ಬಿಜೆಪಿ ನಾಯಕರ ಮಹತ್ವದ ಸಭೆ ಕರೆದ ಬಿ.ಎಲ್.ಸಂತೋಷ್ – ಯಡಿಯೂರಪ್ಪ ಗೈರಾಗುವ ಸಾಧ್ಯತೆ, ಮತ್ತೆ ಪುಟಿದೇಳುತ್ತಾ ಕಮಲ ಪಡೆ?

ಬಿಜೆಪಿ ನಾಯಕರ ಮಹತ್ವದ ಸಭೆ ಕರೆದ ಬಿ.ಎಲ್.ಸಂತೋಷ್ – ಯಡಿಯೂರಪ್ಪ ಗೈರಾಗುವ ಸಾಧ್ಯತೆ, ಮತ್ತೆ ಪುಟಿದೇಳುತ್ತಾ ಕಮಲ ಪಡೆ?

ನ್ಯೂಸ್ ಆ್ಯರೋ‌ : ರಾಜ್ಯ ವಿಧಾನಸಭೆ ಚುನಾವಣೆಯ ಹೀನಾಯ ಸೋಲು ಬಿಜೆಪಿಗೆ ಬಲವಾದ ಹೊಡೆತ ನೀಡಿದೆ. ಕಮಲ ಪಡೆ ಈ ಸೋಲಿನ ಆಘಾತದಿಂದ ಇನ್ನೂ ಹೊರ ಬಂದಿಲ್ಲ. ಅದಕ್ಕೆ ಸಾಕ್ಷಿ ಎನ್ನುವಂತೆ ಇನ್ನೂ ವಿಪಕ್ಷ ನಾಯಕನ ಆಯ್ಕೆ ನಡೆದಿಲ್ಲ. ಇದೀಗ ಪಕ್ಷ ಸಂಘಟನೆಗೆ ಮುಂದಾಗಿರುವ ಹಿರಿಯ ನಾಯಕ ಬಿ.ಎಲ್.ಸಂತೋಷ್ ಮಹತ್ವದ ಸಭೆ ಕರೆದಿದ್ದಾರೆ.

ಸಮೀಪದಲ್ಲೇ ಇದೆ ಲೋಕಸಭೆ ಚುನಾವಣೆ

ಅತ್ತ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಜೊತೆಗೆ ಜಾರಿ ಮಾಡಿ ಜನಪ್ರಿಯತೆ ಗಿಟ್ಟಿಸುತ್ತಿರುವುದು ಒಂದೆಡೆಯಾದರೆ ಶೀಘ್ರದಲ್ಲೇ ಎದುರಾಗಲಿರುವ ಲೋಕಸಭಾ ಚುನಾವಣೆ ಬಿಜೆಪಿ ಪಾಲಿಗೆ ನಿಜಕ್ಕೂ ಅಗ್ನಿ ಪರೀಕ್ಷೆಯೇ ಆಗಿದೆ. ಅಲ್ಲದೆ ಪಕ್ಷ ಸಂಘಟನೆ ತುರ್ತು ಅಗತ್ಯವೂ ಹೌದು.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಆ ವಿಷಯದಲ್ಲೂ ಅಂತಿಮ ತೀರ್ಮಾನ ಪ್ರಕಟಿಸಲು ಸಾಧ್ಯವಾಗಿಲ್ಲ. ಈಗಾಗಲೇ ಆಪರೇಷನ್ ತಂತ್ರಕ್ಕೆ ಮೊರೆ ಹೋಗಿರುವ ಕಾಂಗ್ರೆಸ್ ತೆರೆಮರೆಯಲ್ಲಿ ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಸುತ್ತಿದೆ. ಹೀಗಾಗಿ ಬಿಜೆಪಿ ನಾಯಕರನ್ನು ಒಂದುಗೂಡಿಸುವ ಜಬಾಬ್ದಾರಿಯನ್ನು ಬಿ.ಎಲ್.ಸಂತೋಷ್ ಹೆಗಲಿಗೆ ಬಿದ್ದಿದೆ. ಈ ಹಿನ್ನಲೆಯಲ್ಲಿ ಅವರು ಇಂದು (ಆಗಸ್ಟ್ 31) ಸಭೆ ಕರೆದಿದ್ದಾರೆ.

ಯಡಿಯೂರಪ್ಪ ಗೈರು?

ಅಚ್ಚರಿ ಎಂದರೆ ಇಂದಿನ ಸಭೆಗೆ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಗೈರಾಗಲಿದ್ದಾರೆ. ಶಿವಮೊಗ್ಗ ಪ್ರವಾಸ ಹಿನ್ನಲೆಯಲ್ಲಿ ಅವರು ಸಭೆಯಿಂದ ದೂರ ಉಳಿಯುತ್ತಿದ್ದು, ರಾಜಕೀಯವಾಗಿ ಬೇರೆಯದೇ ಸಂದೇಶ ರವಾನೆಯಾದರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

ನಾಯಕರಿಗೆ ಆಹ್ವಾನ

ಇಂದಿನ ಸಭೆಗೆ 224 ಕ್ಷೇತ್ರದ ಎಲ್ಲಾ ಬಿಜೆಪಿ ನಾಯಕರನ್ನು ಆಹ್ವಾನಿಸಲಾಗಿದೆ. ಲೋಕಸಭೆ ಚುನಾವಣೆಗಾಗಿ ಸಿದ್ದತೆ ನಡೆಸಲು ಈ ಸಭೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬೂತ್ ಮಟ್ಟದಲ್ಲಿ ಮತದಾರರನ್ನು ಕ್ರೂಢೀಕರಿಸಲು ಸಂತೋಷ್ ಸೂತ್ರ ಹೇಳಿಕೊಡಲಿದ್ದಾರೆ ಎನ್ನಲಾಗಿದೆ.

ಮಹತ್ವದ ಜವಾಬ್ದಾರಿ

ಈ ಸಭೆಯಲ್ಲಿ ಹೊಸ ಮತದಾರರನ್ನು ವೋಟರ್ ಲಿಸ್ಟ್ ಗೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು. ಮನೆ ಮನೆಗೆ ಭೇಟಿ ನೀಡಿ ಹೊಸ ಮತದಾರರನ್ನು ಪರಿಶೀಲಿಸುವ ಬಗ್ಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು. ಅಲ್ಲದೆ ಮತದಾರರ ಪಟ್ಟಿಗಾಗಿಯೇ ಸಮಿತಿ ರಚಿಸುವ ಪ್ರಸಾವವಿದೆ. ಆಯಾ ಕ್ಷೇತ್ರದ ಶಾಸಕರು, ಮಾಜಿ ಶಾಸಕರಿಗೆ ಈ ಹೊಣೆ ಹಂಚಿಕೆಯಾಗುವ ಸಾಧ್ಯತೆ ಇದೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *