ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ 2ನೇ ವಾರ ಮತದಾನ ನಡೆಯುವ ಸಾಧ್ಯತೆ ಇದೆ.

ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಕರ್ನಾಟಕಕ್ಕೆ ಬಂದು 3 ದಿನಗಳ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದೆ. ಆಯೋಗವು ಈಗಾಗಲೇ ಚುನಾವಣೆ ನಡೆಸಲು ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ.

ಪ್ರಸಕ್ತ ರಾಜ್ಯ ಸರ್ಕಾರದ ಅವಧಿ ಮೇ. 24 ಕ್ಕೆ ಮುಕ್ತಾಯವಾಗುವ ಕಾರಣ 2018ರ ವೇಳಾಪಟ್ಟಿಯಂತೆಯೇ ಈ ಬಾರಿಯೂ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕಳೆದ ಬಾರಿ ಮೇ 12 ರಂದು ಮತದಾನ ನಡೆದಿತ್ತು. ಹೀಗಾಗಿ, ಏಪ್ರಿಲ್ ತಿಂಗಳ 2 ನೇ ವಾರದಲ್ಲಿ ಅಧಿಸೂಚನೆ ಹೊರಡಿಸಿ, ಮೇ ಮೊದಲ ವಾರದ ವೇಳೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲು ಚುನಾವಣೆ ಆಯೋಗ ಚಿಂತನೆ ನಡೆಸಿದೆ.

ಚುನಾವಣಾ ಆಯೋಗದ ಚುನಾವಣೆಯ ಸಿದ್ಧತೆ ನಡೆಸುತ್ತಿದ್ದಂತೆ ಇತ್ತ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಲ್ಲಿ ಟಿಕೆಟ್‌ ಹಂಚಿಕೆ ಕಾರ್ಯ ಬಿರುಸಿನಿಂದ ಕೂಡಿದೆ. ಕೆಲ ಕ್ಷೇತ್ರದಲ್ಲಿ ಹಲವು ಆಕಾಂಕ್ಷಿಗಳು ಇರುವುದರಿಂದ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟುವ ಸಾಧ್ಯತೆ ಇರುವುದರಿಂದ ಪಕ್ಷಗಳೂ ಎಚ್ಚರಿಕೆಯ ಹೆಜ್ಜೆ ಇಡುತ್ತಿವೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *