ಅಲ್ಲು ಅರ್ಜುನ್​ಗೆ ಮುಗಿಯದ ಸಂಕಷ್ಟ; ನಟನ ವಿರುದ್ಧ ಮತ್ತೊಂದು ದೂರು ದಾಖಲು

allu arjun
Spread the love

ನ್ಯೂಸ್ ಆ್ಯರೋ: ನಟ ಅಲ್ಲು ಅರ್ಜುನ್​ ಅವರಿಗೆ ಸಂಕಷ್ಟ ಸದ್ಯಕ್ಕೆ ಪೂರ್ಣಗೊಳ್ಳುವ ಹಾಗೆ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಅವರು ‘ಪುಷ್ಪ 2’ ಚಿತ್ರದ ಪ್ರೀಮಿಯರ್ ವೇಳೆ ನಡೆದ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಹೀಗಿರುವಾಗಲೇ ಅವರಿಗೆ ಮತ್ತೊಂದು ತೊಂದರೆ ಎದುರಾಗಿದೆ ಎಂಬ ವಿಚಾರ ತಿಳಿದು ಅಭಿಮಾನಿಗಳು ಬೇಸರ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ.

‘ಪುಷ್ಪ 2’ ಚಿತ್ರ ಇರುವುದು ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ನಡುವಿನ ಘರ್ಷಣೆ ಬಗ್ಗೆ. ಇಬ್ಬರೂ ಸದಾ ಕಿತ್ತಾಡಿಕೊಳ್ಳುತ್ತಾರೆ. ಈ ಸಿನಿಮಾದಲ್ಲಿ ಪೊಲೀಸರಿಗೆ ಅವಮಾನ ಆಗಿದೆ ಎಂದು ಕಾಂಗ್ರೆಸ್ ನಾಯಕ ಧೀನ್ಮರ್ ಮಲ್ಲಣ್ಣ ಅವರು ಕೇಸ್ ದಾಖಲು ಮಾಡಿದ್ದಾರೆ. ಸಿನಿಮಾ ಬಗ್ಗೆ ಅವರು ಅಪಸ್ವರ ತೆಗೆದಿದ್ದಾರೆ.

ಬನ್ವರ್ ಸಿಂಗ್ ಶೇಖಾವತ್ (ಫಹಾದ್ ಫಾಸಿಲ್) ಸ್ವಿಮ್ಮಿಂಗ್​ಪೂಲ್​ನಲ್ಲಿ ಇರುವಾಗ ಪುಷ್ಪರಾಜ್ (ಅಲ್ಲು ಅರ್ಜುನ್ ) ಮೂತ್ರ ಮಾಡುತ್ತಾನೆ. ಇದು ಪೊಲೀಸರಿಗೆ ಅವಮಾನ ಮಾಡುವಂಥದ್ದು ಎಂದು ಕಾಂಗ್ರೆಸ್ ನಾಯಕ ಅಭಿಪ್ರಾಯಪಟ್ಟಿದ್ದಾರೆ. ಕಾನೂನನ್ನು ಕಾಪಾಡುವರಿಗೆ ನೀಡುವ ಗೌರವ ಇದಲ್ಲ ಎಂದಿದ್ದಾರೆ. ಹೀಗಾಗಿ, ಅವರು ದೂರು ದಾಖಲು ಮಾಡಿದ್ದು, ಅಲ್ಲು ಅರ್ಜುನ್​ಗೆ ನೋಟಿಸ್ ಹೋಗಿದೆ ಎನ್ನಲಾಗಿದೆ.

‘ಪುಷ್ಪ 2’ ಚಿತ್ರದ ಪ್ರೀಮಿಯರ್​ ಶೋ ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆಯಿತು. ಈ ವೇಳೆ ಅಲ್ಲು ಅರ್ಜುನ್ ಅವರು ಸಿನಿಮಾ ವೀಕ್ಷಣೆಗೆ ಬಂದಿದ್ದರು. ಅವರ ಬಳಿ ಪೊಲೀಸರು ತೆರಳುವಂತೆ ಕೋರಿದ್ದರೂ ಅವರು ಹೋಗಿಲ್ಲ ಎನ್ನಲಾಗಿದೆ. ಈ ಕಾರಣದಿಂದಲೇ ಅಲ್ಲು ಅರ್ಜುನ್ ವಿರುದ್ಧ ಕೇಸ್ ಫೈಲ್ ಆಗಿ ಅವರನ್ನು ಬಂಧಿಸುವ ಕಾರ್ಯ ನಡೆದಿದೆ.

ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಬಂಧನಕ್ಕೆ ಒಳಗಾದರು. ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ, 50 ಸಾವಿರ ರೂಪಾಯಿ ಬಾಂಡ್ ಜೊತೆ ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತು.

Leave a Comment

Leave a Reply

Your email address will not be published. Required fields are marked *

error: Content is protected !!