ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಂಡಿದ್ದು ಯಾಕೆ? – ಎಲ್ಲರಿಗೂ ಗೊತ್ತಿಲ್ಲದ ಅಸಲಿ ಸತ್ಯ ಇಲ್ಲಿದೆ..

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಂಡಿದ್ದು ಯಾಕೆ? – ಎಲ್ಲರಿಗೂ ಗೊತ್ತಿಲ್ಲದ ಅಸಲಿ ಸತ್ಯ ಇಲ್ಲಿದೆ..

ನ್ಯೂಸ್ ಆ್ಯರೋ‌ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ಜೆಡಿಎಸ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಯುವ ನಾಯಕ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿದಲಾಗಿದೆ.

ಕಾರಣವೇನು?

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅನರ್ಹಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.

ಅನರ್ಹಕ್ಕೆ ಕಾರಣವಾದ ಅಂಶಗಳು

  • ಪ್ರಜ್ವಲ್ ರೇವಣ್ಣ ಮೆಸರ್ಸ್ ಅಧಿಕಾರ್ ವೆಂಚರ್ಸ್ ಎಲ್.ಎಲ್.ಪಿ. ಮತ್ತು ದ್ರೋಣ ವರ್ಕ್ ಫೋರ್ಸ್ ಎಲ್.ಎಲ್.ಪಿ. ಸಂಸ್ಥೆಗಳಲ್ಲಿನ ಪಾಲುದಾರಿಕೆ ಮತ್ತು ಮಾಲಿಕತ್ವದ ವಿವರಗಳನ್ನು ಬಹಿರಂಗಪಡಿಸಿಲ್ಲ.
  • ಚುನಾವಣೆಗೆ ಸ್ಪರ್ಧಿಸುವಾಗ ಅಂದಿನ ದಿನಕ್ಕೆ ಅನುಗುಣವಾಗಿ ಕಳೆದ 5 ವರ್ಷಗಳ ಆದಾಯ ತೆರಿಗೆ ಪಾವತಿಯ ಸಲ್ಲಿಸಬೇಕು. ಆದರೆ ಪ್ರಜ್ವಲ್ ರೇವಣ್ಣ 2008ರಿಂದ 2018ರ ಅವಧಿಯಲ್ಲಿ ದೊಡ್ಡ ಮೊತ್ತದ ಆದಾಯ ಮತ್ತು ಆಸ್ತಿ ಸಂಪಾದಿಸಿದ್ದರೂ 2018-19ನೇ ಸಾಲಿನ ಆದಾಯ ತೆರಿಗೆ ಮಾಹಿತಿ ಮಾತ್ರ ಒದಗಿಸಿದ್ದಾರೆ.
  • ಸ್ಥಿರ ಮತ್ತು ಚರಾಸ್ತಿಗಳ ಕುರಿತು ಅಸಮರ್ಪಕ ಮಾಹಿತಿ ನೀಡಿದ್ದು, ಅನೇಕ ಅಂಶಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ಪ್ರಮಾಣ ಪತ್ರದಲ್ಲಿ ಮರೆ ಮಾಚಲಾಗಿದೆ.
  • ಎಚ್.ಡಿ.ರೇವಣ್ಣ ಅವರಿಂದ ದೊಡ್ಡ ಮೊತ್ತದ ಅಂದರೆ 1.26 ಕೋಟಿ ರೂ. ಸಾಲ ಪಡೆದಿರುವುದಾಗಿ ಪ್ರಜ್ವಲ್ ಹೇಳಿದ್ದಾರೆ. ಆದರೆ ರೇವಣ್ಣ ಲೋಕಾಯುಕ್ತಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಮಗನಿಗೆ 47.36 ಲಕ್ಷ ರೂ. ಸಾಲ ಕೊಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.
  • ಪ್ರಜ್ವಲ್ ರೇವಣ್ಣ ತಮ್ಮ ವ್ಯಾಪಾರದ ಆದಾಯ 7.48 ಲಕ್ಷ ರೂ. ಎಂದು ಘೋಷಿಸಿಕೊಂಡಿದ್ದಾರೆ. ಆದರೆ ಆದಾಯದ ಮೂಲ ಯಾವುದು ಎಂದು ಬಹಿರಂಗಪಡಿಸಿಲ್ಲ.
  • 2019ರ ಮಾರ್ಚ್ 22ಕ್ಕೆ ಅನ್ವಯವಾಗುವಂತೆ ಬ್ಯಾಂಕ್ ಬ್ಯಾಲೆನ್ಸ್ 5.78 ಲಕ್ಷ ರೂ. ಎಂದು ಪ್ರಮಾಣ ಪತ್ರದಲ್ಲಿ ತೋರಿಸಲಾಗಿತ್ತು. ಆದರೆ ವಾಸ್ತವದಲ್ಲಿ ಅದು 49.09 ಲಕ್ಷ ರೂ. ಆಗಿತ್ತು.
    *ರಾಜ್ಯಸಭಾ ಸದಸ್ಯರಾಗಿದ್ದ ಕುಪೇಂದ್ರ ರೆಡ್ಡಿ ಅವರಿಂದ ಪಡೆದುಕೊಂಡಿದ್ದ 50 ಲಕ್ಷ ರೂ. ಮಾಹಿತಿಯನ್ನೂ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿಲ್ಲ.

ತಕರಾರು ಅರ್ಜಿ

ಲೋಕಸಭೆಗೆ 2019ರ ಎಪ್ರಿಲ್ 18ರಂದು ಚುನಾವಣೆ ನಡೆದು ಮೇ 23ರಂದು ಫಲಿತಾಂಶ ಪ್ರಕಟವಾಗಿತ್ತು. ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಜಯಗಳಿಸಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ಮಂಜು ಎರಡನೇ ಸ್ಥಾನ ಗಳಿಸಿದ್ದರು. ಕಾಂಗ್ರೆಸ್ ನಲ್ಲಿದ್ದು ಬಳಿಕ ಬಿಜೆಪಿ ಸೇರಿದ್ದ ಜಿ.ದೇವರಾಜೇ ಗೌಡ ಮತ್ತು ಎ.ಮಂಜು ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಅಕ್ರಮವಾಗಿ ಜಯ ಗಳಿಸಿದ್ದಾರೆ ಎಂದು ವಾದಿಸಿದ್ದರು.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *