ತಿಬಾರ್ : ವಿಷಜಂತು ಕಚ್ಚಿದವರಿಗೆ ಈ ಬಾವಿಯ ನೀರೇ ಸಂಜೀವಿನಿಯಂತೆ…! – ಇದು ಇರೋದು ಎಲ್ಲಿ ಗೊತ್ತಾ..?

ತಿಬಾರ್ : ವಿಷಜಂತು ಕಚ್ಚಿದವರಿಗೆ ಈ ಬಾವಿಯ ನೀರೇ ಸಂಜೀವಿನಿಯಂತೆ…! – ಇದು ಇರೋದು ಎಲ್ಲಿ ಗೊತ್ತಾ..?

ನ್ಯೂಸ್ ಆ್ಯರೋ : ವಿಷಜಂತುಗಳು ಕಡಿದರೆ ಅದರಿಂದ ಅನುಭವಿಸುವ ನೋವು ಅಷ್ಟಿಷ್ಟಲ್ಲ. ಹಾವು, ಚೇಳು, ಜೇಡ ಹೀಗೆ ಯಾವುದೇ ವಿಷಜಂತುಗಳು ಕಚ್ಚಿದರೆ ಸಾಕು. ನಾವು ಹಳ್ಳಿಮದ್ದುಗಳ ಮೊರೆ ಹೋಗುತ್ತೇವೆ. ಆದರೆ ಇಲ್ಲಿ ನೋಡಿ ವಿಶೇಷ. ಈ ಬಾವಿಯ ನೀರು ಕುಡಿದರೆ ಸಾಕು….ಯಾವುದೇ ವಿಷಜಂತುಗಳು ಕಚ್ಚಿದರೂ ಅಪಾಯಗಳಿಂದ ಪಾರಾಗಬಹುದಂತೆ…!

ಈ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು ಹಾಕಿಕೊಂಡರೆ ವಿಷವೆಲ್ಲಾ ಇಳಿದು ಬಿಡುತ್ತದೆ. ಆದರೆ ಆ ಬಾವಿಯ ನೀರು ವರ್ಷಕ್ಕೊಂದು ಬಾರಿ ಮಾತ್ರ ಸಿಗೋದು.

ಈ ಬಾವಿ ಇರೋದು ಎಲ್ಲಿ..?

ಮಂಗಳೂರಿನ ಕಟೀಲು ಸಮೀಪದ ಶಿಬರೂರು ಎಂಬಲ್ಲಿರುವ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪವಿತ್ರ ಬಾವಿ ಇದು. ವರ್ಷಕ್ಕೊಂದು ಬಾರಿ ನಡೆಯುವ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಐದು ದಿನಗಳ ಕಾಲ ಮಾತ್ರ ಈ ಬಾವಿಯ ನೀರನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ.

ಪುರಾತನ ಕಾಲದಲ್ಲಿ ಸ್ಥಳೀಯ ದೈವೀ ವೈದ್ಯರಾದ ತ್ಯಾಂಪಣ್ಣ ಶೆಟ್ಟಿ ಎಂಬವರು ತನ್ನಲ್ಲಿದ್ದ ವಿಷ ಹೀರುವ ಕಲ್ಲೊಂದನ್ನು ಲೋಕದ ಜನತೆಯ ಒಳಿತಿಗಾಗಿ ಈ ಬಾವಿಗೆ ಹಾಕಿದ್ದಾರೆ. ಹೀಗಾಗಿ ಆ ಶಕ್ತಿಯಿಂದಲೇ ಈ ಬಾವಿಯ ನೀರು ಯಾವುದೇ ರೀತಿಯ ವಿಷವನ್ನು ಹೀರಿಕೊಳ್ಳುತ್ತದೆ ಅನ್ನುವ ನಂಬಿಕೆ. ಹಿಂದಿನ ಕಾಲದಿಂದ ಉಳಿದುಕೊಂಡು ಬಂದಿದೆ.

ಜಾತ್ರಾ ಮಹೋತ್ಸವದ 5 ದಿನದಲ್ಲಿ ಈ ದೈವಸ್ಥಾನಕ್ಕೆ ಲಕ್ಷಾಂತರ ಭಕ್ತರು ಈ ಪವಿತ್ರ ನೀರನ್ನು ಕೊಂಡೊಯ್ಯಲು ಬರುತ್ತಾರೆ. ವರ್ಷದಲ್ಲಿ ಒಂದು ಸಲ ಮಾತ್ರ ಸಿಗುವ ನೀರನ್ನು ಅಲ್ಲೇ ತೀರ್ಥ ರೂಪದಲ್ಲಿ ಕುಡಿದು ನಂತರ ಕೊಂಡೊಯ್ಯುದು ಮನೆಯಲ್ಲಿ ಸಂಗ್ರಹಿಸಿಡುತ್ತಾರೆ.

ಈ ನೀರನ್ನು ಕುಡಿಯುವುದರಿಂದ ವರ್ಷವಿಡೀ ದೇಹದಲ್ಲಿದ್ದ ವಿಷಕಾರಿ ಅಂಶಗಳು ಹೋಗುತ್ತದೆ. ಜೊತೆಗೆ ವಿಷಜಂತುಗಳು ಕಡಿದಂತಹ ಸಂದರ್ಭದಲ್ಲಿ ತಕ್ಷಣ ಈ ನೀರನ್ನು ಕುಡಿದು ನಂತರ ಈ ಕ್ಷೇತ್ರದಲ್ಲೇ ಸಿಗುವ ಮಣ್ಣನ್ನು ನೀರಲ್ಲಿ ಬೆರೆಸಿ ಗಾಯಕ್ಕೆ ಹಚ್ಚಿದರೆ ವಿಷ ಕಾರುತ್ತದೆ ಅನ್ನುವ ನಂಬಿಕೆ ಇಂದಿಗೂ ಉಳಿದಿದೆ.

ನಾನಾ ಊರುಗಳಿಂದ ಬರುವ ಭಕ್ತರು ಈ ಆಧುನಿಕ ಯುಗದಲ್ಲೂ ಈ ನಂಬಿಕೆಯನ್ನು ಇಟ್ಟು ನೀರು ಹಾಗೂ ಮಣ್ಣನ್ನು ಕೊಂಡೊಯ್ಯಲು ಮುಗಿ ಬೀಳುತ್ತಾರೆ. ಈ ಪವಿತ್ರ ನೀರಿಗೆ ಒಂದು ವರ್ಷಗಳ ಕಾಲ ಶಕ್ತಿ ಇರುತ್ತದೆ. ಹೀಗಾಗಿ ಪ್ರತಿ ವರ್ಷವೂ ಹೊಸ ನೀರನ್ನು ಹಾಗೂ ಮಣ್ಣನ್ನು ಕೊಂಡೊಯ್ಯಲು ಭಕ್ತರು ಜಾತ್ರಾ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ.

ಇಂದಿಗೂ ಹಳ್ಳಿ ಪ್ರದೇಶದ ಜನ ವಿಷ ಜಂತುಗಳ ಕಡಿತಕ್ಕೊಳಗಾದರೆ ಈ ನೀರು ಹಾಗೂ ಮಣ್ಣಿನ ಮೊರೆ ಹೋಗುತ್ತಾರೆಯೇ ಹೊರತು ಆಸ್ಪತ್ರೆಗೆ ಹೋಗೋದಿಲ್ಲ. ಒಟ್ಟಿನಲ್ಲಿ ಈಗಿನ ಕಾಲದಲ್ಲೂ ಇಂತಹ ನಂಬಿಕೆ ಉಳಿಯಬೇಕಿದ್ದರೆ ಈ ಕ್ಷೇತ್ರದಲ್ಲಿ ಹಾಗೂ ಬಾವಿಯಲ್ಲಿ ದೈವಿ ಶಕ್ತಿ ಇದೆ ಅನ್ನೋದರಲ್ಲಿ ಸಂದೇಹವಿಲ್ಲ.

ಒಟ್ಟಿನಲ್ಲಿ ಜನರು ಶ್ರದ್ಧಾ ಭಕ್ತಿಯಿಂದ ನಂಬುವ ಈ ಪವಿತ್ರ ಮಣ್ಣಿನಲ್ಲಿ ಹೇಳಿ ಮುಗಿಯದ ಕಾರ್ಣಿಕ ಇದೆ. ಈ ಬಾವಿಯ ನೀರಿಗೆ ಜನರು ಇವತ್ತಿಗೂ ಅದೆಷ್ಟೋ ವರ್ಷದಿಂದ ಗೌರವ ನೀಡಿ ಶ್ರದ್ಧೆಯಿಂದ ಕೈ ಮುಗಿಯುತ್ತಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *