DVS : ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳು ಎನ್.ಡಿ.ಎ. ಪಾಲಿಗೆ – ಮಾಜಿ‌ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿಕೆ

DVS : ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳು ಎನ್.ಡಿ.ಎ. ಪಾಲಿಗೆ – ಮಾಜಿ‌ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿಕೆ

ನ್ಯೂಸ್ ಆ್ಯರೋ‌ : ದ‌.ಕ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಗಳ ಜೊತೆ‌ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೂಡ ಎನ್.ಡಿ.ಎ ಜೊತೆಗಿದೆ. ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳಲಿದೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಹಿನ್ನಡೆಯಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಆಡಳಿತ ಅತ್ಯಂತ ಯಶಸ್ವಿಯಾಗಿದೆ, ಅವರಿಂದ ಈ ದೇಶದಲ್ಲಿ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದರು.

ಬಿಜೆಪಿ ಪಕ್ಷ ನನಗೆ ಎಲ್ಲವನ್ನು ನೀಡಿದೆ ಎನ್ನುವುದು ಸತ್ಯ. ಎಂಎಲ್ಎ, ಎಂಪಿ, ಎಂಎಲ್ಸಿ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ, ರಾಜ್ಯ, ರಾಷ್ಟ್ರೀಯ ಹುದ್ದೆಗಳನ್ನು ನೀಡಿದೆ. ಇನ್ನು ನಾನು ಏನಾದರೂ ಪಕ್ಷಕ್ಕೆ ನೀಡಬೇಕಿದೆ ಆದ್ದರಿಂದ ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *