ವಾಘ್ ಬಕ್ರಿ ಟೀ ಗ್ರೂಪ್‌ನ ಪರಾಗ್ ದೇಸಾಯಿ ನಿಧನ – ಖ್ಯಾತ ಉದ್ಯಮಿ ಸಾವಿಗೆ ಕಾರಣವಾಯಿತೇ ಬೀದಿ ನಾಯಿಗಳು?

ವಾಘ್ ಬಕ್ರಿ ಟೀ ಗ್ರೂಪ್‌ನ ಪರಾಗ್ ದೇಸಾಯಿ ನಿಧನ – ಖ್ಯಾತ ಉದ್ಯಮಿ ಸಾವಿಗೆ ಕಾರಣವಾಯಿತೇ ಬೀದಿ ನಾಯಿಗಳು?

ನ್ಯೂಸ್ ಆ್ಯರೋ : ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಕಾರ್ಯವಾಹಕ ನಿರ್ದೇಶಕ ಪರಾಗ್ ದೇಸಾಯಿ ಸಾವನ್ನಪ್ಪಿರುವುದಾಗಿ ಕಂಪೆನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಅಹ್ಮದಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಅ. 22 ಪರಾಗ್ ನಿಧನರಾಗಿದ್ದಾರೆ. ಕಳೆದ ವಾರ ಬಿದ್ದು ಮೆದುಳಿನಲ್ಲಿ ರಕ್ತಸ್ರಾವವಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಪರಾಗ್ ದೇಸಾಯಿ ನಿಧನಕ್ಕೆ ಬೀದಿ ನಾಯಿಗಳು ಕಾರಣ ಎನ್ನಲಾಗಿದೆ. ಪರಾಗ್ ದೇಸಾಯಿ ಅಕ್ಟೋಬರ್ 15ರಂದು ತಮ್ಮ ಮನೆ ಬಳಿ ನಡೆದು ಹೋಗುವಾಗ ಬೀದಿ ನಾಯಿಗಳು ದಾಳಿ ಮಾಡಿವೆ. ಅವುಗಳಿಂದ ತಪ್ಪಿಸಿಕೊಂಡು ಓಡುವಾಗ ಎಡವಿ ಬಿದ್ದು ಅವರ ತಲೆಗೆ ಗಾಯವಾಗಿತ್ತು.

ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಯೊಂದಕ್ಕೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಝೈಡಸ್ ಆಸ್ಪತ್ರೆಗೆ ದಾಖಲಿಸಿ ಸರ್ಜರಿ ಮಾಡಲಾಯಿತು. ಏಳು ದಿನಗಳ ಕಾಲ ಅವರನ್ನು ವೆಂಟಿಲೇಟರ್​ನಲ್ಲಿ ಇಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

49 ವರ್ಷದ ಪರಾಗ್ ದೇಸಾಯಿ ಅವರಿಗೆ ಪತ್ನಿ ವಿದಿಶಾ ಹಾಗೂ ಪುತ್ರಿ ಪರಿಶಾ ಇದ್ದಾರೆ. ಪರಾಗ್ ಅವರ ಅಂತ್ಯಕ್ರಿಯೆ ನಿನ್ನೆ ಅಹ್ಮದಾಬಾದ್​ನಲ್ಲಿ ನಡೆಯಿತು.

ವಾಘ್ ಬಕ್ರಿ ಕಂಪೆನಿಯ ಶಕ್ತಿ ಆಗಿದ್ದ ಪರಾಗ್

ವಾಘ್ ಬಕ್ರಿ ಟೀ ಗ್ರೂಪ್​ನ ಎಂಡಿ ರಸೇಶ್ ದೇಸಾಯಿ ಅವರ ಮಗ ಪರಾಗ್ ದೇಸಾಯಿ ಅವರು ಸಂಸ್ಥೆಯ ಸೇಲ್ಸ್, ಮಾರ್ಕೆಟಿಂಗ್ ಮತ್ತು ರಫ್ತು ವಿಭಾಗದ ನಾಯಕತ್ವ ವಹಿಸಿದ್ದರು.

30ಕ್ಕೂ ಹೆಚ್ಚು ವರ್ಷ ಉದ್ದಿಮೆ ಅನುಭವ ಹೊಂದಿದ್ದ ಅವರ ಶ್ರಮದಿಂದಾಗಿ ವಾಘ್ ಬಕ್ರಿ ದೇಶಾದ್ಯಂತ ಮಾರುಕಟ್ಟೆಯನ್ನು ಹೊಂದಿದೆ. ಅಮೆರಿಕದ ಲಾಂಗ್ ಐಲ್ಯಾಂಡ್ ಯೂನಿವರ್ಸಿಟಿಯಲ್ಲಿ ಎಂಬಿಎ ಮಾಡಿದ್ದ ಪರಾಗ್, ಕೇವಲ ಸೇಲ್ಸ್ ಮಾತ್ರವಲ್ಲ, ಟೀ ಟೇಸ್ಟಿಂಗ್ ವಿದ್ಯೆಯಲ್ಲೂ ಪರಿಣಿತಿ ಹೊಂದಿದ್ದರು.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *