ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆ – ಚುನಾವಣಾ ಆಯೋಗದಿಂದ ಮಾಹಿತಿ, ನಾಳೆಯಿಂದಲೇ ನೀತಿ ಸಂಹಿತೆ ಜಾರಿ…!!

ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆ – ಚುನಾವಣಾ ಆಯೋಗದಿಂದ ಮಾಹಿತಿ, ನಾಳೆಯಿಂದಲೇ ನೀತಿ ಸಂಹಿತೆ ಜಾರಿ…!!

ನ್ಯೂಸ್ ಆ್ಯರೋ : ದೇಶಾದ್ಯಂತ ಲೋಕಸಭಾ ಚುನಾವಣೆಗೆ ಸರ್ವ ರಾಜಕೀಯ ಪಕ್ಷಗಳು ಗೆಲುವಿನ ತಂತ್ರ ಹೆಣೆಯಲು ಸಜ್ಜಾಗಿರುವಂತೆ ಲೋಕಸಭಾ ಚುನಾವಣೆಯ ವೇಳಾಪಟ್ಟಿಯ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ‌. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದ್ದು, ಈ ಪ್ರಕಟಣೆಯನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಇದನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಎಂದು ಇಸಿಐ ತಿಳಿಸಿದೆ.

ಕಳೆದ ಬಾರಿ 2019 ರಲ್ಲಿ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯಿತು. ಕಳೆದ ಬಾರಿ ಮಾರ್ಚ್ 10ರಂದು ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಿಸಿತ್ತು. ಏಪ್ರಿಲ್ 11 ರಂದು ಮೊದಲ ಹಂತದ ಮತದಾನ ನಡೆದಿದ್ದರೆ, ಮೇ 19 ರಂದು ಕೊನೆಯ ಹಂತದ ಮತದಾನ ನಡೆದಿತ್ತು. ಮೇ 23ರಂದು ಫಲಿತಾಂಶ ಹೊರಬಿದ್ದಿತ್ತು. ಆ ಚುನಾವಣೆಯ ಸಮಯದಲ್ಲಿ, ದೇಶದಲ್ಲಿ 91 ಕೋಟಿಗೂ ಹೆಚ್ಚು ಮತದಾರರಿದ್ದರು, ಅದರಲ್ಲಿ 67 ಪ್ರತಿಶತದಷ್ಟು ಜನರು ಮತ ಚಲಾಯಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದೆ ನಾಳೆ ಯಾವುದೇ ಹೊಸ ನೀತಿ ನಿರ್ಧಾರಗಳನ್ನು ಘೋಷಿಸದಂತೆ ಅಧಿಕಾರದಲ್ಲಿರುವ ಸರ್ಕಾರವನ್ನು ನಿರ್ಬಂಧಿಸುವ ಮಾದರಿ ನೀತಿ ಸಂಹಿತೆ, ಘೋಷಣೆಯಾದ ತಕ್ಷಣ ಜಾರಿಗೆ ಬರುತ್ತದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *