ಮತ್ತೊಂದು ವಿವಾದದಲ್ಲಿ ಸಿಲುಕಿದ ಶಕುಂತಲಾ ನಟರಾಜ್ – ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ, ಪೊಲೀಸರಿಂದ ಸ್ವಯಂಪ್ರೇರಿತ ಎಫ್‌ಐಆರ್

ಮತ್ತೊಂದು ವಿವಾದದಲ್ಲಿ ಸಿಲುಕಿದ ಶಕುಂತಲಾ ನಟರಾಜ್ – ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ, ಪೊಲೀಸರಿಂದ ಸ್ವಯಂಪ್ರೇರಿತ ಎಫ್‌ಐಆರ್

ನ್ಯೂಸ್ ಆ್ಯರೋ : ಸಿಎಂ ಸಿದ್ದರಾಮಯ್ಯ ಅವರ ಕುಟುಂಬವನ್ನು ಅವಹೇಳನ ಮಾಡಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಮಾಧ್ಯಮ ವಿಭಾಗದ ಶಕುಂತಲಾ ನಟರಾಜ್ ಅವರು ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.

ಕೊಚ್ಚಿಯ ಲುಲು ಮಾಲ್‌ನಲ್ಲಿ ಭಾರತದ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂದು ಟ್ವಿಟರ್ ನಲ್ಲಿ ಫೇಕ್ ಪೊಸ್ಟ್ ಹಂಚಿಕೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರೇ ಸ್ವಯಂಪ್ರೇರಿತರಾಗಿ ಶಕುಂತಲಾ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಫೋಟೊ ಜೊತೆಗೆ ಪೋಸ್ಟ್ ಹಂಚಿಕೊಂಡಿದ್ದರು ಶಕುಂತಲಾ ನಟರಾಜ್‌. ಆದರೆ, ಇದೊಂದು ಸುಳ್ಳು ಸುದ್ದಿ ಎಂದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿದೆ. ಹೀಗಾಗಿ ಪೊಲೀಸರು ಶಕುಂತಲಾ ನಟರಾಜ್‌ ಮೇಲೆ ಕೇಸು ದಾಖಲಿಸಿದ್ದಾರೆ.

ಶಕುಂತಲಾ ಹಂಚಿಕೊಂಡ ಪೋಸ್ಟ್‌ನಲ್ಲಿ ಏನಿದೆ?

ʻʻಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ.? @ಡಿ.ಕೆ. ಶಿವಕುಮಾರ್‌ #ಬಾಯ್ಕಾಟ್ ಲುಲುಮಾಲ್‌’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.‌‌

ಮೊದಲನೆಯದಾಗಿ ಇದು ಫೇಕ್‌ ಫೋಟೊ ಆಗಿತ್ತು. ಅಲ್ಲಿ ವಿಶ್ವಕಪ್‌ ಕ್ರಿಕೆಟ್‌ ಹಿನ್ನೆಲೆಯಲ್ಲಿ ಪ್ರತಿನಿಧಿಸುವ ಎಲ್ಲ ತಂಡಗಳ ದೇಶಗಳ ಬಾವುಟವನ್ನು ಒಂದೇ ಗಾತ್ರದಲ್ಲಿ ಹಾಕಲಾಗಿತ್ತು. ಆದರೆ, ಅವುಗಳನ್ನು ಬೇರೆ ಬೇರೆ ಕೋನದಲ್ಲಿ ಫೋಟೊ ತೆಗೆದು ಭಾರತದ ಧ್ವಜ ಪಾಕಿಸ್ತಾನಕ್ಕಿಂತ ಸಣ್ಣದಾಗಿದೆ ಎಂಬಂತೆ ಬಿಂಬಿಸಲಾಗಿದೆ. ಇಲ್ಲವೇ ಉದ್ದೇಶಪೂರ್ವಕವಾಗಿ ಎಡಿಟ್‌ ಮಾಡಿ ಪ್ರಕಟಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆಂಬ ಆರೋಪದಡಿ ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ವಿಚಾರಣೆಗೆ ಬರುವಂತೆ ಶಕುಂತಲಾ ಅವರಿಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಉಡುಪಿಯಲ್ಲಿ ನಡೆದ ವಿಡಿಯೋ ಚಿತ್ರೀಕರಣ ಸುದ್ದಿಯಲ್ಲಿದ್ದಾಗ ಶಕುಂತಲಾ ನಟರಾಜ್‌ ಅವರು ಸಿದ್ದರಾಮಯ್ಯ ಕುಟುಂಬವನ್ನು ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್‌ ಹಾಕಿದ್ದರು. ಈ ಪ್ರಕರಣದಲ್ಲಿ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *