2000 ರೂಪಾಯಿಯ ನೋಟ್ ಬ್ಯಾನ್ ಗೆ RBI ಸೂಚನೆ – ಸೆಪ್ಟೆಂಬರ್ 30ರೊಳಗೆ ಬದಲಾವಣೆಗೆ ಅವಕಾಶ

2000 ರೂಪಾಯಿಯ ನೋಟ್ ಬ್ಯಾನ್ ಗೆ RBI ಸೂಚನೆ – ಸೆಪ್ಟೆಂಬರ್ 30ರೊಳಗೆ ಬದಲಾವಣೆಗೆ ಅವಕಾಶ

ನ್ಯೂಸ್ ಆ್ಯರೋ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಸೆಪ್ಟೆಂಬರ್ 30, 2023 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚಿಸಿದೆ.

2000 ರೂ. ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೀಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಇತರ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ.

RBI ಚಲಾವಣೆಯಿಂದ 2000 ರೂ. ಕರೆನ್ಸಿ ನೋಟನ್ನು ಹಿಂತೆಗೆದುಕೊಳ್ಳಲಿದ್ದು, ಆದರೆ ಅದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ.

ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ. 2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು. ಸದ್ಯ 2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ‘ಕ್ಲೀನ್ ನೋಟ್ ಪಾಲಿಸಿ’ಗೆ ಅನುಸಾರವಾಗಿ, 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ₹ 2000 ಮುಖಬೆಲೆಯ ನೋಟುಗಳು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ. ಈ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಮತ್ತು ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳು 2023 ರ ಸೆಪ್ಟೆಂಬರ್ 30 ರವರೆಗೆ 2000 ರೂಪಾಯಿ ನೋಟುಗಳಿಗೆ ಠೇವಣಿ ಮತ್ತು / ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುತ್ತವೆ.

2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು. ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ. 20,000 ರೂ.ವರೆಗೆ ಖಾತೆಗೆ ಜಮಾ ಮಾಡಬಹುದಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *