ಪ್ರಸಿದ್ಧ ಗಾಯಕ ಸಿಧು ಮೂಸೆವಾಲ ಹಂತಕರು ಜೈಲಿನಲ್ಲೇ ಕೊಲೆ – ಗ್ಯಾಂಗ್ ಗಳ ನಡುವಿನ ದ್ವೇಷಕ್ಕೆ ರಣಾಂಗಣವಾದ ಕೇಂದ್ರ ಕಾರಾಗೃಹ

ಪ್ರಸಿದ್ಧ ಗಾಯಕ ಸಿಧು ಮೂಸೆವಾಲ ಹಂತಕರು ಜೈಲಿನಲ್ಲೇ ಕೊಲೆ – ಗ್ಯಾಂಗ್ ಗಳ ನಡುವಿನ ದ್ವೇಷಕ್ಕೆ ರಣಾಂಗಣವಾದ ಕೇಂದ್ರ ಕಾರಾಗೃಹ

ನ್ಯೂಸ್ ಆ್ಯರೋ‌ : ಪ್ರಸಿದ್ಧ ಪಂಜಾಬಿ ನಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಗ್ಯಾಂಗ್​ಸ್ಟರ್​ಗಳ ನಡುವೆ ಪಂಜಾಬ್​ನ ಜೈಲಿನಲ್ಲೇ ವಾರ್​ ನಡೆದಿದೆ. ಈ ಹೊಡೆದಾಟದಲ್ಲಿ ಇಬ್ಬರು ಗ್ಯಾಂಗ್​ಸ್ಟರ್​ಗಳು ಹತರಾಗಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ಕಳೆದ ವರ್ಷ ಮೇ 29ರಂದು ಸಿಧು ಮೂಸೆವಾಲಾ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ಗಳು ಮತ್ತು ಶೂಟರ್​​ಗಳನ್ನು ಬಂಧಿಸಲಾಗಿತ್ತು. ಇದೀಗ ತರ್ನ್ ತರಣ್ ಜಿಲ್ಲೆಯ ಗೋಯಿಂಡ್ವಾಲ್ ಸಾಹಿಬ್‌ನ ಕೇಂದ್ರ ಕಾರಾಗೃಹದಲ್ಲಿ ಬಂಧಿತ ಆರೋಪಿಗಳ ನಡುವೆ ಗ್ಯಾಂಗ್ ವಾರ್‌ ನಡೆದಿದೆ.

ಮೃತರನ್ನು ಬಟಾಲದ ಮನದೀಪ್ ಸಿಂಗ್ ಅಲಿಯಾಸ್ ತೂಫಾನ್ ಮತ್ತು ಬುಧಲಾನಾದ ಮನಮೋಹನ್ ಸಿಂಗ್ ಅಲಿಯಾಸ್ ಮೊಹ್ನಾ ಎಂದು ಗುರುತಿಸಲಾಗಿದೆ. ಮತ್ತೋರ್ವ ಕೈದಿಯನ್ನು ಬಟಿಂಡಾದ ಕೇಶವ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಈತನನ್ನು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಮೂವರೂ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಮೊದಲೇ ಎರಡು‌ ಗ್ಯಾಂಗ್ ಗಳ‌ ನಡುವೆ ವೈರತ್ವವಿದ್ದು ಘಟನೆಯ ದಿನವೂ ಯಾವುದೋ ವಿಷಯವಾಗಿ ಇತ್ತಂಡಗಳ ನಡುವೆ ಘರ್ಷಣೆ ಏರ್ಪಟ್ಟಿತು. ಕೆಲ ನಿಮಿಷದಲ್ಲೇ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಪಾತ್ರೆಗಳು ಮತ್ತು ಕಬ್ಬಿಣದ ಸರಳುಗಳನ್ನು ಬಳಸಿ ಹೊಡೆದಾಡಿಕೊಂಡರು ಎಂದು ಪೋಲಿಸರು‌ ತಿಳಿಸಿದ್ದಾರೆ.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *