ಮೋದಿ ಬೆಂಗಳೂರಿಗೆ ಬಂದರೂ ರಾಜ್ಯ ಬಿಜೆಪಿ ನಾಯಕರಿಗೆ ನೋ ವಿಸಿಟ್ – ಬ್ಯಾರಿಕೇಡ್‌ನ ಹಿಂದೆ ನಿಂತ ಬಿಜೆಪಿ ನಾಯಕರನ್ನು ಕಿಚಾಯಿಸಿದ ಕಾಂಗ್ರೆಸ್‌

ಮೋದಿ ಬೆಂಗಳೂರಿಗೆ ಬಂದರೂ ರಾಜ್ಯ ಬಿಜೆಪಿ ನಾಯಕರಿಗೆ ನೋ ವಿಸಿಟ್ – ಬ್ಯಾರಿಕೇಡ್‌ನ ಹಿಂದೆ ನಿಂತ ಬಿಜೆಪಿ ನಾಯಕರನ್ನು ಕಿಚಾಯಿಸಿದ ಕಾಂಗ್ರೆಸ್‌

ನ್ಯೂಸ್‌ ಆ್ಯರೋ : ಚಂದ್ರಯಾನ 3ರ ಯಶಸ್ವಿಗೆ ಕಾರಣರಾದ ಇಸ್ರೋ ಜ್ಞಾನಿಗಳಿಗೆ ಶುಭಕೋರಲು ಪ್ರಧಾನಿ ಮೋದಿ ಅವರು ಗ್ರೀಸ್‌ ದೇಶದಿಂದ ಇಂದು ನೇರವಾಗಿ ಬೆಂಗಳೂರಿಗೆ ಬಂದಿಳಿದ್ದಾರೆ. ರಸ್ತೆ ಮಾರ್ಗದ ಮೂಲಕ ಪೀಣ್ಯ ಬಳಿಯಿರುವ ಇಸ್ರೋಗೆ ಭೇಟಿ ನೀಡಿದ್ದಾರೆ.

ಈ ವೇಳೆ ಮೋದಿಯನ್ನು ಸ್ವಾಗತಿಸಲು ರಸ್ತೆ ಬದಿಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ನಿಂತಿದ್ದರು. ರಸ್ತೆಯ ಬ್ಯಾರಿಕೇಡ್​ ಹಿಂದೆ ನಾಯಕರು ನಿಂತಿರೋ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ, ಬಿಜೆಪಿಯನ್ನು ಕಾಂಗ್ರೆಸ್​ ನಾಯಕರು ಗೇಲಿ ಮಾಡಿ ಕಾಲೇಳೆಯುತ್ತಿದ್ದಾರೆ

ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ, ಮಾಜಿ ಎಂಎಲ್‌ಸಿ ರಮೇಶ್ ಬಾಬು ಟ್ವೀಟ್ ಮಾಡಿ, ಇಂಥ ದುರಂತವನ್ನು ನೀವು ಸರ್ವಾಧಿಕಾರಿ ಆಡಳಿತದಲ್ಲಿ ಮಾತ್ರ ನೋಡಲು ಸಾಧ್ಯ. ಮೋದಿ ಭೇಟಿ ವೇಳೆ ರಾಜ್ಯ ಬಿಜೆಪಿ ನಾಯಕರನ್ನು ನಾಯಿಗಿಂತ ಕಡೆಯಾಗಿ ನೋಡಲಾಗಿದೆ. ಬಿಜೆಪಿ ಆರ್​ಎಸ್​ಎಸ್​ನಲ್ಲಿ ಆತ್ಮಾಭಿಮಾನ ಸಂಸ್ಕೃತಿ ಕಳೆದು ಹೋಗಿದೆ, ಜೈ ಮೋದಿ ಎಂದು ಅಪಹಾಸ್ಯ ಮಾಡಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಕಾಂಗ್ರೆಸ್​ ಟ್ವೀಟ್ ಮಾಡಿ, ಬಿಜೆಪಿ ನಾಯಕರದ್ದು ಎಂತಹ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *