗೆ ಸಾಕು ಎಂದಿದ್ದಾರೆ.

ಬೆದರಿಕೆಗೆ ಬಗ್ಗಲ್ಲ

ತಮಿಳುನಾಡಿಗೆ ಜೀವನವನ್ನೇ ಮುಡಿಪಾಗಿಟ್ಟ ಕರುಣಾನಿಧಿ ಅವರ ಮೊಮ್ಮಗನಾದ ನಾನು ಇಂತಹ ಬೆದರಿಕೆಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಚಾಪ್ ಅಥವಾ ಸ್ಲೈಸ್ ಎಂಬ ಪದಕ್ಕೆ ತಮಿಳಿನಲ್ಲಿ ಕೂದಲು ಬಾಚುವುದು ಎಂಬರ್ಥವಿದೆ. ಹೀಗಾಗಿ ನನ್ನ ಕೂದಲು ಬಾಚಲು 10 ರೂಪಾಯಿಯ ಬಾಚಣಿಗೆ ಸಾಕು ಎಂದು ಹೇಳಿದ್ದಾರೆ.

ಉದಯನಿಧಿ ಹೇಳಿದ್ದೇನು?

ಶನಿವಾರ ಚೆನ್ನೈಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರುದ್ದವಾಗಿದೆ. ನಾವು ಡೆಂಗ್ಯೂ, ಮಲೇರಿಯಾ, ಕೊರೊನಾವನನು ಎದುರಿಸಬಾರದು. ಅವುಗಳನ್ನು ಶಾಶ್ವತವಾಗಿ ತೊಡೆದುಹಾಕಬೇಕು. ಅದರಂತೆ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದು ದೇಶಾದ್ಯಂತ ಹಲವರ ಕೆಂಗಣ್ಣಿಗೆ ಕಾರಣವಾಗಿದೆ.

ಆಚಾರ್ಯ ಮಾಡಿದ ಘೋಷಣೆಯೇನು?

ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಉದಯನಿಧಿ ತಲೆಯನ್ನು ಕಡಿದವರಿಗೆ 10 ಕೋಟಿ ರೂ. ಕೊಡುತ್ತೇನೆ. ಆತನನ್ನು ಕೊಲ್ಲುವವರು ಯಾರೂ ಇಲ್ಲದಿದ್ದರೆ ನಾನೇ ಕೊಲೆ ಮಾಡುವುದಾಗಿ ಪರಮಹಂಸ ಆಚಾರ್ಯ ಸೋಮವಾರ ಘೋಷಿಸಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *