ಇನ್ಮುಂದೆ ಬೆಂಗಳೂರು ಸೇರಿ ದಕ್ಷಿಣ ಭಾರತದಲ್ಲಿ ಓಡಲಿದೆ ಮೂರು ವಂದೇ ಮಾತರಂ ರೈಲುಗಳು – ಸೌತ್ ಮಿಶನ್ ಯೋಜನೆಯ ಹಿಂದಿದೆ ಚುನಾವಣಾ ಲೆಕ್ಕಾಚಾರ
- ರಾಷ್ಟ್ರೀಯ ಸುದ್ದಿ
- January 24, 2023
- No Comment
- 184
ನ್ಯೂಸ್ ಆ್ಯರೋ : ‘ವಿಶ್ವಗುರು’ ಧ್ಯೇಯದೊಂದಿಗೆ ಭಾರತ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಕಂಡಿದೆ. ಇತರ ದೇಶಗಳಿಗೆ ಸರಿ ಸಮಾನವಾಗಿ ನಿಲ್ಲುವಂತಹ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿವೆ. ಸದ್ಯ, ಕೇಂದ್ರ ಸರ್ಕಾರ ರೈಲ್ವೆ ಕ್ಷೇತ್ರದ ಕಡೆಗೆ ಗಮನ ಹರಿಸಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದಲ್ಲಿ ಮೂರು ವಂದೇ ಮಾತರಂ ರೈಲುಗಳು ಓಡಲಿವೆಯಂತೆ. ಈ ಬಗೆಗಿನ ವರದಿ ಇಲ್ಲಿದೆ.
ಪ್ರಸಕ್ತ ವರ್ಷ ಕರ್ನಾಟಕ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಂಧ್ರಪ್ರದೇಶದಲ್ಲಿ ಮುಂದಿನ ವರ್ಷ ಚುನಾವಣೆ ಇದೆ. ಇದರೊಂದಿಗೆ ‘ಸೌತ್ ಮಿಶನ್’ ಯೋಜನೆಯಡಿ ಮುಂದಿನ ವರ್ಷದ ಲೋಕಸಭಾ ಚುನಾವಣೆ ದೃಷ್ಟಿಯಿಂದ ದಕ್ಷಿಣ ರಾಜ್ಯಗಳತ್ತ ಬಿಜೆಪಿ ಗಮನ ಕೇಂದ್ರೀಕರಿಸಿದೆ ಎನ್ನಲಾಗುತ್ತಿದೆ.
ಈ ವರ್ಷದ ನವೆಂಬರ್ನಲ್ಲಿ ಚೆನ್ನೈ– ಬೆಂಗಳೂರು– ಮೈಸೂರು ನಡುವೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಹೆಸರಿನ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು.
ಇತ್ತೀಚೆಗೆ ಲೋಕಾರ್ಪಣೆಗೊಂಡ ಸಿಕಂದರಾಬಾದ್ ಮತ್ತು ವಿಶಾಖಪಟ್ಟಣ ನಡುವಿನ ರೈಲು ಚಾಲನೆ ಆರಂಭಿಸಿದಾಗಿನಿಂದ ನೂರರಷ್ಟು ಆಸನ ಭರ್ತಿಯೊಂದಿಗೆ ಸಂಚರಿಸುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.