ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಒಲಿದ ಕುಮಾರಕೃಪಾ ನಿವಾಸ – ಬೇರೆ ಸಚಿವರಿಗೆ ಯಾವೆಲ್ಲ ನಿವಾಸ ಸಿಕ್ಕಿದೆ ಗೊತ್ತಾ?
- ರಾಜಕೀಯ
- May 24, 2023
- No Comment
- 161
ನ್ಯೂಸ್ ಆ್ಯರೋ : ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜೊತೆಗೆ 8 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಅವರಿಗೆಲ್ಲ ವಸತಿಗೃಹಗಳನ್ನು ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅದೃಷ್ಟದ ಮನೆ ಎಂದೇ ಪರಿಗಣಿಸಲಾಗುವ ಕುಮಾರ ಕೃಪಾ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲಾಗಿದೆ.
ಸಿದ್ದರಾಮಯ್ಯ ಅವರಿಗೆ ಕಾವೇರಿ ಸರ್ಕಾರಿ ನಿವಾಸ ಹಂಚಿಕೆ ಮಾಡಲಾಗಿದೆ. ಸದ್ಯ ಅಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಸವಿದ್ದಾರೆ. ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಶಿಫ್ಟ್ ಆದ ನಂತರ ಡಿ.ಕೆ. ಶಿವಕುಮಾರ್ ಕುಮಾರಕೃಪಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಕುಮಾರ ಕೃಪಾ ವಸತಿಗೃಹಕ್ಕೆ ಡಿ.ಕೆ.ಶಿವಕುಮಾರ್ ಬೇಡಿಕೆ ಇಟ್ಟಿದ್ದರು. ಇದು ಅವರಿಗೂ ಅದೃಷ್ಟದ ತಾಣ. ಅದರಂತೆ ಸಿದ್ದರಾಮಯ್ಯ ಬಿಟ್ಟು ಕೊಟ್ಟಿದ್ದಾರೆ. ಈ ಹಿಂದೆ 2013ರಿಂದ 2018ರ ವರೆಗೆ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಇದೇ ನಿವಾಸದಲ್ಲಿದ್ದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿದ್ದ ನಿವಾಸವನ್ನು ಸಚಿವ ಎಂ.ಬಿ. ಪಾಟೀಲ್ಗೆ ನಿಗದಿ ಮಾಡಲಾಗಿದೆ. ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿದ್ದ ವಸತಿ ಗೃಹವನ್ನು ನೂತನ ಸಚಿವ ಪ್ರಿಯಾಂಕ್ ಖರ್ಗೆಗೆ ಅವರಿಗೆ ಹಂಚಿಕೆ ಮಾಡಲಾಗಿದೆ. ಇನ್ನು ಡಾ.ಜಿ.ಪರಮೇಶ್ವರ ಅವರಿಗೆ ಸದಾಶಿವನಗರದ 9ನೇ ಕ್ರಾಸ್ನಲ್ಲಿರುವ ನಂ. 94/ ಎ ವಸತಿಗೃಹ ಲಭಿಸಿದೆ.