‘ಟೆಂಟಲ್ಲಿ ಬ್ಲೂಫಿಲಂ ತೋರಿಸ್ಕೊಂಡು ಲೈಫಲ್ಲಿ ಸಾಗಿ ಬಂದೋರು ಅವರು ‘- ಕುಮಾರಣ್ಣ ಹೀಗೆ ಹೇಳಿದ್ದು ಯಾರಿಗೆ ಗೊತ್ತಾ..?

‘ಟೆಂಟಲ್ಲಿ ಬ್ಲೂಫಿಲಂ ತೋರಿಸ್ಕೊಂಡು ಲೈಫಲ್ಲಿ ಸಾಗಿ ಬಂದೋರು ಅವರು ‘- ಕುಮಾರಣ್ಣ ಹೀಗೆ ಹೇಳಿದ್ದು ಯಾರಿಗೆ ಗೊತ್ತಾ..?

ನ್ಯೂಸ್ ಆ್ಯರೋ : ರಾಜಕೀಯ ಜೀವನದಲ್ಲಿ ಕೇಳುವಷ್ಟು ಟೀಕೆ, ವ್ಯಂಗ್ಯ ಮಾತು ಬಹುಶಃ ನಾವೆಲ್ಲೂ ಕೇಳಲು ಸಾಧ್ಯವಿಲ್ಲವೇನೋ..ಪಕ್ಷ ಪಕ್ಷಗಳ ನಡುವೆ ರಾಜಕಾರಣಿಗಳು ಕಚ್ಚಾಡುವುದು ಮಾಮೂಲಿ. ಇನ್ನು ಅದು ಮಾಧ್ಯಮಕ್ಕೆ ಆಹಾರವಾಗದೆ ಇರುತ್ತಾ ಹೇಳಿ… ಇದೀಗ ಮತ್ತೊಮ್ಮೆ ಮಾಧ್ಯಮದ ಎದುರು ಹೆಚ್.ಡಿ ಕುಮಾರಸ್ವಾಮಿ ಮತ್ತೊಬ್ಬ ರಾಜಕೀಯ ಮುಖಂಡನನ್ನು ಗುಮ್ಮಿದ್ದಾರೆ.

‘ಘನತೆಗೆ ತಕ್ಕಂತೆ ಮಾತನಾಡಿ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೆಚ್.ಡಿ ಕುಮಾರಸ್ವಾಮಿಗೆ ಹೇಳಿದ್ದರು. ಇದನ್ನು ಮಾಧ್ಯಮದವರು ಪ್ರಶ್ನಿಸಿದಾಗ ಗರಂ ಆದ ಕುಮಾರಣ್ಣ ‘ ಘನತೆ ಗೌರವದ ಬಗ್ಗೆ ಮಾತನಾಡುವ ಅವರಿಗೆ ಯಾವ ರೀತಿಯ ಘನತೆ ಇದೆ’ ಎಂದು ಪ್ರಶ್ನಿಸಿದರು. ಅಲ್ಲದೆ ಸಾತನೂರಿನಲ್ಲಿ ಟೆಂಟ್ ಹಾಕಿ ಬ್ಲೂ ಫಿಲಂ ಪ್ರಸಾರ ಮಾಡುತ್ತಿದ್ದ ಹಿಂದಿನ ವಿಚಾರವನ್ನು ಕೆದಕಿ ಮಾತನಾಡಿದರು.

ಮಾಧ್ಯಮದವರ ಪ್ರಶ್ನೆಗೆ ಹೆಚ್ಡಿಕೆ ಏನೆಂದು ಉತ್ತರಿಸಿದ್ರು..?

ಹಾಸನದಲ್ಲಿ ಮಾಧ್ಯಮದವರ ಪ್ರಶ್ನೆಗೆ ಕೆಂಡಾಮಂಡಲರಾದ ಎಚ್.ಡಿ ಕುಮಾರಸ್ವಾಮಿ ಅವರು ‘ ಅವರಿಗೆ ಯಾವ ಘನತೆ ಇದೆ? ಕರೆಂಟ್ ಕಳ್ಳ ಅಂತ ಪೋಸ್ಟರ್ ಅಂಟಿಸೋದಾ ನಿಮ್ಮ ಘನತೆ..? ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನ ಘನತೆ ಇದಲ್ಲವೇ…? ಎಂದು ಖಾರವಾಗಿ ಕೇಳಿದರು.

ಇನ್ನು ಹಳೆಯ ವಿಚಾರವನ್ನು ಮತ್ತೆ ಕೆದಕಿ ಮಾತನಾಡಿದ ಅವರು ‘ ಕನಕಪುರದ ದೊಡ್ಡ ಆಲಹಳ್ಳಿಯ ಸಾತನೂರು ಬಳಿ ಎರಡು ಟೆಂಟ್ ಇಟ್ಟುಕೊಂಡು ಕನೆಕ್ಷನ್ ತಗೊಂಡು ಜನರಿಗೆ ಬ್ಲೂಫಿಲಂ ನಡೆಸುತ್ತಿದ್ದರಲ್ಲ. ಆ ಸಂಸ್ಕೃತಿಯಲ್ಲಿ ಬಂದಿರುವುದರಿಂದ ಈ ರೀತಿಯಾಗಿ ಕಳ್ಳ ಅಂತ ಪೋಸ್ಟರ್ ಅಂಟಿಸಿಕೊಂಡು ಕುಳಿತ್ತಿದ್ದೀರಿ. ಎಲ್ಲೆಲ್ಲಿ ಏನೇನು ಮಾಡಿದ್ದೀರಿ ಅಂತ ಗೊತ್ತಿಲ್ವಾ..? ಕದ್ದು ಗ್ರಾನೈಟ್ ಹೊಡ್ಕೊಂಡು ಕುಳಿತ್ತಿದ್ದೀರಿ.

ದರೋಡೆ ಮಾಡಿದ್ದೀರಿ. ಎಲ್ಲಿಲ್ಲಿ ಏನೇನು ಮಾಡಿದ್ದೀರಿ…ಎಲ್ಲಾನೂ ಗೊತ್ತಿದೆ. ಮತ್ತಿಕೆರೆ ರೈಲ್ವೇ ನಿಲ್ದಾಣದಲ್ಲಿ ಅರ್ಧ ರಾತ್ರಿಯಲ್ಲಿ ಗ್ರಾನೈಟ್ ಬರುತ್ತಿದೆ. ನಾನು ಕಾಣದ್ದಲ್ಲ. ಹೇಗೆ ಬದುಕಬೇಕು ಅನ್ನೋದನ್ನು ನಾನು ನಿಮ್ಮಿಂದ ಕಲಿಯಬೇಕಿಲ್ಲ’ ಎಂದು ಸಿಡುಕಿನಿಂದ ನುಡಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *