
ರಾಷ್ಟ್ರಪತಿಯಿಂದ ಸಂಸತ್ ಭವನ ಉದ್ಘಾಟನೆ ನಡೆಸಲು ಮನವಿ – ಸುಪ್ರೀಂ ಕೋರ್ಟ್ ಹೇಳಿದ್ದೇನು?
- ರಾಜಕೀಯ
- May 26, 2023
- No Comment
- 99
ನ್ಯೂಸ್ ಆ್ಯರೋ : ನೂತನ ಸಂಸತ್ ಭವನದ ಉದ್ಘಾಟನೆಯನ್ನು ಭಾರತದ ಪ್ರಥಮ ಪ್ರಜೆ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ನಡೆಸುವಂತೆ ಲೋಕಸಭೆಯ ಸೆಕ್ರೆಟರಿಯೇಟ್ಗೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯಾಯವಾದಿ ಜಯ ಸುಕಿನ್ ಎಂಬುವರು ಈ ಬಗ್ಗೆ ದಾವೆ ಹೂಡಿದ್ದು, ಲೋಕಸಭೆ ಸೆಕ್ರೆಟರಿಯೇಟ್ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ತಮ್ಮ ಅರ್ಜಿಯನ್ನು ಪರಿಗಣಿಸದೆ ಇರುವುದರಿಂದ ಇದೀಗ ಅವರು ತಮ್ಮ ಮನವಿಯನ್ನು ಹಿಂತೆಗೆದುಕೊಂಡಿದ್ದಾರೆ. ತೀರ್ಪು ನೀಡಿದ ನ್ಯಾಯಾಲಯ, ”ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ. ಇದನ್ನು ಪರಿಗಣಿಸಲು ನಾವು ಒಲವು ತೋರುತ್ತಿಲ್ಲ” ಎಂದು ಹೇಳಿದೆ.
ಮೇ 18ರಂದು ಲೋಕಸಭೆಯ ಸೆಕ್ರೆಟರಿ ಜನರಲ್ ಬಿಡುಗಡೆ ಮಾಡಿರುವ ಆಹ್ವಾನ ಪತ್ರಿಕೆ ದೇಶದ ಸಂವಿಧಾನವನ್ನು ಉಲ್ಲಂಘಿಸುತ್ತಿದೆ. ರಾಷ್ಟ್ರಪತಿ ದೇಶದ ಪ್ರಥಮ ಪ್ರಜೆ ಮತ್ತು ಅವರು ಸಂಸತ್ ನ ಮುಖ್ಯಸ್ಥರು. ದೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ನಿರ್ಧಾರಗಳನ್ನು ರಾಷ್ಟ್ರಪತಿಗಳ ಹೆಸರಿನಲ್ಲಿಯೇ ಕೈಗೊಳ್ಳಲಾಗುತ್ತದೆ ಎಂದು ವಾದಿಸಲಾತ್ತು.
ಸಂವಿಧಾನದ 79ನೇ ವಿಧಿಯ ಅನ್ವಯ ರಾಷ್ಟ್ರಪತಿ ಸಂಸತ್ನ ಅವಿಭಾಜ್ಯ ಅಂಗ. ಹೀಗಾಗಿ ಉದ್ಘಾಟನಾ ಕಾರ್ಯಕ್ರಮದಿಂದ ಅವರನ್ನು ದೂರ ಇರಿಸುವಂತೆ ಇಲ್ಲ. ಈ ಹಿನ್ನೆಲೆಯಲ್ಲಿ ಹೊಸ ಸಂಸತ್ ಭವನವನ್ನು ರಾಷ್ಟ್ರಪತಿಯಿಂದ ಉದ್ಘಾಟನೆ ನಡೆಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು.