ತೆಲಂಗಾಣ ರಾಜ್ಯಪಾಲ ಆಗ್ತಾರಾ ಸೂಪರ್‌ ಸ್ಟಾರ್ ರಜನಿಕಾಂತ್? – ಸಿಎಂ ಯೋಗಿ ಭೇಟಿ ಬೆನ್ನಲ್ಲೇ ಈ ಸುದ್ದಿ ಸೌಂಡ್ ಮಾಡಿದ್ದೇಕೆ?

ತೆಲಂಗಾಣ ರಾಜ್ಯಪಾಲ ಆಗ್ತಾರಾ ಸೂಪರ್‌ ಸ್ಟಾರ್ ರಜನಿಕಾಂತ್? – ಸಿಎಂ ಯೋಗಿ ಭೇಟಿ ಬೆನ್ನಲ್ಲೇ ಈ ಸುದ್ದಿ ಸೌಂಡ್ ಮಾಡಿದ್ದೇಕೆ?

ನ್ಯೂಸ್ ಆ್ಯರೋ : ಈಚೆಗೆ ನಟ ರಜನಿಕಾಂತ್ ಅವರು ಸಿಎಂ ಆದಿತ್ಯನಾಥ್ ಯೋಗಿ, ಜಾರ್ಖಂಡ್ ಗವರ್ನರ್​ ಸಿ.ಪಿ ರಾಧಾಕೃಷ್ಣ ಅವರನ್ನು ಭೇಟಿಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಲೈವಾಗೆ ತೆಲಂಗಾಣದ ರಾಜ್ಯಪಾಲರ ಹುದ್ದೆಯನ್ನು ನೀಡಲು ಮುಂದಾಗಿದೆ ಎನ್ನುವ ಸುದ್ದಿ ಭಾರೀ ವೈರಲ್ ಆಗಿದೆ.

ನಟ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳೆಬ್ಬಿಸಿದ್ದು, ಇನ್ನೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇನ್ನೂ ಈ ಸಿನಿಮಾ ಬಿಡುಗಡೆಗೂ ಮುನ್ನಾ ಹಿಮಾಲಯಕ್ಕೆ ಪ್ರವಾಸ ಕೈಗೊಂಡ ರಜನಿಕಾಂತ್ ಅವರು ಸಿಎಂ ಯೋಗಿ ಸೇರಿದಂತೆ ಆನೇಕ ರಾಜಕೀಯ ಗಣ್ಯರನ್ನು ಭೇಟಿಯಾಗಿದ್ದರು. ಈ ಸುದ್ದಿ ರಾಜಕೀಯದಲ್ಲಿ ಭಾರೀ ಚರ್ಚೆಯಾಗಿತ್ತು.

ಇದರ ಬೆನ್ನಲ್ಲೇ ಬಿಜೆಪಿಯು ರಜನಿಕಾಂತ್ ಅವರನ್ನು ಗವರ್ನರ್​ ಆಗಿ ನೇಮಕ ಮಾಡಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೇ ರಜನಿಕಾಂತ್​ರನ್ನು ರಾಜ್ಯಪಾಲರನ್ನಾಗಿ ಮಾಡಿದ್ರೆ ದಕ್ಷಿಣ ಭಾರತದಲ್ಲಿ ಬಿಜೆಪಿ ಇನ್ನಷ್ಟು ಆಳವಾಗಿ ಬೇರೂರಬಹುದು ಎಂಬ ಲೆಕ್ಕಾಚಾರದಲ್ಲಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ರಾಜಕಾರಣಕ್ಕೆ ಧುಮುಕುವುದಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದರು. ಆದರೆ ಆರೋಗ್ಯದ ನೆಪವೊಡ್ಡಿ ಹಿಂದೆ ಸರಿದಿದ್ದರು. ಇದೀಗ ರಾಜಕೀಯ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆ ಶುರುವಾಗಿದೆ. ಈ ಬಗ್ಗೆ ಯಾರೂ ಅಧಿಕೃತವಾಗಿ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.

ಸದ್ಯ ತೆಲಂಗಾಣದ ಗವರ್ನರ್​ ತಮಿಳಿಸೈ ಸೌಂದರರಾಜನ್ ಹಾಗೂ ಸಿಎಂ ಕೆ.ಚಂದ್ರಶೇಖರ್​ ರಾವ್ ಅವರ ಮಧ್ಯೆ ಕಿತ್ತಾಟ ನಡೆಯುತ್ತಿದೆ. ಇದು ಅಲ್ಲಿನ ರಾಜಕೀಯ ಬಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹೀಗಾಗಿ ಬಿಜೆಪಿ ರಜನಿಕಾಂತ್​ರನ್ನು ಗವರ್ನರ್ ಮಾಡುವ ಯೋಚನೆಯಲ್ಲಿದಿಯಾ ಎಂಬ ಪ್ರಶ್ನೆ ಕಾಡುತ್ತಿದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *