ಸೆ.18ರಿಂದ 22ರ ವರೆಗೆ ಸಂಸತ್ ನ ವಿಶೇಷ ಅಧಿವೇಶನ – ಜಾರಿಯಾಗುತ್ತಾ ಸಿವಿಲ್ ಕೋಡ್? ಒಂದು ದೇಶ, ಒಂದು ಚುನಾವಣೆ ಘೋಷಣೆಯಾಗುತ್ತಾ?

ಸೆ.18ರಿಂದ 22ರ ವರೆಗೆ ಸಂಸತ್ ನ ವಿಶೇಷ ಅಧಿವೇಶನ – ಜಾರಿಯಾಗುತ್ತಾ ಸಿವಿಲ್ ಕೋಡ್? ಒಂದು ದೇಶ, ಒಂದು ಚುನಾವಣೆ ಘೋಷಣೆಯಾಗುತ್ತಾ?

ನ್ಯೂಸ್ ಆ್ಯರೋ‌ : ಕೇಂದ್ರ ಸರಕಾರ ಸೆಪ್ಟಂಬರ್ ನಲ್ಲಿ 5 ದಿನಗಳ ವಿಶೇಷ ಸಂಸತ್ ಅಧಿವೇಶನ ನಡೆಸಲು ತೀರ್ಮಾನಿಸಿದೆ. ಸೆಪ್ಟಂಬರ್ 18-22ರ ವರೆಗೆ ಈ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.

ಕಾರಣವೇನು?

ಮಣಿಪುರ ಹಿಂಸಾಚಾರದ ವಿರುದ್ಧ ವಿಪಕ್ಷಗಳು ನಡೆಸಿದ ಗದ್ದಲದ ನಡುವೆ ಮುಂಗಾರು ಅಧಿವೇಶನವು ಇತ್ತೀಚೆಗೆ ಮುಕ್ತಾಯ ಕಂಡಿತ್ತು. ಇದೀಗ ಅಧಿವೇಶನ ಕರೆದಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ರಚನಾತ್ಮಕ ಚರ್ಚೆ ಮತ್ತು ಸಂವಾದ ನಡೆಯುವ ನಿರೀಕ್ಷೆ ಇದೆ ಜೋಷಿ ಎಕ್ಸ್ (ಟ್ವಿಟರ್) ನಲ್ಲಿ ಹೇಳಿದ್ದಾರೆ.

ಆದರೆ ಸಂಸತ್ ನ ಈ ವಿಶೇಷ ಅಧಿವೇಶನ ಯಾಕಾಗಿ ಕರೆಯಲಾಗಿದೆ ಎನ್ನುವ ನಿರ್ದಿಷ್ಟ ಕಾರಣವನ್ನು ಸಚಿವರು ನೀಡಿಲ್ಲ. ಅಜೆಂಡಾ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ. ಜೊತೆಗೆ ಯೂನಿಫಾರ್ಮ್ ಸಿವಿಲ್ ಕೋಡ್ ಅಳವಡಿಕೆ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗೆಯೇ ಒಂದು‌ ದೇಶ, ಒಂದು ಚುನಾವಣೆ ಕುರಿತು ಮಸೂದೆ ಆರಂಭವಾಗುವ ನಿರೀಕ್ಷೆ ಇದೆ.

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವಿಶೇಷ ಕಲಾಪಗಳು ನಡೆಯಲಿವೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ವಾಪಸ್ ನೀಡಲು ಮತ್ತು ಶೀಘ್ರ ಚುನಾವಣೆ ನಡೆಸಲು ಕಾಲಮಿತಿ ಸಿದ್ದಪಡಿಸಲಾಗುವುದು ಎಂದು ಸುಪ್ರಿಂ ಕೋರ್ಟ್ ಗೆ ಕೇಂದ್ರ ಭರವಸೆ ನೀಡಿದ ಬೆನ್ನಲ್ಲೇ ಈ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ಕುರಿತಾದ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ವಿಶೇಷ ಅದಿವೇಶನವನ್ನು ಗಣೇಶ ಚತುರ್ಥಿ ಸಂದರ್ಭದಲ್ಲೇ ಆಯೋಜಿಸಿ ಹಿಂದೂ ಭಾವನೆಗಳಿಗೆ ದಕ್ಕೆ ತರಲಾಗಿದೆ ಎಂದು ರಾಜ್ಯಸಭೆ ಸಂಸದೆ ಮತ್ತು ಉದ್ದವ್ ಠಾಕ್ರೆ ಬಣದ ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *