ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಿಂದ 30-40 ಶಾಸಕರು ಹೊರಗೆ ಬರ್ತಾರೆ..! – ಹಸ್ತದ ಒಳಗೆ ಆಪರೇಷನ್ ಹಸ್ತ ನಡೆಯುತ್ತಿದೆ : ನಳಿನ್ ಕುಮಾರ್ ಕಟೀಲ್

ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಿಂದ 30-40 ಶಾಸಕರು ಹೊರಗೆ ಬರ್ತಾರೆ..! – ಹಸ್ತದ ಒಳಗೆ ಆಪರೇಷನ್ ಹಸ್ತ ನಡೆಯುತ್ತಿದೆ : ನಳಿನ್ ಕುಮಾರ್ ಕಟೀಲ್

ನ್ಯೂಸ್ ಆ್ಯರೋ : ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆಶಿ ಮತ್ತು ಜಾರಕಿಹೊಳಿ ತಂಡ ಇಬ್ಬಾಗವಾಗ್ತಿದೆ. ಅದರ ಮಧ್ಯೆ ಮರಿಖರ್ಗೆ ಮುಖ್ಯಮಂತ್ರಿ ಬೇಡಿಕೆ ಇಡ್ತಾ ಇದ್ದಾರೆ, ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ, ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರ್ತಾರೆ ಎಂದು ಬಾಂಬ್ ಸಿಡಿಸಿದ್ದಾರೆ‌

ಇನ್ನು ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ‌ ಬರ್ತಾರೆ ಅಂತ ದಾರಿ ತಪ್ಪಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಯಾರೂ ಹೋಗ್ತಾ ಇಲ್ಲ‌. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್ ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ. ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ ಎಂದರು.

ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು. ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗ್ತಾ ಇಲ್ಲ, ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ, ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ ಎಂದು ಟೀಕಿಸಿದರು.

ಇನ್ನು ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದ್ರೂ ಬಂಧನ ಆಗ್ತಾ ಇಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ. ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ. ರಾಜ್ಯದಿಂದ ಒಂದು ರೂ. ಬಿಡಿಗಾಸು ಬಿಡಗಡೆಯಾಗಿಲ್ಲ ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ, ಮೂರ್ನಾಲ್ಕು ತಿಂಗಳು‌ ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ಕಟೀಲ್ ಹೇಳಿಕೆ ನೀಡಿದರು.

ಇನ್ನು ನಾಳೆ ಬಿಜೆಪಿ ನೂತನ ರಾಜ್ಯಾಧ್ಯಕ್ಷರು ಮಂಗಳೂರಿಗೆ ಬರ್ತಾರೆ. ಅವರನ್ನು ಮಂಗಳೂರು ಏರ್ಪೋರ್ಟ್ ನಿಂದ ಸ್ವಾಗತ ಮಾಡ್ತೇವೆ. ಅಲ್ಲಿಂದ ಮೆರವಣಿಗೆ ಮಾಡಿ ಮಂಗಳೂರಿನ ಸಿ.ವಿ.ನಾಯಕ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆ ಇರಲಿದೆ. ಬಳಿಕ ಒಂದಷ್ಟು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *