Puttur : ಲವ್ ಮಾಡುವಂತೆ ಒತ್ತಾಯ, ತಿರಸ್ಕರಿಸಿದ‌ ಮುಸ್ಲಿಂ ವಿದ್ಯಾರ್ಥಿನಿಗೆ ಬ್ಲೇಡ್ ನಿಂದ ಇರಿದ ಹಿಂದೂ ವಿದ್ಯಾರ್ಥಿ‌ – ಗಾಯಾಳು ಆಸ್ಪತ್ರೆಗೆ ದಾಖಲು, ಆಸ್ಪತ್ರೆಯಲ್ಲಿ ಹೆಸರು ಬದಲಿಸಿ ಹೇಳುವಂತೆ ಒತ್ತಡ ಎಂದ ವಿದ್ಯಾರ್ಥಿನಿ..!!

Spread the love

ನ್ಯೂಸ್ ಆ್ಯರೋ‌ ‌: ಪ್ರಥಮ ಪಿಯುಸಿಯ ಅಪ್ರಾಪ್ತ‌ ಮುಸ್ಲಿಂ ವಿದ್ಯಾರ್ಥಿನಿಗೆ ಪ್ರಥಮ ಪಿಯುಸಿಯ ಹಿಂದೂ ವಿದ್ಯಾರ್ಥಿಯೊಬ್ಬ ಬ್ಲೇಡ್ ನಿಂದ ಇರಿದು ಗಾಯಗೊಳಿಸಿದ ಘಟನೆ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಐಷತ್ ಇರ್ಫಾನಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಬ್ಲೇಡ್ ನಿಂದ ಇರಿದ ಆರೋಪಿ ಶ್ರೀಜಿತ್ ಕೂಡ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದಾನೆ. ಇಬ್ಬರೂ ಕೂಡ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ.

ಇಂದು ಬೆಳಗ್ಗೆ ವಿದ್ಯಾರ್ಥಿನಿ ಇರ್ಫಾನಾಳನ್ನು ಫಾಲೋ ಮಾಡಿದ ಆರೋಪಿ ವಿದ್ಯಾರ್ಥಿ ಶ್ರೀಜಿತ್
ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದ. ಆ ಸಂದರ್ಭದಲ್ಲಿ ಇರ್ಫಾನಾ‌ ಆರೋಪಿಗೆ‌ ನಿಂದಿಸಿದ್ದಳು‌.

ಇದರಿಂದ ಸಿಟ್ಟಿಗೆದ್ದ ಆರೋಪಿ ಶ್ರೀಜಿತ್ ಕೂಡಲೇ ಇರ್ಫಾನಾ ಕೈಗೆ ಬ್ಲೇಡ್ ನಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ವಿದ್ಯಾರ್ಥಿನಿ ‌ಆರೋಪಿಸಿದ್ದು, ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾಳೆ.

ಘಟನೆಯ‌ ಬಳಿಕ ಆಸ್ಪತ್ರೆಗೆ ವಿದ್ಯಾರ್ಥಿನಿ ದಾಖಲಾಗಿದ್ದು, ಆಸ್ಪತ್ರೆಯ ಮುಂದೆ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದರು. ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ನೆರೆದಿದ್ದ ಜನರನ್ನು ಪೋಲಿಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Leave a Reply

Your email address will not be published. Required fields are marked *