ಬೆಳ್ಳಿ-ಬೊಮ್ಮನ್ ದಂಪತಿಯನ್ನ ಭೇಟಿ ಮಾಡಲಿದ್ದಾರೆ ಮೋದಿ – ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಮಾವುತ ದಂಪತಿಗೆ ಪ್ರಧಾನಿ ಭೇಟಿ ಭಾಗ್ಯ..!!

ಬೆಳ್ಳಿ-ಬೊಮ್ಮನ್ ದಂಪತಿಯನ್ನ ಭೇಟಿ ಮಾಡಲಿದ್ದಾರೆ ಮೋದಿ – ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಮಾವುತ ದಂಪತಿಗೆ ಪ್ರಧಾನಿ ಭೇಟಿ ಭಾಗ್ಯ..!!

ನ್ಯೂಸ್ ಆ್ಯರೋ : ಇತ್ತೀಚೆಗಷ್ಟೇ ಲಾಸ್ ಏಂಜಲೀಸ್ ನಲ್ಲಿ ಅಕಾಡೆಮಿ ಅವಾರ್ಡ್ಸ್ ಪ್ರಶಸ್ತಿ ಪ್ರಧಾನ ಸಮಾರಂಭ ಏರ್ಪಟ್ಟಿತ್ತು. ಆ ಕಾರ್ಯಕ್ರಮದಲ್ಲಿ ಭಾರತೀಯ ಮೂಲದ ‘ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರ ಆಸ್ಕರ್ ಅವಾರ್ಡ್ ಗೆದ್ದು ಇತಿಹಾಸ ಬರೆದಿತ್ತು. ಈ ಸಾಕ್ಷ್ಯಚಿತ್ರದಲ್ಲಿ ನೋಡುಗ ಕಂಬನಿ ಮಿಡಿಯುವಂತೆ ಅನಾಥ ಕಾಡಾನೆ ಮರಿಯ ಪೋಷಕರಾಗಿ ನಟಿಸಿದ್ದು ಅಥವಾ ಜೀವಿಸಿದ್ದು ಬೆಳ್ಳಿ ಹಾಗೂ ಬೊಮ್ಮನ್. ಇದೀಗ ಈ ಮಾವುತ ದಂಪತಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಅವಕಾಶ ಲಭಿಸಿದೆ.

ಹೌದು.. ಇತ್ತೀಚೆಗಷ್ಟೇ ಆಸ್ಕರ್ ಗೆದ್ದ ‘ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕರನ್ನು ಪ್ರಧಾನಿಗಳು ಭೇಟಿ ಮಾಡಿ ಶುಭಾಶಯ ತಿಳಿಸಿದ್ದರು. ಇದೀಗ, ಅನಾಥ ಆನೆಗಳನ್ನು ಸಾಕುತ್ತಲೇ ಜೀವಿಸುತ್ತಿರುವ ಬೆಳ್ಳಿ-ಬೊಮ್ಮನ್ ದಂಪತಿಯನ್ನು ಮೋದಿ ಭೇಟಿ ಮಾಡಲಿದ್ದಾರೆ. ಅದಕ್ಕಾಗಿ ಅವರು ಏಪ್ರಿಲ್ 9ರಂದು ಮೋದಿ ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಪ್ರದೇಶಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ತೆಪ್ಪಕಾಡು ಬುಡಕಟ್ಟು ಪ್ರದೇಶದಲ್ಲಿ ಭರ್ಜರಿ ಕಾಮಗಾರಿಗಳು ನಡೆಯುತ್ತಿವೆ. ವಿದ್ಯುತ್ ಬೆಳಕಿನ ಪರಿಚಯವೇ ಇಲ್ಲದ ಕಗ್ಗಾಡಿನಲ್ಲಿ ಇದೀಗ 30ಕ್ಕೂ ಅಧಿಕ ಕಂಬಗಳನ್ನು ನಿಲ್ಲಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಜೊತೆಗೆ ರಸ್ತೆಗಳನ್ನು ನವೀಕರಿಸಲಾಗುತ್ತಿದೆ.

Related post

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ನೀವು…
ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…

Leave a Reply

Your email address will not be published. Required fields are marked *