ಆಪರೇಶನ್ ಹಸ್ತದ ಟ್ರಯಲ್ ಆರಂಭಿಸಿದ ಕಾಂಗ್ರೆಸ್ – ಆರ್. ಅಶೋಕ್ ಆಪ್ತವಲಯಕ್ಕೆ ಕೊಡಲಿ ಪೆಟ್ಟು ಕೊಟ್ಟ ಡಿಕೆ ಬ್ರದರ್ಸ್..!

ಆಪರೇಶನ್ ಹಸ್ತದ ಟ್ರಯಲ್ ಆರಂಭಿಸಿದ ಕಾಂಗ್ರೆಸ್ – ಆರ್. ಅಶೋಕ್ ಆಪ್ತವಲಯಕ್ಕೆ ಕೊಡಲಿ ಪೆಟ್ಟು ಕೊಟ್ಟ ಡಿಕೆ ಬ್ರದರ್ಸ್..!

ನ್ಯೂಸ್ ಆ್ಯರೋ : ರಾಜ್ಯ ಬಿಜೆಪಿಯ ಪ್ರಮುಖ ನಾಯಕ ಆರ್. ಅಶೋಕ್ ಅವರ ಆಪ್ತರನ್ನೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರು ಕಾಂಗ್ರೆಸ್ ಗೆ ಸೆಳೆದುಕೊಂಡು ಬಿಜೆಪಿ ನಾಯಕರಿಗೆ ಬಹುದೊಡ್ಡ ಶಾಕ್ ನೀಡಿದ್ದಾರೆ.

ಬೆಂಗಳೂರಿನ ಶಾಸಕರಲ್ಲೇ ಅತ್ಯಂತ ಪ್ರಭಾವಿ ಎನಿಸಿರುವ ಆರ್. ಅಶೋಕ್ ಹಲವು ವರ್ಷಗಳಿಂದ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರೂ ಹೌದು. ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್ ಹಸ್ತಕ್ಕೆ ಚಾಲನೆ ಕೊಟ್ಟಿರುವ ಡಿ.ಕೆ. ಸಹೋದರರು, ಅಶೋಕ್ ಅವರ ಶಿಷ್ಯರು ಹಾಗೂ ಅವರ ಗೆಲುವಿನ ರೂವಾರಿಗಳನ್ನೇ ಕಾಂಗ್ರೆಸ್ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಶೋಕ್ ಅವರ ಅತ್ಯಂತ ಆಪ್ತರನ್ನೇ ಕಾಂಗ್ರೆಸ್‌ಗೆ ಸೆಳೆದಿರುವ ಡಿಕೆಶಿ, ಮುಂದಿನ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಸೋಲಿನ ರುಚಿ ಉಣಿಸಲು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿರುವ ಮುಖಂಡರು ಅಶೋಕ ಜೊತೆಗೆ ಈಗಾಗಲೇ ಸಂಬಂಧ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಎಲ್. ಶ್ರೀನಿವಾಸ್, ಮಾಜಿ ಉಪ ಮಹಾಪೌರರು ಮತ್ತು ಮಾಜಿ ಪಾಲಿಕೆ ಸದಸ್ಯರು, ಆಂಜಿನಪ್ಪ, ಮಾಜಿ ನಗರಸಭೆ ಸದಸ್ಯರು, ಬೊಮ್ಮನಹಳ್ಳಿ, ಶೋಭಾ ಆಂಜಿನಪ್ಪ, ಮಾಜಿ ಬಿಬಿಎಂಪಿ ಸದಸ್ಯರು ಪದ್ಮನಾಭನಗರ ವಾರ್ಡ್, ಗೋವಿಂದ ರಾಜ್, ಗಣೇಶ ಮಂದಿರ ವಾರ್ಡ್‌ ಮಾಜಿ ಪಾಲಿಕೆ ಸದಸ್ಯರು. ಹೆಚ್. ನಾರಾಯಣ್, ಮಾಜಿ ಬಿಬಿಎಂಪಿ ಸದಸ್ಯರು, ಹೊಸಕೆರೆಹಳ್ಳಿ ವಾರ್ಡ್ ಮತ್ತು ಮಾಜಿ ಅಧ್ಯಕ್ಷರು ಆರೋಗ್ಯ ಸ್ಥಾಯಿ ಸಮಿತಿ ಬಿಬಿಎಂಪಿ, ವೆಂಕಟಸ್ವಾಮಿ ನಾಯ್ಡು, ಮಾಜಿ ಪಾಲಿಕೆ ಸದಸ್ಯರು, ಚಿಕ್ಕಲ್ಲಸಂದ್ರ ವಾರ್ಡ್, ಹೆಚ್. ಸುರೇಶ್ ಮಾಜಿ ಪಾಲಿಕೆ ಸದಸ್ಯರು, ಕುಮಾರಸ್ವಾಮಿ ಬಡಾವಣೆ ವಾರ್ಡ್, ಸುಪ್ರಿಯ ಶೇಖರ್, ಬಿಬಿಎಂಪಿ ಮಾಜಿ ಸದಸ್ಯರು, ಚಿಕ್ಕಕಲ್ಲಸಂದ್ರ ವಾರ್ಡ್, ಲಕ್ಷ್ಮಿ ಸುರೇಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು, ಸೋಮನಹಳ್ಳಿ ಜಿಲ್ಲಾ ಪಂಚಾಯತ್, ರಂಗದಾಮೇಗೌಡ್ರು , ಮಾಜಿ ಅಧ್ಯಕ್ಷರು, ಪದ್ಮನಾಭನಗರ ಮಂಡಲ ಬಿಜೆಪಿ ಘಟಕ. ಪ್ರಸಾದ್ ಬಾಬು, ಜಿಡಿಎಸ್ ಮುಖಂಡ, ಮಾಜಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಪವನ್, ಬಿಜೆಪಿ ಮುಖಂಡ, ಪದ್ಮನಾಭ ನಗರ ಇವರೆಲ್ಲ ಆರ್. ಅಶೋಕ ನಡುವಳಿಕೆಯಿಂದ ಬೆಸತ್ತು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಅಶೋಕ್ ಬೆಂಬಲಿಗರಾಗಿದ್ದ ಮಾಜಿ ಉಪಮೇಯರ್, ಮಾಜಿ ಕಾರ್ಪೊರೇಟರ್‌ಗಳು ಸೇರಿದಂತೆ 8 ಜನ ಪ್ರಮುಖ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *