ABVP ಕಾರ್ಯಕರ್ತನಾಗಿದ್ದ ರೇವಂತ್ ರೆಡ್ಡಿ ಈಗ ತೆಲಂಗಾಣ ಸಿ.ಎಂ ಹುದ್ದೆಯತ್ತ! – ಈ ರೇವಂತ್ ರೆಡ್ಡಿಯ ಹಿನ್ನೆಲೆ ಏನು ಗೊತ್ತಾ?

ABVP ಕಾರ್ಯಕರ್ತನಾಗಿದ್ದ ರೇವಂತ್ ರೆಡ್ಡಿ ಈಗ ತೆಲಂಗಾಣ ಸಿ.ಎಂ ಹುದ್ದೆಯತ್ತ! – ಈ ರೇವಂತ್ ರೆಡ್ಡಿಯ ಹಿನ್ನೆಲೆ ಏನು ಗೊತ್ತಾ?

ನ್ಯೂಸ್ ಆ್ಯರೋ : ಆತ ಸರ್ವೇ ಸಾಮಾನ್ಯ ವ್ಯಕ್ತಿ. ಶ್ರೀಮಂತ ಹಿನ್ನಲೆಯಿಲ್ಲ, ಕೋಟಿಗಟ್ಟಲೆ ಆಸ್ತಿ ಅಂತಸ್ತಿಲ್ಲ, ರಾಜಕೀಯ ಪ್ರಭಾವವಿಲ್ಲ. ಆದರೆ ಏನು ಇಲ್ಲದ ಆ ಸಾಮಾನ್ಯ ವ್ಯಕ್ತಿಯೇ ರಾಜ್ಯವೊಂದರ ಮುಖ್ಯಮಂತ್ರಿ ಆಗುತ್ತಿದ್ದಾನೆ.

ಇಂತಹದ್ದೊಂದು ಘಟನೆ ಮೊನ್ನೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಘಟಿಸಿದೆ. ABVP ಕಾರ್ಯಕರ್ತನಾಗಿದ್ದ ರೇವಂತ್ ರೆಡ್ಡಿ ಇದೀಗ ತೆಲಂಗಾಣ ರಾಜ್ಯದ ಸಿಎಂ ಹುದ್ದೆಯತ್ತ ದಾಪುಗಾಲಿಡುತ್ತಿದ್ದಾರೆ. ಈ ಸಾಹಸಿಗನ ರೋಚಕ‌‌ ಹಿನ್ನಲೆ‌ ಇಲ್ಲಿದೆ ನೋಡಿ.

2015ರಲ್ಲಿ ಜೈಲು‌ ಸೇರಿದ್ದ ರೇವಂತ್ ರೆಡ್ಡಿ!

ತೆಲಂಗಾಣ ರಾಜ್ಯದ ಕುಗ್ರಾಮದಲ್ಲಿ ಜನಿಸಿದ್ದ ರೇವಂತ್ ರೆಡ್ಡಿ ABVP ಮೂಲಕ ಮುನ್ನೆಲೆಗೆ ಬಂದವರು. ವಿದ್ಯಾರ್ಥಿಯಾಗಿದ್ದಾಗ ಹಲವಾರು ಹೋರಾಟ, ಪ್ರತಿಭಟನೆಯಲ್ಲಿ ತೊಡಗಿದ್ದವರು. 2015ರಲ್ಲಿ ತೆಲುಗರ‌ ನಾಡಿನಲ್ಲಿ ದೊಡ್ಡ ಸಂಚಲನ‌ ಸೃಷ್ಟಿಸಿದ್ದ, ‘ಮತಕ್ಕಾಗಿ ನಗದು’ ಪ್ರಕರಣದಲ್ಲಿ ರೇವಂತ್ ಅವರನ್ನು ಬಂಧಿಸಲಾಗಿತ್ತು.

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ “ಏಜೆಂಟ್” ಎಂದು ಆರೋಪಿಸಿ ಪಕ್ಷಗಳನ್ನು ಬದಲಾಯಿಸಿದ್ದಕ್ಕಾಗಿ ಬಿಆರ್ ಎಸ್ ನಾಯಕರು ನಿರಂತರ ಟೀಕೆ ಮಾಡುತ್ತಿದ್ದರು. ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರಂತೂ ರೇವಂತ್ ಅವರ ಎಬಿವಿಪಿ ಹಿನ್ನೆಲೆಯನ್ನು ಗುರಿಯಾಗಿಸಿ ನಿರಂತರ ವಾಗ್ದಾಳಿ ನಡೆಸುತ್ತಿದ್ದರು.

2017ರಲ್ಲಿ ವಿಧಾನ ಪರಿಷತ್ ಪ್ರವೇಶ!

ಬಿಆರ್‌ಎಸ್‌ನಲ್ಲಿ ನಲ್ಲಿ ಇದ್ದ ರೆಡ್ಡಿ ಅವರು 2016 ರಲ್ಲಿ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಯಶಸ್ವಿಯಾದಾಗ ಮೊದಲು ರಾಜಕೀಯ ಕಚೇರಿಗೆ ಆಯ್ಕೆಯಾದರು. ಅವರು ಜಿಲ್ಲಾ ಪರಿಷತ್ತಿನ ಪ್ರಾದೇಶಿಕ ಕ್ಷೇತ್ರ ಸದಸ್ಯರಾಗಿ ನಂತರ ಸ್ವತಂತ್ರರಾಗಿ ಆಯ್ಕೆಯಾದರು. ಅವರು 2017 ರಲ್ಲಿ ಸ್ವತಂತ್ರವಾಗಿ ಅವಿಭಜಿತ ಆಂಧ್ರಪ್ರದೇಶದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ರೇವಂತ್ ರೆಡ್ಡಿ ಮುನ್ನೆಲೆಗೆ ಬಂದರು.

ಸಿಎಂ ಆಗುತ್ತಾರಾ ರೇವಂತ್ ರೆಡ್ಡಿ?

ಆ ಬಳಿಕ ರೇವಂತ್ ರೆಡ್ಡು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಪ್ತರಾಗಿ ಗುರುತಿಸಿಕೊಂಡರು. ಪದವೀಧರರಾದ ರೆಡ್ಡಿ ಅವರು 2009 ರಲ್ಲಿ ಟಿಡಿಪಿ ಟಿಕೆಟ್‌ನಲ್ಲಿ ವಿಧಾನಸಭೆಗೆ ಆಯ್ಕೆಯಾದರು ಮತ್ತು ನಂತರ 2014 ರಲ್ಲಿ ಆಂಧ್ರಪ್ರದೇಶದಿಂದ ತೆಲಂಗಾಣ ವಿಭಜನೆಯಾದ ಬಳಿಕ 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್ ಅಭ್ಯರ್ಥಿಯ ವಿರುದ್ಧ ಸೋತು ಸ್ವಲ್ಪ ಸಮಯ ರಾಜಕೀಯ ವನವಾಸ ಅನುಭವಿಸಿದರು.

ಬಳಿಕ ಟಿಡಿಪಿ ತೊರೆದು 2017-18ರಲ್ಲಿ ದೆಹಲಿಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರಿದರು.ಇದೀಗ ಸಿಎಂ ಹುದ್ದೆಗೆ ರೇವಂತ್ ರೆಡ್ಡಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ನಾಳೆಯೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *