ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವುದು ಗೊತ್ತು – ಸಿದ್ದರಾಮಯ್ಯ ವಿರುದ್ಧ ಗುಡುಗಿದ್ರಾ ಬಿ.ಕೆ.ಹರಿಪ್ರಸಾದ್?
- ರಾಜಕೀಯ
- July 22, 2023
- No Comment
- 73
ನ್ಯೂಸ್ ಆ್ಯರೋ : ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನೀಡಿರುವ ಹೇಳಿಕೆಯೊಂದು ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಸಂಚಲನ ಮೂಡಿಸಿದೆ. ಅವರು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಹರಿಪ್ರಸಾದ್ ಹೇಳಿದ್ದೇನು?
ನನಗೆ ಒಬ್ಬರನ್ನು ಮುಖ್ಯಮಂತ್ರಿ ಮಾಡುವುದೂ ಗೊತ್ತು, ಕೆಳಗೆ ಇಳಿಸುವುದೂ ಗೊತ್ತು ಎಂದು ಹರಿಪ್ರಸಾದ್ ಬೆಂಗಳೂರಿನಲ್ಲಿ ನಡೆದ ಈಡಿಗ, ಬಿಲ್ಲವ ಸಭೆಯಲ್ಲಿ ಹೇಳಿದರು. ಬೇರೆ ಬೇರೆ 5 ರಾಜ್ಯಗಳ ಮುಖ್ಯಮಂತ್ರಿ ಆಯ್ಕೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದೆ. ಯಾರನ್ನೇ ಆಗಲಿ ಸಿಎಂ ಮಾಡುವುದು ಗೊತ್ತಿದೆ, ಅವರನ್ನು ಕೆಳಗೆ ಇಳಿಸುವುದೂ ಗೊತ್ತಿದೆ ಎಂದರು.
ಸಚಿವ ಸ್ಥಾನಕ್ಕಾಗಿ ನಾನು ಯಾರ ಬಳಿಯೂ ಭಿಕ್ಷೆ ಬೇಡಲ್ಲ. ಎಲ್ಲಿ ಹೋದರೂ ಎದೆ ಕೊಟ್ಟು ನಿಲ್ಲುವ ಶಕ್ತಿ ನನಗಿದೆ. ನನ್ನನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ ಎಂದು ಸರಕಾರದ ವಿರುದ್ದ ಆರೋಪಿಸಿದರು.
ನಾನು ಸಚಿವ ಆಗುವುದು ಬಿಡುವುದು ಬೇರೆ ಪ್ರಶ್ನೆ. ಈಡಿಗ ಸಮುದಾಯದವರು ರಾಜಕಾರಣದಲ್ಲಿ ಹೆಚ್ಚು ಗುರುತಿಸಿಕೊಳ್ಳುತ್ತಿಲ್ಲ. ಅವರು ಮುನ್ನೆಲೆಗೆ ಬರಬೇಕು ಎಂದು ಹರಿಪ್ರಸಾದ್ ಹೇಳಿದರು.